AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಾಲ್ತುಳಿತ: RCB ಮಾರ್ಕೆಟಿಂಗ್ ಹೆಡ್​ಗೆ ನಿರಾಸೆ, ಇಂದು ಕೋರ್ಟ್​​​ನಲ್ಲಿ ಏನೇನಾಯ್ತು?

ಆರ್​ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ (ಜೂ.03) ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಈ ಸಂಬಂಧ ಆರ್‌ಸಿಬಿ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ರದ್ದು ಕೋರಿ ನಿಖಿಲ್‌ ಸೋಸಲೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆಯನ್ನು ಹೈಕೋರ್ಟ್​ ನಡೆಸಿದ್ದು, ವಾದ-ಪ್ರತಿವಾದ ಇಲ್ಲಿದೆ.

ಬೆಂಗಳೂರು ಕಾಲ್ತುಳಿತ: RCB ಮಾರ್ಕೆಟಿಂಗ್ ಹೆಡ್​ಗೆ ನಿರಾಸೆ, ಇಂದು ಕೋರ್ಟ್​​​ನಲ್ಲಿ ಏನೇನಾಯ್ತು?
ಹೈಕೋರ್ಟ್​, ನಿಖಿಲ್‌ ಸೋಸಲೆ
Ramesha M
| Edited By: |

Updated on:Jun 10, 2025 | 6:03 PM

Share

ಬೆಂಗಳೂರು, ಜೂನ್​ 09: ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ (Chinnaswamy stadium Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಅನ್ನು ರದ್ದುಪಡಿಸುವಂತೆ ಆರ್‌ಸಿಬಿ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್​ನ ನ್ಯಾಯಮೂರ್ತಿ ಎಸ್​ ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ವಾದ-ಪ್ರತಿವಾದವನ್ನು ಆಲಿಸಿ, ವಿಚಾರಣೆಯನ್ನು ಮಂಗಳವಾರಕ್ಕೆ (ಜೂ. 10) ಮುಂದೂಡಿದೆ. ನಿಖಿಲ್ ಸೋಸಲೆ ಅವರ ಪರ ಹಿರಿಯ ವಕೀಲ ಸಂದೇಶ್ ಚೌಟ ಅವರು ವಾದ ಮಂಡಿಸಿದರು.

ವಕೀಲ ಸಂದೇಶ್ ಚೌಟ: ಸಿಸಿಬಿ ಮೂಲಕ ನಿಖಿಲ್ ಸೋಸಲೆಯನ್ನು ಬಂಧಿಸಲಾಗಿದೆ. ಸಿಐಡಿಗೆ ತನಿಖೆ ಹಸ್ತಾಂತರವಾದಾಗ ಸಿಸಿಬಿಗೆ ಬಂಧಿಸುವ ಅಧಿಕಾರವಿರಲಿಲ್ಲ. ಕಾರಣಗಳನ್ನು ತಿಳಿಸದೆ ಕಾನೂನುಬಾಹಿರವಾಗಿ ಬಂಧಿಸಲಾಗಿದೆ. ಮಧ್ಯಾಹ್ನ 2.20ಕ್ಕೆ ಬಂಧನದ ಕಾರಣ ತಲುಪಿಸಲಾಗಿದೆ. ಕಬ್ಬನ್​​ಪಾರ್ಕ್ ಪೊಲೀಸರು ಬಂಧಿಸಿ ಕೋರ್ಟ್​​ಗೆ ಹಾಜರುಪಡಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ: ಬೆಂಗಳೂರು ತೊರೆಯುವಾಗ ಬಂಧಿಸಲಾಗಿದೆ. 11 ಅಮಾಯಕರ ಸಾವಿನ ಬಗ್ಗೆ ಅವರು ವಾದಿಸುತ್ತಿಲ್ಲ ಎಂದು ವಾದ ಮಂಡಿಸಿದರು.

ಇದನ್ನೂ ಓದಿ
Image
Stampede: ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತ ಹೆಚ್ಚಳ
Image
Stampede: ಕಾಲ್ತುಳಿತದಲ್ಲಿ ಗಾಯಗೊಂಡವರು 65 ಮಂದಿ ಆರ್​ಸಿಬಿ ಅಭಿಮಾನಿಗಳು
Image
ತನಿಖೆಗಿಳಿದ ಸಿಐಡಿ: ಸ್ಟೇಡಿಯಂಗೆ ಭೇಟಿ, ಇಂಚಿಂಚೂ ಮಾಹಿತಿ ಸಂಗ್ರಹ
Image
ಬೆಂಗಳೂರು ಕಾಲ್ತುಳಿತ ದುರಂತದ ವರದಿ ನೀಡುವಂತೆ ಕುನ್ಹಾ ಆಯೋಗಕ್ಕೆ ಸೂಚನೆ

ವಕೀಲ ಸಂದೇಶ್ ಚೌಟ: ಸಿಸಿಬಿ ಪೊಲೀಸರು ಅಕ್ರಮವಾಗಿ ಬಂಧಿಸಿದರು. ನಂತರ ಕಬ್ಬನ್​ಪಾರ್ಕ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ: ಈ ಎಲ್ಲ ಆರೋಪಗಳು ಅರ್ಜಿಯಲ್ಲಿ ಉಲ್ಲೇಖಿಸಿಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದರು.

ವಕೀಲ ಸಂದೇಶ್ ಚೌಟ: ಆರೋಪಿಗಳನ್ನು ಬಂಧಿಸುವಂತೆ ಸಿಎಂ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ತನಿಖಾಧಿಕಾರಿಗೆ ಸಿಎಂ ಬಂಧನದ ನಿರ್ದೇಶನ ನೀಡುವಂತಿಲ್ಲ.

ಪೀಠ: ಮುಖ್ಯಮಂತ್ರಿಗೆ ಹೀಗೆ ಹೇಳುವ ಅಧಿಕಾರವಿಲ್ಲವೇ ಎಂದು ಪ್ರಶ್ನಿಸಿತು. ವಕೀಲ ಸಂದೇಶ್ ಚೌಟ: ಸುಪ್ರೀಂಕೋರ್ಟ್ ಹಲವು ಪ್ರಕರಣಗಳಲ್ಲಿ ಈ ಬಗ್ಗೆ ಸ್ಪಷ್ಟಪಡಿಸಿದೆ. ಸಿಎಂಗೆ ಈ ರೀತಿ ಬಂಧಿಸಲು ಸೂಚಿಸುವ ಅಧಿಕಾರವಿಲ್ಲ.

ವಕೀಲ ಸಂದೇಶ್ ಚೌಟ: ಆಂಧ್ರಪ್ರದೇಶದಲ್ಲಿ ದೇವಸ್ಥಾನದ ಗೋಡೆ ಕುಸಿದು ಕಾಲ್ತುಳಿತವಾಗಿತ್ತು. ನ್ಯಾಯಾಂಗ ತನಿಖೆ ನಡೆಸಿ ಕಾರಣ ತಿಳಿಯಲಾಗಿತ್ತು. ನಂತರ ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಲಾಗಿತ್ತು. ಆದರೆ ಈ ಕೇಸ್ ನಲ್ಲಿ ಘಟನೆಯ ಮರುದಿನ ಪಿಐಎಲ್ ದಾಖಲಾಯಿತು. ಪಿಐಎಲ್ ದಾಖಲಿಸಿಕೊಂಡ ಬಳಿಕ ಪೊಲೀಸರು ಎಫ್ಐಆರ್ ದಾಖಲಿಸಿದರು.

ವಕೀಲ ಸಂದೇಶ್ ಚೌಟ: ಪ್ರಕರಣದ ತನಿಖೆಯ ನಂತರ ಸಾವಿಗೆ ಕಾರಣ ತಿಳಿಯಲಿದೆ. ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಯಿತು. ಸಿಎಂ ಕಾರ್ಯದರ್ಶಿಯನ್ನು ಹುದ್ದೆಯಿಂದ ಕೈಬಿಡಲಾಯಿತು. ಆದರೆ ಅವರನ್ನು ಯಾರೂ ಬಂಧಿಸಿಲ್ಲ.

ಪೀಠ: ಸಿಎಂ ಬಂಧನದ ಸೂಚನೆ ನೀಡಿದ್ದರೇ? ಇವರನ್ನು ಬಂಧಿಸಲು ಸಿಸಿಬಿಗೆ ಅಧಿಕಾರವಿತ್ತೆ?

ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ: ದೇಶ ತೊರೆಯುತ್ತಿರುವಾಗ ಬಂಧಿಸಲಾಗಿದೆ. ಈ ಬಗ್ಗೆ ಮಾಹಿತಿ ಪಡೆದು ಲಿಖಿತ ಉತ್ತರ ನೀಡುತ್ತೇನೆ. ಹೀಗಾಗಿ ಮಧ್ಯಂತರ ಜಾಮೀನು ನೀಡದಂತೆ ಮನವಿ ಮಾಡಿದರು.

ಇದನ್ನೂ ಓದಿ: ರಾಜ್ಯ ಸರ್ಕಾರದ ಅಮಾನತು ಪ್ರಶ್ನಿಸಿ ಸಿಎಟಿಗೆ ಐಪಿಎಸ್​ ಅಧಿಕಾರಿ ಅರ್ಜಿ

ಆರ್​​ಸಿಬಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್: ಸಿಎಂ, ಡಿಸಿಎಂ ಕೂಡಾ ಆರ್​​ಸಿಬಿ ಅಭಿಮಾನಿಗಳನ್ನು ಆಹ್ವಾನಿಸಿದ್ದಾರೆ. ಗಾಯಗೊಳಿಸುವುದು, ಕೊಲೆಯ ಉದ್ದೇಶವಿಲ್ಲದೇ ವ್ಯಕ್ತಿಯ ಸಾವಿಗೆ ಕಾರಣನಾಗುವುದು ಈ ಯಾವುದೇ ಸೆಕ್ಷನ್​ಗಳು ಅನ್ವಯವಾಗುವುದಿಲ್ಲವೆಂದು ವಾದ ಮಂಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:19 pm, Mon, 9 June 25

Follow Us
Ramesha M
Ramesha M
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ