AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಾಲ್ತುಳಿತ: RCB ಮಾರ್ಕೆಟಿಂಗ್ ಹೆಡ್​ಗೆ ನಿರಾಸೆ, ಇಂದು ಕೋರ್ಟ್​​​ನಲ್ಲಿ ಏನೇನಾಯ್ತು?

ಆರ್​ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ (ಜೂ.03) ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಈ ಸಂಬಂಧ ಆರ್‌ಸಿಬಿ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ರದ್ದು ಕೋರಿ ನಿಖಿಲ್‌ ಸೋಸಲೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆಯನ್ನು ಹೈಕೋರ್ಟ್​ ನಡೆಸಿದ್ದು, ವಾದ-ಪ್ರತಿವಾದ ಇಲ್ಲಿದೆ.

ಬೆಂಗಳೂರು ಕಾಲ್ತುಳಿತ: RCB ಮಾರ್ಕೆಟಿಂಗ್ ಹೆಡ್​ಗೆ ನಿರಾಸೆ, ಇಂದು ಕೋರ್ಟ್​​​ನಲ್ಲಿ ಏನೇನಾಯ್ತು?
ಹೈಕೋರ್ಟ್​, ನಿಖಿಲ್‌ ಸೋಸಲೆ
Ramesha M
| Edited By: |

Updated on:Jun 10, 2025 | 6:03 PM

Share

ಬೆಂಗಳೂರು, ಜೂನ್​ 09: ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ (Chinnaswamy stadium Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಅನ್ನು ರದ್ದುಪಡಿಸುವಂತೆ ಆರ್‌ಸಿಬಿ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್​ನ ನ್ಯಾಯಮೂರ್ತಿ ಎಸ್​ ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ವಾದ-ಪ್ರತಿವಾದವನ್ನು ಆಲಿಸಿ, ವಿಚಾರಣೆಯನ್ನು ಮಂಗಳವಾರಕ್ಕೆ (ಜೂ. 10) ಮುಂದೂಡಿದೆ. ನಿಖಿಲ್ ಸೋಸಲೆ ಅವರ ಪರ ಹಿರಿಯ ವಕೀಲ ಸಂದೇಶ್ ಚೌಟ ಅವರು ವಾದ ಮಂಡಿಸಿದರು.

ವಕೀಲ ಸಂದೇಶ್ ಚೌಟ: ಸಿಸಿಬಿ ಮೂಲಕ ನಿಖಿಲ್ ಸೋಸಲೆಯನ್ನು ಬಂಧಿಸಲಾಗಿದೆ. ಸಿಐಡಿಗೆ ತನಿಖೆ ಹಸ್ತಾಂತರವಾದಾಗ ಸಿಸಿಬಿಗೆ ಬಂಧಿಸುವ ಅಧಿಕಾರವಿರಲಿಲ್ಲ. ಕಾರಣಗಳನ್ನು ತಿಳಿಸದೆ ಕಾನೂನುಬಾಹಿರವಾಗಿ ಬಂಧಿಸಲಾಗಿದೆ. ಮಧ್ಯಾಹ್ನ 2.20ಕ್ಕೆ ಬಂಧನದ ಕಾರಣ ತಲುಪಿಸಲಾಗಿದೆ. ಕಬ್ಬನ್​​ಪಾರ್ಕ್ ಪೊಲೀಸರು ಬಂಧಿಸಿ ಕೋರ್ಟ್​​ಗೆ ಹಾಜರುಪಡಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ: ಬೆಂಗಳೂರು ತೊರೆಯುವಾಗ ಬಂಧಿಸಲಾಗಿದೆ. 11 ಅಮಾಯಕರ ಸಾವಿನ ಬಗ್ಗೆ ಅವರು ವಾದಿಸುತ್ತಿಲ್ಲ ಎಂದು ವಾದ ಮಂಡಿಸಿದರು.

ಇದನ್ನೂ ಓದಿ
Image
Stampede: ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತ ಹೆಚ್ಚಳ
Image
Stampede: ಕಾಲ್ತುಳಿತದಲ್ಲಿ ಗಾಯಗೊಂಡವರು 65 ಮಂದಿ ಆರ್​ಸಿಬಿ ಅಭಿಮಾನಿಗಳು
Image
ತನಿಖೆಗಿಳಿದ ಸಿಐಡಿ: ಸ್ಟೇಡಿಯಂಗೆ ಭೇಟಿ, ಇಂಚಿಂಚೂ ಮಾಹಿತಿ ಸಂಗ್ರಹ
Image
ಬೆಂಗಳೂರು ಕಾಲ್ತುಳಿತ ದುರಂತದ ವರದಿ ನೀಡುವಂತೆ ಕುನ್ಹಾ ಆಯೋಗಕ್ಕೆ ಸೂಚನೆ

ವಕೀಲ ಸಂದೇಶ್ ಚೌಟ: ಸಿಸಿಬಿ ಪೊಲೀಸರು ಅಕ್ರಮವಾಗಿ ಬಂಧಿಸಿದರು. ನಂತರ ಕಬ್ಬನ್​ಪಾರ್ಕ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ: ಈ ಎಲ್ಲ ಆರೋಪಗಳು ಅರ್ಜಿಯಲ್ಲಿ ಉಲ್ಲೇಖಿಸಿಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದರು.

ವಕೀಲ ಸಂದೇಶ್ ಚೌಟ: ಆರೋಪಿಗಳನ್ನು ಬಂಧಿಸುವಂತೆ ಸಿಎಂ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ತನಿಖಾಧಿಕಾರಿಗೆ ಸಿಎಂ ಬಂಧನದ ನಿರ್ದೇಶನ ನೀಡುವಂತಿಲ್ಲ.

ಪೀಠ: ಮುಖ್ಯಮಂತ್ರಿಗೆ ಹೀಗೆ ಹೇಳುವ ಅಧಿಕಾರವಿಲ್ಲವೇ ಎಂದು ಪ್ರಶ್ನಿಸಿತು. ವಕೀಲ ಸಂದೇಶ್ ಚೌಟ: ಸುಪ್ರೀಂಕೋರ್ಟ್ ಹಲವು ಪ್ರಕರಣಗಳಲ್ಲಿ ಈ ಬಗ್ಗೆ ಸ್ಪಷ್ಟಪಡಿಸಿದೆ. ಸಿಎಂಗೆ ಈ ರೀತಿ ಬಂಧಿಸಲು ಸೂಚಿಸುವ ಅಧಿಕಾರವಿಲ್ಲ.

ವಕೀಲ ಸಂದೇಶ್ ಚೌಟ: ಆಂಧ್ರಪ್ರದೇಶದಲ್ಲಿ ದೇವಸ್ಥಾನದ ಗೋಡೆ ಕುಸಿದು ಕಾಲ್ತುಳಿತವಾಗಿತ್ತು. ನ್ಯಾಯಾಂಗ ತನಿಖೆ ನಡೆಸಿ ಕಾರಣ ತಿಳಿಯಲಾಗಿತ್ತು. ನಂತರ ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಲಾಗಿತ್ತು. ಆದರೆ ಈ ಕೇಸ್ ನಲ್ಲಿ ಘಟನೆಯ ಮರುದಿನ ಪಿಐಎಲ್ ದಾಖಲಾಯಿತು. ಪಿಐಎಲ್ ದಾಖಲಿಸಿಕೊಂಡ ಬಳಿಕ ಪೊಲೀಸರು ಎಫ್ಐಆರ್ ದಾಖಲಿಸಿದರು.

ವಕೀಲ ಸಂದೇಶ್ ಚೌಟ: ಪ್ರಕರಣದ ತನಿಖೆಯ ನಂತರ ಸಾವಿಗೆ ಕಾರಣ ತಿಳಿಯಲಿದೆ. ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಯಿತು. ಸಿಎಂ ಕಾರ್ಯದರ್ಶಿಯನ್ನು ಹುದ್ದೆಯಿಂದ ಕೈಬಿಡಲಾಯಿತು. ಆದರೆ ಅವರನ್ನು ಯಾರೂ ಬಂಧಿಸಿಲ್ಲ.

ಪೀಠ: ಸಿಎಂ ಬಂಧನದ ಸೂಚನೆ ನೀಡಿದ್ದರೇ? ಇವರನ್ನು ಬಂಧಿಸಲು ಸಿಸಿಬಿಗೆ ಅಧಿಕಾರವಿತ್ತೆ?

ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ: ದೇಶ ತೊರೆಯುತ್ತಿರುವಾಗ ಬಂಧಿಸಲಾಗಿದೆ. ಈ ಬಗ್ಗೆ ಮಾಹಿತಿ ಪಡೆದು ಲಿಖಿತ ಉತ್ತರ ನೀಡುತ್ತೇನೆ. ಹೀಗಾಗಿ ಮಧ್ಯಂತರ ಜಾಮೀನು ನೀಡದಂತೆ ಮನವಿ ಮಾಡಿದರು.

ಇದನ್ನೂ ಓದಿ: ರಾಜ್ಯ ಸರ್ಕಾರದ ಅಮಾನತು ಪ್ರಶ್ನಿಸಿ ಸಿಎಟಿಗೆ ಐಪಿಎಸ್​ ಅಧಿಕಾರಿ ಅರ್ಜಿ

ಆರ್​​ಸಿಬಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್: ಸಿಎಂ, ಡಿಸಿಎಂ ಕೂಡಾ ಆರ್​​ಸಿಬಿ ಅಭಿಮಾನಿಗಳನ್ನು ಆಹ್ವಾನಿಸಿದ್ದಾರೆ. ಗಾಯಗೊಳಿಸುವುದು, ಕೊಲೆಯ ಉದ್ದೇಶವಿಲ್ಲದೇ ವ್ಯಕ್ತಿಯ ಸಾವಿಗೆ ಕಾರಣನಾಗುವುದು ಈ ಯಾವುದೇ ಸೆಕ್ಷನ್​ಗಳು ಅನ್ವಯವಾಗುವುದಿಲ್ಲವೆಂದು ವಾದ ಮಂಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:19 pm, Mon, 9 June 25