AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಾಲ್ತುಳಿತ: ಕೋರ್ಟ್​ನಲ್ಲಿ ಸಿಐಡಿಗೆ ಹಿನ್ನೆಡೆ, ಆರೋಪಿಗಳು ಮತ್ತೆ ಪರಪ್ಪನ ಅಗ್ರಹಾರಕ್ಕೆ

Bengaluru RCB Victory Celebrations Stampede: ಬುಧವಾರ (ಜೂ.03) ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಟ್ಟಿದ್ದಾರೆ. ಈ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ, ಕೋರ್ಟ್​ ಮುಂದೆ ಹಾಜರುಪಡಿಸಿದರು. ಕೋರ್ಟ್​ ನಲ್ಲಿ ಸಿಐಡಿ ಅಧಿಕಾರಿಗಳಿಗೆ ಹಿನ್ನೆಡೆಯಾಗಿದೆ.

ಬೆಂಗಳೂರು ಕಾಲ್ತುಳಿತ: ಕೋರ್ಟ್​ನಲ್ಲಿ ಸಿಐಡಿಗೆ ಹಿನ್ನೆಡೆ, ಆರೋಪಿಗಳು ಮತ್ತೆ ಪರಪ್ಪನ ಅಗ್ರಹಾರಕ್ಕೆ
ಬೆಂಗಳೂರು ಕಾಲ್ತುಳಿತ
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ|

Updated on: Jun 10, 2025 | 6:24 PM

Share

ಬೆಂಗಳೂರು, ಜೂನ್​ 09: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ (Chinnaswamy stadium Stampede) ಆರ್​ಸಿಬಿಯ (RCB) 11 ಅಭಿಮಾನಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ (CID) ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, 1ನೇ ಎಸಿಜೆಎಂ ಕೋರ್ಟ್​​ ಮುಂದೆ ಹಾಜರುಪಡಿಸಿದರು. ಕೋರ್ಟ್​ನಲ್ಲಿ ಸಿಐಡಿ ಅಧಿಕಾರಿಗಳಿಗೆ ಹಿನ್ನೆಡೆಯಾಗಿದೆ.

ಸಿಐಡಿ ಅಧಿಕಾರಿಗಳು ಮಂಗಳವಾರ (ಜೂ.10) ಆರೋಪಿಗಳಾದ ಆರ್​ಸಿಬಿ ಮಾರ್ಕೆಟಿಂಗ್​ ಹೆಡ್​​ ನಿಖಿಲ್ ಸೋಸಲೆ, ಸುನಿಲ್‌ ಮ್ಯಾಥ್ಯೂ, ಕಿರಣ್, ಶಮಂತ್ ಅವರನ್ನು 1ನೇ ಎಸಿಜೆಎಂ ಕೋರ್ಟ್​ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ನೀಡುವಂತೆ ಅರ್ಜಿ ಸಲ್ಲಿಸಿದರು. ಈ ವೇಳೆ ಆರೋಪಿಗಳ ಪರ ವಕೀಲರು, ಹೈಕೋರ್ಟ್ ನೀಡಿದ ಆದೇಶದ ಮಾಹಿತಿಯನ್ನು 1ನೇ ಎಸಿಜೆಎಂ ಕೋರ್ಟ್​ಗೆ ನೀಡಿದರು. ಹೈಕೋರ್ಟ್​ನಲ್ಲಿ ಬಾಕಿಯಿರುವ ಅರ್ಜಿ ಇತ್ಯರ್ಥವಾಗುವವರೆಗೆ ಸಿಐಡಿ ಕಸ್ಟಡಿಗೆ ಕೇಳದಂತೆ ಹೈಕೋರ್ಟ್ ನಿರ್ದೇಶನ ನೀಡಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸಿಐಡಿ ಅಧಿಕಾರಿಗಳು ವಾಪಸ್ ಪಡೆದರು. ಆರೋಪಿಗಳನ್ನು ಸಿಐಡಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋದರು.

ಅಮಾನತು ಪ್ರಶ್ನಿಸಿ ಸಿಎಟಿಗೆ ಐಪಿಎಸ್​ ಅಧಿಕಾರಿ ಅರ್ಜಿ

ಕಾಲ್ತುಳಿತ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕರ್ತವ್ಯ ಲೋಪದ ಕಾರಣ ನೀಡಿ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಸರ್ಕಾರದ ಅಮಾನತು ಆದೇಶವನ್ನು ಪ್ರಶ್ನಿಸಿ ಐಪಿಎಸ್​ ಅಧಿಕಾರಿ ವಿಕಾಸ್ ಕುಮಾರ್ ಅವರು ಸಿಎಟಿ ಮೊರೆ ಹೋಗಿದ್ದರು. ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (CAT)ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ
Image
Stampede: ಸರ್ಕಾರದ ಅಮಾನತು ಪ್ರಶ್ನಿಸಿ ಸಿಎಟಿಗೆ ಐಪಿಎಸ್​ ಅಧಿಕಾರಿ ಅರ್ಜಿ
Image
ದಯಾನಂದ್ ಅಮಾನತು: ಭಾವನಾತ್ಮಕ ಆಕ್ರೋಶ ಪೊಲೀಸರ ನೈತಿಕ ಸ್ಥೈರ್ಯ ಹೆಚ್ಚಿಸದು
Image
ಎಡಿಜಿಪಿ ದರ್ಜೆ ಅಧಿಕಾರಿ ಸಸ್ಪೆಂಡ್, ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಮೊದಲು
Image
ಬೆಂಗಳೂರು ಕಾಲ್ತುಳಿತ ಕೇಸ್ ಸಿಐಡಿಗೆ, ಬೆಂಗಳೂರು ಕಮಿಷನರ್ ಅಮಾನತು..!

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಕಾರಣವೇನು? ಮತ್ತಷ್ಟು ಸ್ಫೋಟಕ ಅಂಶಗಳು ಬಯಲಿಗೆ

ರಾಜ್ಯ ಸರ್ಕಾರಕ್ಕೆ ಸಿಎಟಿ ನೋಟಿಸ್​

ಐಪಿಎಸ್​ ಅಧಿಕಾರಿ ವಿಕಾಸ್ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮಂಗಳವಾರ (ಜೂ.10) ವಿಚಾರಣೆ ನಡೆಸಿತು. ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹೆಚ್ಚುವರಿ ಎಜಿ ಕಾಲಾವಕಾಶ ಕೋರಿದರು. ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ, ಅರ್ಜಿ ವಿಚಾರಣೆಯನ್ನು ಜೂನ್ 12ಕ್ಕೆ ಮುಂದೂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ