
ಬೆಂಗಳೂರು, ಜೂನ್ 08: ಕಾಲ್ತುಳಿತದಿಂದ ಆರ್ಸಿಬಿಯ (RCB) 11 ಅಭಿಮಾನಿಗಳ ಸಾವು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಈ ಮಧ್ಯೆ ಮಠಾಧೀಶರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಸಲು ಸ್ವಾಮೀಜಿಗಳ ತಂಡ (Swamiji team) ಮುಂದಾಗಿದೆ. ಈಗಾಗಲೇ ಬೆಂಗಳೂರು ತಲುಪಿರುವ ಸ್ವಾಮೀಜಿಗಳ ತಂಡ ಇಂದು ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಿದೆ. ಬಳಿಕ ಆರ್ಸಿಬಿ ವಿರುದ್ಧ ಇಡಿಗೂ ದೂರು ದಾಖಲಿಸಲಿದ್ದಾರೆ.
ಕಲಬುರಗಿಯ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ, ಕುಂಬಾರ ಮಹಾಸಂಸ್ಥಾನ ಪೀಠ ಬಸವಮೂರ್ತಿ ಕುಂಬಾರ ಗುಂಡಯ್ಯಶ್ರೀ ಮತ್ತು ಛಲವಾದಿ ಜಗದ್ಗುರು ಪೀಠದ ಬಸವನಾಗಿದೇವಶ್ರೀ ಸೇರಿ ಹಲವರಿಂದ ದೂರು ನೀಡಲಾಗುತ್ತಿದೆ.
ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದು, ಆರ್ಸಿಬಿ ತಂಡಕ್ಕೆ ಅಂತಾರಾಷ್ಟ್ರೀಯ ಮಟ್ಟದ ಹಣದ ವ್ಯವಹಾರವಿದೆ. ಹೊರ ದೇಶದವರು ಈ ತಂಡದ ಮೇಲೆ ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಇ.ಡಿ ಅಧಿಕಾರಿಗಳು ತನಿಖೆ ಮಾಡಬೇಕೆಂದು ಒತ್ತಾಯಿಸಿದ್ದು, ನ್ಯಾಯಾಲಯದಲ್ಲೂ ಖಾಸಗಿ ದೂರು ದಾಖಲಿಸಲು ಶ್ರೀಗಳು ಚಿಂತನೆ ನಡೆಸಿದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ 3 ಸ್ವಯಂಪ್ರೇರಿತ ಮತ್ತು 2 ಪ್ರತ್ಯೇಕ ದೂರು ದಾಖಲಿಸಿಕೊಂಡಿದ್ದ ಮಾನವ ಹಕ್ಕು ಆಯೋಗ ಇದೀಗ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ. ಮಾನವ ಹಕ್ಕು ಶಿಫಾರಸು ಮಾಡಿರುವ ಅಂಶಗಳು ಈಕೆಳಗಿನಂತಿವೆ.
ಇದನ್ನೂ ಓದಿ: ಕೆಎಸ್ಸಿಎಗೆ ಮತ್ತೊಂದು ಸಂಕಷ್ಟ: 10 ಕೋಟಿ ರೂ ಜಾಹೀರಾತು ತೆರಿಗೆ ಬಾಕಿ, ವಸೂಲಿಗೆ ಮುಂದಾದ ಬಿಬಿಎಂಪಿ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:40 am, Sun, 8 June 25