AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ದಿನಗಳಲ್ಲಿ ಬೆಂಗಳೂರಿನ 60 ಸ್ಟಾರ್ ಹೋಟೆಲ್‌ಗಳ ಮೇಲೆ ದಾಳಿ: 1 ವರ್ಷಕ್ಕೂ ಹಳೆಯ ಮಾಂಸ ಪತ್ತೆ!

ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆ ಮೂರು ದಿನಗಳಲ್ಲಿ 60 ಸ್ಟಾರ್ ಹೋಟೆಲ್‌ಗಳ ಮೇಲೆ ದಾಳಿ ನಡೆಸಿದೆ. 1 ವರ್ಷಕ್ಕೂ ಹಳೆಯ ಮಾಂಸ, ಕೊಳೆತ ಆಹಾರ, ಸತ್ತ ಜಿರಳೆ ಇದ್ದ ಚೀಸ್, ಫಂಗಸ್ ಬಂದ ಮಶ್ರೂಮ್, ಕೊಳೆತ ತರಕಾರಿ, ಅವಧಿ ಮೀರಿದ ಹಾಲು-ಮೊಸರು ಸೇರಿದಂತೆ ಭಾರಿ ಪ್ರಮಾಣದ ಆಹಾರ ಪದಾರ್ಥ ಪತ್ತೆಯಾಗಿದೆ.

3 ದಿನಗಳಲ್ಲಿ ಬೆಂಗಳೂರಿನ 60 ಸ್ಟಾರ್ ಹೋಟೆಲ್‌ಗಳ ಮೇಲೆ ದಾಳಿ: 1 ವರ್ಷಕ್ಕೂ ಹಳೆಯ ಮಾಂಸ ಪತ್ತೆ!
ಬೆಂಗಳೂರಿನ ಸ್ಟಾರ್ ಹೋಟೆಲ್​ಗಳ ಮೇಲೆ ದಾಳಿ ಸಂದರ್ಭದ ಚಿತ್ರImage Credit source: tv9
ವಿಕಾಸ್​ ಬಿಎಂ
| Edited By: |

Updated on: Aug 11, 2026 | 7:30 AM

Share

ಮುಖ್ಯಾಂಶಗಳು

  • ಮೂರು ದಿನಗಳಲ್ಲಿ 60 ಸ್ಟಾರ್ ಹೋಟೆಲ್‌ಗಳ ತಪಾಸಣೆ
  • ಒಂದು ವರ್ಷ ಹಳೆಯ ಮಾಂಸವೂ ಪತ್ತೆ
  • 640 ಕೆಜಿ ಮಾಂಸಾಹಾರ ವಶಕ್ಕೆ

ಬೆಂಗಳೂರು, ಆಗಸ್ಟ್ 10: ಬೆಂಗಳೂರಿನ (Bengaluru) ಸ್ಟಾರ್ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಮುಂದುವರಿದಿದ್ದು, ಮೂರು ದಿನಗಳಲ್ಲಿ ಬರೋಬ್ಬರಿ 60 ಸ್ಟಾರ್ ಹೋಟೆಲ್‌ಗಳ ಮೇಲೆ ದಾಳಿ ನಡೆಸಲಾಗಿದೆ. ತಪಾಸಣೆ ವೇಳೆ ಕೊಳೆತ ಮಾಂಸ, ಅವಧಿ ಮೀರಿದ ಆಹಾರ ಪದಾರ್ಥಗಳು, ಕೊಳೆತ ತರಕಾರಿಗಳು, ಬಳಸಿದ ಅಡುಗೆ ಎಣ್ಣೆ ಸೇರಿದಂತೆ ಹಲವು ಆಹಾರ ಸುರಕ್ಷತಾ ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ. ಅಚ್ಚರಿ ಎಂದರೆ, ಒಂದು ವರ್ಷಕ್ಕೂ ಹೆಚ್ಚು ಅವಧಿ ಮೀರಿರುವ ಮಾಂಸಾಹಾರ ಉತ್ಪನ್ನಗಳೂ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

77 ಆಹಾರ ಮಾದರಿ ಸಂಗ್ರಹ

ದಾಳಿ ವೇಳೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಒಟ್ಟು 77 ಆಹಾರ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ತಪಾಸಣೆಯಲ್ಲಿ 640 ಕೆ.ಜಿ. ಚಿಕನ್, ಮಟನ್ ಮತ್ತು ಮೀನು, 276 ಕೆ.ಜಿ. ಕೊಳೆತ ತರಕಾರಿ, 45 ಲೀಟರ್ ಅವಧಿ ಮೀರಿದ ಹಾಲು ಮತ್ತು ಮೊಸರು, 12 ಕೆ.ಜಿ. ಬೇಕರಿ ಉತ್ಪನ್ನಗಳು ಹಾಗೂ 67 ಕೆ.ಜಿ. ಅವಧಿ ಮೀರಿದ ಮತ್ತು ತಪ್ಪು ಲೇಬಲಿಂಗ್ ಹೊಂದಿದ್ದ ಆಹಾರ ಪದಾರ್ಥಗಳನ್ನು ಜಪ್ತಿ ಮಾಡಲಾಗಿದೆ.

ಇದರ ಜೊತೆಗೆ 49 ಲೀಟರ್ ಬಳಸಿದ ಹಾಗೂ ನಿಯಮಬಾಹಿರ ಅಡುಗೆ ಎಣ್ಣೆ ಕೂಡ ವಶಕ್ಕೆ ಪಡೆಯಲಾಗಿದೆ. ಎಕ್ಸ್‌ಪೈರಿ ದಿನಾಂಕವಿಲ್ಲದ ಮತ್ತು ಒಂದು ವರ್ಷಕ್ಕೂ ಹೆಚ್ಚು ಅವಧಿ ಮೀರಿರುವ ಮಾಂಸಾಹಾರ ಉತ್ಪನ್ನಗಳು ಪತ್ತೆಯಾಗಿರುವುದು ಅಧಿಕಾರಿಗಳಿಗೂ ಆಘಾತ ಮೂಡಿಸಿದೆ. ಅವಧಿ ಮೀರಿದ ಆಹಾರವನ್ನು ಮತ್ತೆ ಪ್ಯಾಕ್ ಮಾಡಿ ಬಳಸಲು ಸಿದ್ಧಪಡಿಸಿರುವುದು ಕೂಡ ತಪಾಸಣೆ ವೇಳೆ ಬೆಳಕಿಗೆ ಬಂದಿದೆ.

ಹೋಟೆಲ್‌ಗಳಲ್ಲಿ ಏನೆಲ್ಲ ಪತ್ತೆ?

ಯುಬಿ ಸಿಟಿ, ಎಂಜಿ ರೋಡ್, ಬ್ರಿಗೇಡ್ ರೋಡ್ ಸೇರಿದಂತೆ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಹೋಟೆಲ್‌ಗಳು ಹಾಗೂ ರೆಸ್ಟೋರೆಂಟ್‌ಗಳ ಅಡುಗೆಮನೆ ಮತ್ತು ಆಹಾರ ಸಂಗ್ರಹಣಾ ಸ್ಥಳಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಅಲ್ಲಿ ಪತ್ತೆಯಾಗಿರುವ ಕಳಪೆ ಆಹಾರವಸ್ತುಗಳ ವಿವರ ಇಲ್ಲಿದೆ;

ಹೋಟೆಲ್ ಸ್ಕೈ, ಯುಬಿ ಸಿಟಿ

  • 45 ಕೆ.ಜಿ. ಕೊಳೆತ ಕೋಳಿ ಮತ್ತು ಬೀಫ್
  • 6 ಕೆ.ಜಿ. ವೆಜಿಟೇಬಲ್ ಕಟ್ಲೆಟ್
  • 15 ಲೀಟರ್ ಬಳಸಿದ ಅಡುಗೆ ಎಣ್ಣೆ.

ರಾಯಲ್ ಚೈನ್ ಹೋಟೆಲ್

  • 50 ಕೆ.ಜಿ. ಡಕ್ ಮಾಂಸ ವಶ
  • 5 ಕೆ.ಜಿ. ಮೀನು ವಶಕ್ಕೆ

ಮದ್ರಾಸ್ ಕಿಚನ್

  • 5 ಕೆ.ಜಿ. ಹಸಿ ಬಟಾಣಿ ಜಪ್ತಿ

ಟೆಸ್ಕಾನ್ ಹೋಟೆಲ್

  • 5 ಕೆ.ಜಿ. ಕಳಪೆ ಮಶ್ರೂಮ್ ಪತ್ತೆ, ಆಹಾರ ಸುರಕ್ಷತೆ ಕುರಿತು ಪರಿಶೀಲನೆ

ಸೆಂಚೆಜ್ ಹೋಟೆಲ್

  • 3 ಕೆ.ಜಿ. ಮೀನು
  • 7 ಕೆ.ಜಿ. ಕೇಕ್
  • ಆಲೂಗಡ್ಡೆ ಸೇರಿದಂತೆ ಇತರೆ ಆಹಾರ ಪದಾರ್ಥಗಳ ಜಪ್ತಿ

ಚೀಸ್‌ನಲ್ಲಿ ಸತ್ತ ಜಿರಳೆ, ಮಶ್ರೂಮ್‌ಗೆ ಫಂಗಸ್!

ತಪಾಸಣೆ ವೇಳೆ ಕೆಲವು ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ಸ್ಥಿತಿ ಅಧಿಕಾರಿಗಳಿಗೆ ಅಚ್ಚರಿ ಮೂಡಿಸಿದೆ. ಚೀಸ್ ಪ್ಯಾಕೆಟ್‌ನಲ್ಲಿ ಸತ್ತ ಜಿರಳೆ, ಮಶ್ರೂಮ್‌ನಲ್ಲಿ ಫಂಗಸ್ ಹಾಗೂ ಬೇಬಿ ಕಾರ್ನ್‌ನಲ್ಲಿ ಕೀಟಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫ್ರೀಜರ್‌ಗಳಲ್ಲಿ ಸೂಕ್ತ ರೀತಿಯಲ್ಲಿ ಸಂಗ್ರಹಿಸದ ಮಾಂಸಾಹಾರ ಪದಾರ್ಥಗಳೂ ಪತ್ತೆಯಾಗಿವೆ.

ಯುಬಿ ಸಿಟಿಯಲ್ಲಿರುವ ಹೋಟೆಲ್ ಸ್ಕೈನಲ್ಲಿ ದೊಡ್ಡ ಪ್ರಮಾಣದ ಮಾಂಸ ಮತ್ತು ಇತರೆ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಅಡುಗೆಮನೆಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ.

ಮ್ಯಾಕ್‌ಡೊನಾಲ್ಡ್ಸ್ ಸೇರಿ ಇತರೆ ಸಂಸ್ಥೆಗಳಲ್ಲೂ ತಪಾಸಣೆ

ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಸ್ಟಾರ್ ಹೋಟೆಲ್‌ಗಳಿಗೆ ಮಾತ್ರ ಸೀಮಿತವಾಗಿಲ್ಲ. KFC, ಮ್ಯಾಕ್‌ಡೊನಾಲ್ಡ್ಸ್ ಮತ್ತು ಸಬ್‌ವೇ ಸೇರಿದಂತೆ ಹಲವು ಆಹಾರ ಮಳಿಗೆಗಳಲ್ಲೂ ತಪಾಸಣೆ ಮುಂದುವರಿದಿದೆ. ಆಹಾರ ಸಂಗ್ರಹಿಸುವ ಗೋದಾಮುಗಳಲ್ಲೂ ನಿಯಮಗಳ ಪಾಲನೆ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

ಮ್ಯಾಕ್‌ಡೊನಾಲ್ಡ್ಸ್‌ನಲ್ಲಿ ಅಡುಗೆ ಎಣ್ಣೆ ಶುದ್ಧೀಕರಿಸಲು ಮೆಗ್ನೀಸಿಯಂ ಸಲ್ಫೈಟ್ ಬಳಕೆ

ಬ್ರಿಗೇಡ್ ರಸ್ತೆಯಲ್ಲಿರುವ ಮ್ಯಾಕ್‌ಡೊನಾಲ್ಡ್ಸ್‌ನಲ್ಲಿ ಬಳಸಿದ ಅಡುಗೆ ಎಣ್ಣೆಯನ್ನು ಶುದ್ಧೀಕರಿಸಲು ಮೆಗ್ನೀಸಿಯಂ ಸಲ್ಫೈಟ್ ಬಳಸಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಆಹಾರ ಸುರಕ್ಷತಾ ನಿಯಮಗಳ ದೃಷ್ಟಿಯಿಂದ ಗಂಭೀರ ವಿಚಾರವಾಗಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಯುಬಿ ಸಿಟಿ ಫೈವ್ ಸ್ಟಾರ್ ಹೋಟೆಲ್‌ಗಳ ಮೇಲೆ ದಾಳಿ: 45 ಕೆಜಿ ಕೊಳೆತ ಮಾಂಸ, 15 ಲೀ. ಕರಿದ ಅಡುಗೆ ಎಣ್ಣೆ ಪತ್ತೆ

ಸದ್ಯ ಜಪ್ತಿ ಮಾಡಿರುವ ಆಹಾರ ಪದಾರ್ಥಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಲ್ಯಾಬ್ ವರದಿ ಬಂದ ಬಳಿಕ ನಿಯಮ ಉಲ್ಲಂಘಿಸಿರುವ ಹೋಟೆಲ್‌ಗಳು ಮತ್ತು ಆಹಾರ ಸಂಸ್ಥೆಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ