AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಕಂಪನಿಗಳಿಗೆ ಕೆ-ರೈಡ್ ಸೆಡ್ಡು: ಸಬ್ ಅರ್ಬನ್ ರೈಲ್ವೆ ಕೋಚ್ ನಿರ್ಮಾಣಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್

ಬೆಂಗಳೂರಿಗರ ಹಲವು ವರ್ಷಗಳ ಕನಸನ್ನು ನನಸು ಮಾಡಲು ಟೆಂಡರ್ ಕರೆಯಲಾಗಿತ್ತು. ಟೆಂಡರ್​​ನಲ್ಲಿ ಯಾವುದೇ ಕಂಪನಿಗಳು ಭಾಗಿಯಾಗದ ಹಿನ್ನೆಲೆಯಲ್ಲಿ ಕೆ- ರೈಡ್ ಕಂಪನಿಯೇ ರೈಲ್ವೆ ಕೋಚ್​ಗಳನ್ನು ನಿರ್ಮಾಣ ಮಾಡಲು ಸಿದ್ಧತೆ ಮಾಡಿಕೊಂಡಿದೆ. ರಾಜ್ಯ ‌ಸರ್ಕಾರವು ಅನುದಾನ ಬಿಡುಗಡೆ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ‌.

ಖಾಸಗಿ ಕಂಪನಿಗಳಿಗೆ ಕೆ-ರೈಡ್ ಸೆಡ್ಡು: ಸಬ್ ಅರ್ಬನ್ ರೈಲ್ವೆ ಕೋಚ್ ನಿರ್ಮಾಣಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Dec 02, 2024 | 7:28 AM

Share

ಬೆಂಗಳೂರು, ಡಿಸೆಂಬರ್ 2: ಬೆಂಗಳೂರು ಉಪನಗರ ರೈಲು ಯೋಜನೆಯಡಿ ರೈಲು ಬೋಗಿಗಳನ್ನು ನಿರ್ಮಾಣ ಮಾಡಲು ಟೆಂಡರ್ ಕರೆಯಲಾಗಿತ್ತು. ಆದರೆ, ಯಾವುದೇ ಕಂಪನಿಗಳು ಮುಂದೆ ಬಾರದ ಹಿನ್ನೆಲೆಯಲ್ಲಿ, ಕೆ- ರೈಡ್ (ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ) ತಾನೇ ರೈಲ್ವೆ ಕೋಚ್​ಗಳನ್ನು ನಿರ್ಮಾಣ ಮಾಡಲು ತಿರ್ಮಾನ ಮಾಡಿದೆ. 306 ಕೋಚ್​ಗಳನ್ನು ಕೆ- ರೈಡ್ ನಿರ್ಮಾಣ ಮಾಡಲು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. 2135 ಕೋಟಿ ರೂಪಾಯಿ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ಸಬ್ ಅರ್ಬನ್ ರೈಲ್ವೆ ಯೋಜನೆಯ ಎರಡನೇ ಕಾರಿಡಾರ್ ಅನ್ನು 2026ರ ಡಿಸೆಂಬರ್ ಹಾಗೂ 4ನೇ ಕಾರಿಡಾರ್‌ ಅನ್ನು 2027ರ ಡಿಸೆಂಬರ್ ವೇಳೆಗೆ ಕಾರ್ಯಾಚರಣೆ ಪ್ರಾರಂಭಿಸಲು ನಿರ್ಧರಿಸಲಾಗಿತ್ತು.

ರೈಲ್ವೆ ಕೋಚ್‌ಗಳ ನಿರ್ಮಾಣಕ್ಕೆ ಆಹ್ವಾನಿಸಿದ್ದ ಟೆಂಡರ್‌ನಲ್ಲಿ, ಯಾವುದೇ ಕಂಪನಿಗಳು ಭಾಗವಹಿಸಿಲ್ಲ. ಹೀಗಾಗಿ 4,300 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ತಲಾ ಶೇ 50 ರಷ್ಟು ಅನುದಾನ ನೀಡಿ ಕೆ-ರೈಡ್ ಮೂಲಕವೇ ಕೋಚ್​ಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಸಚಿವ ಹೆಚ್​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರದಿಂದ 2,135 ಕೋಟಿ ರೂ. ಅನುದಾನ

ಯೋಜನೆಯಡಿ ಮುಂದಿನ ಐದು ವರ್ಷಗಳಲ್ಲಿ 406 ಕೋಚ್‌ಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 2,135 ಕೋಟಿ ರೂಪಾಯಿಗಳನ್ನು ರೈಲು ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಒದಗಿಸಲು ಸರ್ಕಾರ ಒಪ್ಪಿಗೆ ನೀಡಿದೆ‌. ಮುಂದಿನ ಹಂತದಲ್ಲಿ ಕೇಂದ್ರ ಸರ್ಕಾರಕ್ಕೆ ಅನುದಾನ ಮತ್ತು ಅನುಮತಿಗಾಗಿ ಪತ್ರ ಬರೆಯಲಾಗುತ್ತದೆ. ಕೇಂದ್ರದಿಂದ ಒಪ್ಪಿಗೆ ಸಿಕ್ಕಿದ ಕೂಡಲೇ ರೈಲ್ವೆ ಕೋಚ್​ಗಳ ನಿರ್ಮಾಣ ಕಾರ್ಯ ಶುರುವಾಗಲಿದೆ.

ಏತನ್ಮಧ್ಯೆ, ಕೋಚ್ ನಿರ್ಮಾಣ ಬಗ್ಗೆ ಟ್ರಾನ್ಸ್‌ಪೋರ್ಟ್‌ ತಜ್ಞ ಪ್ರೊ. ಶ್ರೀಹರಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದವರು ರೀ ಟೆಂಡರ್ ಮಾಡಬೇಕು. ಯಾಕೆ ಯಾವುದೇ ಕಂಪನಿಗಳು ಟೆಂಡರ್​ನಲ್ಲಿ ಭಾಗಿಯಾಗಿಲ್ಲ ಎಂದು ಪರಿಶೀಲಿಸಬೇಕು. ಬೆಂಗಳೂರಿನಲ್ಲಿರುವ ಕೋಚ್ ತಯಾರಿಕಾ ಕಂಪನಿಗಳು ಟೆಂಡರ್​ನಲ್ಲಿ ಭಾಗಿಯಾಗಿಲ್ಲ ಅಂದರೆ ಏನರ್ಥ? ನಾವು ಕೋಚ್ ನಿರ್ಮಾಣ ಮಾಡುತ್ತೇವೆ ಎನ್ನುವುದು ಸರಿಯಲ್ಲ. ಇತಿಹಾಸ ಇರಬೇಕು. ಹಿಂದೆ ತಯಾರು ಮಾಡಿರುವ ಅನುಭವ ಇರಬೇಕು ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಸಬ್ ಅರ್ಬನ್ ರೈಲು ಕಾರಿಡಾರ್​ಗಾಗಿ 2,000 ಮರಗಳಿಗೆ ಕುತ್ತು, ಸಾರ್ವಜನಿಕರ ಅಭಿಪ್ರಾಯ ಕೇಳಿದ BBMP

ಒಟ್ಟಿನಲ್ಲಿ ಸಬ್ ಅರ್ಬನ್ ರೈಲುಗಳು ನಗರದಲ್ಲಿ ಆದಷ್ಟು ಬೇಗ‌ ಸಂಚಾರ ಮಾಡಬೇಕು ಎಂಬ ಕನಸು ನಗರದ ಪ್ರಯಾಣಿಕರಿಗಿದೆ. ಆದರೆ, ಕೋಚ್ ನಿರ್ಮಾಣಕ್ಕೆ ಕರೆದಿದ್ದ ಟೆಂಡರ್​​ನಲ್ಲಿ ಯಾವುದೇ ಕಂಪನಿಗಳು ಭಾಗಿಯಾಗದ್ದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ರಾಜ್ಯ ಸರ್ಕಾರದ ಗ್ರೀನ್ ಸಿಗ್ನಲ್ ಬಳಿಕವಾದರೂ ತ್ವರಿತಗತಿಯಲ್ಲಿ ಕೆಲಸ ಕಾರ್ಯಗಳು ನಡೆದು ಉಪನಗರ ರೈಲುಗಳು ಸಂಚಾರ ಮಾಡಬಹುದು ಎಂಬ ಆಶಾಭಾವನೆ ಇದೀಗ ಮೂಡಿರುವುದು ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ