AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಕನಸಿನ ಯೋಜನೆಗೆ ಸಿಕ್ತು ವೇಗ: 153 ಮೆಟ್ರೋ ಕೋಚ್‌ ಖರೀದಿಗೆ ಐಸಿಎಫ್ ಜೊತೆ ಒಪ್ಪಂದ

ಕೆ-ರೈಡ್​ ಸಂಸ್ಥೆ ಕೋಟ್ಯಂತರ ರೂ ವೆಚ್ಚದಲ್ಲಿ 153 ಹವಾನಿಯಂತ್ರಿತ ಮೆಟ್ರೋ ಮಾದರಿಯ ಬೋಗಿಗಳನ್ನು ಪೂರೈಸಲು ಚೆನ್ನೈನ ಐಸಿಎಫ್​ನಿಂದ ಖರೀದಿಸಲು ಒಪ್ಪಂದ ಮಾಡಿಕೊಂಡಿದೆ. ಆ ಮೂಲಕ ಬೆಂಗಳೂರಿನ ಕನಸಿನ ಯೋಜನೆಯಾದ ಉಪನಗರ ರೈಲು ಯೋಜನೆಗೆ ಇದೀಗ ವೇಗ ಸಿಕ್ಕಂತಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಬೆಂಗಳೂರಿನ ಕನಸಿನ ಯೋಜನೆಗೆ ಸಿಕ್ತು ವೇಗ: 153 ಮೆಟ್ರೋ ಕೋಚ್‌ ಖರೀದಿಗೆ ಐಸಿಎಫ್ ಜೊತೆ ಒಪ್ಪಂದ
ಪ್ರಾತಿನಿಧಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on:May 11, 2026 | 6:52 PM

Share

ಬೆಂಗಳೂರು, ಮೇ 11: ಬೆಂಗಳೂರಿನ (Bangaluru) ಮಹತ್ವಾಕಾಂಕ್ಷಿ ಉಪನಗರ ರೈಲು ಯೋಜನೆಗೆ (Suburban Rail Project) ಮಹತ್ವದ ವೇಗ ದೊರೆತಿದ್ದು, 153 ಹವಾನಿಯಂತ್ರಿತ ಮೆಟ್ರೋ ಮಾದರಿಯ ಬೋಗಿಗಳನ್ನು ಪೂರೈಸಲು ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಜೊತೆ ಕರ್ನಾಟಕ ರೈಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಎಂಟರ್‌ಪ್ರೈಸ್ (ಕೆ-ರೈಡ್) 1,513.75 ಕೋಟಿ ರೂ ವೆಚ್ಚದ ಒಪ್ಪಂದ ಮಾಡಿಕೊಂಡಿದೆ.

ಮುಖ್ಯಾಂಶಗಳು

  • 1,513.75 ಕೋಟಿ ರೂ ಬೃಹತ್ ಕಾರ್ಯಾದೇಶ
  • 153 ಹವಾನಿಯಂತ್ರಿತ ಬ್ರಾಡ್-ಗೇಜ್ ಮೆಟ್ರೋ ಮಾದರಿಯ ಬೋಗಿಗಳು ಒದಗಿಸಲು ಒಪ್ಪಂದ
  • ಮುಂದಿನ 18 ತಿಂಗಳೊಳಗೆ ಬೋಗಿಗಳ ಪೂರೈಕೆಗೆ ಗಡುವು

ಇದನ್ನೂ ಓದಿ: ಮಲ್ಟಿ ಟ್ರ್ಯಾಕಿಂಗ್ ರೈಲ್ವೆ ಯೋಜನೆಗೆ ಕೇಂದ್ರ ಒಪ್ಪಿಗೆ: ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಬಂಪರ್ ಕೊಡುಗೆ

ಒಟ್ಟು 1,513.75 ಕೋಟಿ ರೂ ಮೊತ್ತದ ಕಾರ್ಯಾದೇಶವನ್ನು ಮೇ 6ರಂದು ಐಸಿಎಫ್‌ಗೆ ನೀಡಲಾಗಿದೆ. ಯೋಜನೆಯ ಕಾರಿಡಾರ್-2 ಮತ್ತು ಕಾರಿಡಾರ್-4ಕ್ಕೆ ಬ್ರಾಡ್-ಗೇಜ್ ಮೆಟ್ರೋ ಮಾದರಿಯ 153 ಬೋಗಿಗಳನ್ನು ಪೂರೈಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ.

ಒಪ್ಪಂದದ ಪ್ರಕಾರ ಮುಂದಿನ 18 ತಿಂಗಳೊಳಗೆ ಐಸಿಎಫ್ ಸಂಸ್ಥೆ ಕಡ್ಡಾಯವಾಗಿ ಬೋಗಿಗಳ ಪೂರೈಕೆ ಆರಂಭಿಸಬೇಕಿದೆ. ಏಕೆಂದರೆ ಕಾರಿಡಾರ್-2 ವ್ಯಾಪ್ತಿಯ ಚಿಕ್ಕಬಾಣಾವರ ಟು ಯಶವಂತಪುರ ಮಾರ್ಗವನ್ನು ನಿಗದಿತ ಸಮಯದಲ್ಲಿಯೇ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ. ಶೀಘ್ರದಲ್ಲೇ ಉಭಯ ಸಂಸ್ಥೆಗಳ ನಡುವೆ ಅಧಿಕೃತ ಒಡಂಬಡಿಕೆಗೆ (ಎಂಒಯು) ಸಹಿ ಬೀಳಲಿದೆ.

ಕಾರ್ಯಾದೇಶದ ಪ್ರಮುಖ ಅಂಶಗಳು

ಚೆನ್ನೈನ ಐಸಿಎಫ್‌ಗೆ ನೀಡಲಾದ ಈ ಸಮಗ್ರ ಗುತ್ತಿಗೆಯು ಕೇವಲ ಬೋಗಿಗಳ ನಿರ್ಮಾಣವನ್ನಷ್ಟೇ ಅಲ್ಲದೆ, ಈ ಕೆಳಗಿನ ಜವಾಬ್ದಾರಿಗಳನ್ನು ಒಳಗೊಂಡಿದೆ.

  • ರೈಲು ಬೋಗಿಗಳ ವಿನ್ಯಾಸ ಮತ್ತು ಸಂಪೂರ್ಣ ಉತ್ಪಾದನೆ
  • ಗುಣಮಟ್ಟ ಪರಿಶೀಲನೆ, ಜೋಡಣೆ, ಪರೀಕ್ಷೆ ಹಾಗೂ ಕಾರ್ಯಾರಂಭ
  • ಆರ್‌ಡಿಎಸ್‌ಒನಿಂದ ಅಗತ್ಯವಿರುವ ಶಾಸನಬದ್ಧ ಅನುಮೋದನೆಗಳನ್ನು ಪಡೆಯುವುದು
  • ಸಿಗ್ನಲಿಂಗ್, ವಿದ್ಯುತ್ ಪೂರೈಕೆ, ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ ಗುತ್ತಿಗೆಗಳೊಂದಿಗೆ ಸುಗಮ ಸಮನ್ವಯ
  • ಕಾರಿಡಾರ್‌ಗಳ ಯಶಸ್ವಿ ಕಾರ್ಯಾಚರಣೆಗೆ ಕಡ್ಡಾಯವಾಗಿರುವ ವಿಶ್ವಾಸಾರ್ಹತೆ, ಲಭ್ಯತೆ, ನಿರ್ವಹಣೆ ಮತ್ತು ಸುರಕ್ಷತಾ ಮಾನದಂಡಗಳ ಪೂರೈಕೆ ಮಾಡುವುದು

ಇದನ್ನೂ ಓದಿ: ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ: ರಾಜ್ಯಾದ್ಯಂತ ರೈಲು ಸಂಚಾರ ಬಂದ್ ಮಾಡುವ ಎಚ್ಚರಿಕೆ ನೀಡಿದ ಕರವೇ

ಈ ಬೃಹತ್ ಕಾರ್ಯಾದೇಶದಿಂದ ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿಗೆ ಮತ್ತಷ್ಟು ವೇಗ ದೊರೆಯುವ ನಿರೀಕ್ಷೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:50 pm, Mon, 11 May 26

Follow Us
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?