AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಮುಂಬೈ, ಕೋಲ್ಕತ್ತಾಗೆ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ

Summer Special Trains: ಭಾರತೀಯ ರೈಲ್ವೆ ಬೆಂಗಳೂರಿನಿಂದ ಮುಂಬೈ ಮತ್ತು ಕೋಲ್ಕತ್ತಾಕ್ಕೆ ಬೇಸಿಗೆ ವಿಶೇಷ ರೈಲುಗಳನ್ನು ಘೋಷಿಸಿದೆ. ಬೇಸಿಗೆ ರಜೆ ಮತ್ತು ಪ್ರಯಾಣಿಕರ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಈ ರೈಲುಗಳ ವ್ಯವಸ್ಥೆ ಮಾಡಲಾಗಿದೆ. ಮುಂಬೈ ಮತ್ತು ಕೋಲ್ಕತ್ತಾ ರೈಲುಗಳ ವೇಳಾಪಟ್ಟಿ ಮತ್ತು ನಿಲುಗಡೆಗಳ ಪಟ್ಟಿಯನ್ನು ರೈಲ್ವೆ ಇಲಾಖೆ ಪ್ರಕಟಿಸಿದ್ದು, ವಿವರಗಳು ಇಲ್ಲಿವೆ.

ಬೆಂಗಳೂರಿನಿಂದ ಮುಂಬೈ, ಕೋಲ್ಕತ್ತಾಗೆ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ
ಸಾಂದರ್ಭಿಕ ಚಿತ್ರImage Credit source: Getty Images
Follow us
Ganapathi Sharma
|

Updated on:Mar 28, 2025 | 9:55 AM

ಬೆಂಗಳೂರು, ಮಾರ್ಚ್ 28: ರೈಲ್ವೆಯು (Indian Railways) ಬೆಂಗಳೂರಿನಿಂದ (Bengaluru) ಮುಂಬೈ ಮತ್ತು ಸಾಂತ್ರಗಚಿ (ಕೋಲ್ಕತ್ತಾ) ಗೆ ಬೇಸಿಗೆ ವಿಶೇಷ ರೈಲುಗಳ (Summer Special Trains) ಕಾರ್ಯಾಚರಣೆ ನಡೆಸಲಿದೆ. ಬೇಸಿಗೆ ರಜೆ, ಪ್ರಯಾಣಿಕರ ದಟ್ಟಣೆ, ಸುಗಮ ಸಂಚಾರವನ್ನು ದೃಷ್ಟಿಯಿಲ್ಲಿಟ್ಟುಕೊಂಡು ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಅಲ್ಲದೆ, ವಿಶೇಷ ರೈಲುಗಳ ವೇಳಾಪಟ್ಟಿ ಮತ್ತು ನಿಲುಗಡೆ ಇತ್ಯಾದಿ ವಿವರಗಳನ್ನು ಪ್ರಕಟಿಸಿದೆ.

ಬೆಂಗಳೂರು ಮುಂಬೈ ವಿಶೇಷ ರೈಲು ವೇಳಾಪಟ್ಟಿ

ರೈಲು ಸಂಖ್ಯೆ 01013 ಸಿಎಸ್​ಎಂಟಿ ಮುಂಬೈ- ಎಸ್​ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 5, 12, 19, 26, ಮೇ 3, 10, 17, 24, 31 ಮತ್ತು ಜೂನ್ 7, 14, 21, 28 ರಂದು ಬೆಳಿಗ್ಗೆ 12.30 ಕ್ಕೆ ಸಿಎಸ್​ಎಂಟಿ ಮುಂಬೈನಿಂದ ಹೊರಟು ಅದೇ ದಿನ ರಾತ್ರಿ 11.55 ಕ್ಕೆ ಎಸ್​ಎಂವಿಟಿ ಬೆಂಗಳೂರಿಗೆ ಆಗಮಿಸಲಿದೆ.

ರೈಲು ಸಂಖ್ಯೆ 01014 ಎಸ್​ಎಂವಿಟಿ ಬೆಂಗಳೂರು-ಸಿಎಸ್​ಎಂಟಿ ಮುಂಬೈ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 6, 13, 20, 27, ಮೇ 4, 11, 18, 25 ಮತ್ತು ಜೂನ್ 1, 8, 15, 22, 29 ರಂದು ಬೆಳಿಗ್ಗೆ 4.40 ಕ್ಕೆ ಎಸ್​ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 4.05 ಕ್ಕೆ ಸಿಎಸ್​ಎಂಟಿ ಮುಂಬೈ ತಲುಪಲಿದೆ.

ಇದನ್ನೂ ಓದಿ
Image
ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ದೇವಸ್ಥಾನಗಳ ಪ್ರಸಾದ!
Image
ವಿದ್ಯುತ್ ದರ ಏರಿಕೆಯಿಂದ ಕೈಗಾರಿಕೆಗಳಿಗೆ ಶಾಕ್: ಸಿಬ್ಬಂದಿಗೆ ಕೊಕ್
Image
ಬೆಂಗಳೂರು: ಫ್ಲೈಓವರ್​ಗಳಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ
Image
ಆಲೂಗಡ್ಡೆ ದರ ತೀವ್ರ ಕುಸಿತ: ಕೋಲ್ಡ್ ಸ್ಟೋರೇಜ್​ಗೆ ಭಾರಿ ಡಿಮ್ಯಾಂಡ್

ಬೆಂಗಳೂರು ಮುಂಬೈ ವಿಶೇಷ ರೈಲಿಗೆ ಎಲ್ಲೆಲ್ಲಿ ನಿಲುಗಡೆ?

ವಿಶೇಷ ರೈಲುಗಳು ದಾದರ್, ಥಾಣೆ, ಕಲ್ಯಾಣ್, ಲೋನಾವಾಲಾ, ಪುಣೆ, ಸತಾರಾ, ಕರಾಡ್, ಸಾಂಗ್ಲಿ, ಮೀರಜ್, ಕುಡಚಿ, ರಾಯಬಾಗ, ಘಟಪ್ರಭಾ, ಬೆಳಗಾವಿ, ಲೋಂಡಾ, ಧಾರವಾಡ, ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರಿನಲ್ಲಿ ನಿಲುಗಡೆಯಾಗಲಿವೆ.

ಸಂತ್ರಗಚಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ವೇಳಾಪಟ್ಟಿ

ರೈಲು ಸಂಖ್ಯೆ 02863 ಸಂತ್ರಗಚಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 3, 10, 17 ಮತ್ತು 24 ರಂದು ಮಧ್ಯಾಹ್ನ 12.50 ಕ್ಕೆ ಸಂತ್ರಗಚಿಯಿಂದ ಹೊರಟು ಶನಿವಾರಗಳಂದು ಬೆಳಿಗ್ಗೆ 12.55 ಕ್ಕೆ ಯಶವಂತಪುರ ತಲುಪಲಿದೆ. ರೈಲು ಸಂಖ್ಯೆ 02864 ಯಶವಂತಪುರ-ಸಂತ್ರಗಚಿ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 5, 12, 19 ಮತ್ತು 26 ರಂದು ಬೆಳಿಗ್ಗೆ 4.30 ಕ್ಕೆ ಯಶವಂತಪುರದಿಂದ ಹೊರಟು ಭಾನುವಾರಗಳಂದು ಮಧ್ಯಾಹ್ನ 1.25 ಕ್ಕೆ ಸಂತ್ರಗಚಿ ತಲುಪಲಿದೆ.

ಇದನ್ನೂ ಓದಿ: ಯುಗಾದಿ ಹಬ್ಬ: ಬೆಂಗಳೂರು, ಮೈಸೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು

ವಿಶೇಷ ರೈಲುಗಳು ಖರಾಗ್‌ಪುರ, ಬಾಳೇಶ್ವರ, ಭದ್ರಕ್, ಕಟಕ್, ಭುವನೇಶ್ವರ, ಖುರ್ದಾ ರಸ್ತೆ, ಬ್ರಹ್ಮಪುರ, ಪಲಾಸ, ಶ್ರೀಕಾಕುಳಂ ರಸ್ತೆ, ವಿಜಯನಗರ, ಕೊತ್ತವಲಸ, ಪೆಂಡುರ್ಟಿ, ಸಿಂಹಾಚಲಂ ಉತ್ತರ, ದುವ್ವಾಡ, ರಾಜಮಂಡ್ರಿ, ವಿಜಯವಾಡ, ಗುಂಟೂರು, ನರಸರಾವ್‌ಪೇಟೆ, ಗುಂಟೂರು, ನನಸರಾವ್‌ಪೇಟೆ, ಗುಂಟಲ್‌ ರಸ್ತೆ, ಗುಂಡಲ್‌ ರಸ್ತೆ, ಗುಂಡಲ್‌ ರಸ್ತೆ, ಮರ್ಕಾಪುರ, ಅನಂತಪುರ, ಧರ್ಮಾವರಂ ಮತ್ತು ಹಿಂದೂಪುರಗಳಲ್ಲಿ ನಿಲುಗಡೆ ಹೊಂದಿರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 am, Fri, 28 March 25

ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್