AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಶಂಕಿತ ಉಗ್ರರ ಬಂಧನ ಪ್ರಕರಣ: ಪ್ರಾಥಮಿಕ ತನಿಖಾ ವರದಿಯನ್ನ ಕೇಂದ್ರಕ್ಕೆ ಕಳುಹಿಸಿದ ಸಿಸಿಬಿ

ಬೆಂಗಳೂರಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಾಥಮಿಕ ತನಿಖೆ ವರದಿಯನ್ನು ಸಿಸಿಬಿ ಪೊಲೀಸರು ಕೇಂದ್ರ ಗೃಹ ಇಲಾಖೆಗೆ ವರದಿ ರವಾನೆ ಮಾಡಿದ್ದಾರೆ.

Bengaluru: ಶಂಕಿತ ಉಗ್ರರ ಬಂಧನ ಪ್ರಕರಣ: ಪ್ರಾಥಮಿಕ ತನಿಖಾ ವರದಿಯನ್ನ ಕೇಂದ್ರಕ್ಕೆ ಕಳುಹಿಸಿದ ಸಿಸಿಬಿ
ಸಿಸಿಬಿ
ಪ್ರಜ್ವಲ್ ಅಮೀನ್​, ಉಡುಪಿ
| Edited By: ವಿವೇಕ ಬಿರಾದಾರ|

Updated on: Jul 22, 2023 | 10:37 AM

Share

ಬೆಂಗಳೂರು: ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಾಥಮಿಕ ತನಿಖಾ ವರದಿಯನ್ನು ಸಿಸಿಬಿ ಪೊಲೀಸರು ಕೇಂದ್ರ ಗೃಹ ಇಲಾಖೆಗೆ (Central Home Affairs) ವರದಿ ರವಾನೆ ಮಾಡಿದ್ದಾರೆ. ಬಂಧನವಾದ ಶಂಕಿತ ಉಗ್ರರ ಸಂಖ್ಯೆ, ಹೆಸರು, ಯಾವ ಸೆಕ್ಷನ್​ನಲ್ಲಿ ಕೇಸ್ ದಾಖಲಾಗಿದೆ. ಶಂಕಿತರ ಮೇಲಿರುವ ಆರೋಪಗಳು ಹಾಗೂ ಸಂಚಿನ ಬಗ್ಗೆ ವರದಿಯಲ್ಲಿ ಉಲ್ಲೇಖವಾಗಿದೆ.

ಇನ್ನು ಸಿಸಿಬಿ ಪೊಲೀಸರು ಶಂಕಿತ ಉಗ್ರರ ಕಳೆದ ಎರಡು ವರ್ಷಗಳ ಕರೆಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಶಂಕಿತರು ಈವರೆಗೆ ಯಾರ ಯಾರ ಜೊತೆ ಸಂಪರ್ಕ ಹೊಂದಿದ್ದರು ಎಂದು ಯುಎಪಿಎ ಸೆಕ್ಷನ್ ಅಡಿಯಲ್ಲಿ ಎರಡು ವರ್ಷಗಳ ಸಿಡಿಆರ್ ಪಡೆದು ಪರಿಶೀಲನೆಗೆ ಮುಂದಾಗಿದ್ದಾರೆ. ಅಲ್ಲದೆ ಈಗಾಗಲೇ ಕೆಲವರು ಸಿಮ್ ಬದಲಿಸಿ ಹೊಸ ಸಿಮ್​ಗಳ ಖರೀದಿ ಮಾಡಿದ್ದಾರೆ. ಈ ಹೊಸ ಸಿಮ್​ನಲ್ಲಿ ಯಾರಿಗೆಲ್ಲಾ ಕರೆ ಮಾಡಿದ್ದಾರೆ ಎಂದು ಸಿಸಿಬಿ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: 9 ಶಂಕಿತ ಆಲ್-ಖೈದಾ ಉಗ್ರರು ಎನ್ಐಎ ಬಲೆಗೆ!

ಇದಲ್ಲದೇ ಶಂಕಿತ ಉಗ್ರರ ಮೊಬೈಲ್​ನಲ್ಲಿ ವಾಟ್ಸಪ್ ಚಾಟಿಂಗ್ ಮತ್ತು ಕರೆಗಳು ಪತ್ತೆಯಾಗಿವೆ. ಶಂಕಿತರು ವಾಟ್ಸಪ್ ಮೂಲಕ ಹಲವರಿಗೆ ಕರೆ ಮಾಡಿದ್ದಾರೆ. ಹಾಗೂ ಹಲವರ ಜೊತೆ ವಾಟ್ಸಪ್ ಚಾಟಿಂಗ್ ಮಾಡಿರುವುದು ಬೆಳಕಿಗೆ ಬಂದಿದೆ. ಈ ವಾಟ್ಸಪ್ ಚಾಟಿಂಗ್ ಮತ್ತು ಕರೆಗಳನ್ನು ಯಾರಿಗೆ ಮಾಡಿದರು, ಯಾರ ಜೊತೆ ಮಾತಾಡಿದ್ದಾರೆ. ಯಾವ ಲೋಕೇಷನ್​ಗೆ ಕರೆಗಳು ಹೋಗಿವೆ ಎಂದು ಸಿಸಿಬಿ ತನಿಖೆ ನಡೆಸುತ್ತಿದೆ. ಕೆಲವರ ಬಳಿ ಆಂಡ್ರಾಯ್ಡ್ ಮೊಬೈಲ್ ಇದ್ರೆ ಇನ್ನೂ ಕೆಲವರ ಬಳಿ ಬೆಸಿಕ್ ಮೊಬೈಲ್ ಮಾತ್ರ ಇದೆ. ಸದ್ಯ ಶಂಕಿತರ ಬಳಿಯಿದ್ದ 12 ಮೊಬೈಲ್ ಫೋನ್ ರಿಟ್ರೀವ್ ಮಾಡಲು ಸಿಸಿಬಿ ಕಳಿಸಿದೆ.

ಇದಷ್ಟೇ ಅಲ್ಲದೇ ಶಂಕಿತ ಉಗ್ರರ ಡಿಜಿಟಲ್ ಪೇಮೆಂಟ್ ಖಾತೆಗಳಿಗೆ ಸಂದಾಯವಾಗಿರುವುದು ಸಿಸಿಬಿ ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಸಿಸಿಬಿ ಬಂಧಿತ ಐವರು ಶಂಕಿತರ ಬ್ಯಾಂಕ್ ಖಾತೆ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ಕೆಲವು ಬಾರಿ ಅಗತ್ಯ ಅನುಸಾರ ಹಣ ವರ್ಗಾವಣೆ. ಐವರು ಶಂಕಿತ ಉಗ್ರರಿಗೆ ಆರೋಪಿ ಜುನೈದ್ ವಿದೇಶದಿಂದ ಹಣ ಸಂದಾಯ ಮಾಡುತ್ತಿದ್ದನು ಎಂಬ ಅಂಶ ಸಿಸಿಬಿ ಅಧಿಕಾರಿಗಳ ತನಿಖೆಯಲ್ಲಿ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು