AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕಿತ ಉಗ್ರರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ: ವಿದೇಶದಿಂದ ಗ್ರೆನೇಡ್ ಸಪ್ಲೈ

ಬೆಂಗಳೂರಲ್ಲಿ ಐವರು ಶಂಕಿತ ಭಯೋತ್ಪಾದಕರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರ ಮನೆಯಲ್ಲಿ ಸಿಕ್ಕ ಗ್ರೆನೇಡ್​ ವಿದೇಶದಿಂದ ಆಮದಾಗಿರುವ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ.

ಶಂಕಿತ ಉಗ್ರರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ: ವಿದೇಶದಿಂದ ಗ್ರೆನೇಡ್ ಸಪ್ಲೈ
ಬಂಧಿತ ಶಂಕಿತ ಉಗ್ರರು
ಪ್ರಜ್ವಲ್ ಅಮೀನ್​, ಉಡುಪಿ
| Edited By: ವಿವೇಕ ಬಿರಾದಾರ|

Updated on:Jul 29, 2023 | 10:45 AM

Share

ಬೆಂಗಳೂರು: ನಗರದಲ್ಲಿ ಐವರು ಶಂಕಿತ ಭಯೋತ್ಪಾದಕರ (Suspected Terrorists) ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರ ಮನೆಯಲ್ಲಿ ಸಿಕ್ಕ ಗ್ರೆನೇಡ್ (Grande)​ ವಿದೇಶದಿಂದ ಆಮದಾಗಿರುವ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ. ಇದೀಗ ಗ್ರೆನೇಡ್​ ಬಗ್ಗೆ ಬಿಡಿಟಿಎಸ್​​​, FSL ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಬಂಧಿತ ಐವರು ಶಂಕಿತರು ಕೇವಲ ಕೊರಿಯರ್​ ಮೂಲಕ ಬಂದ ಗ್ರೆನೇಡ್​, ಪಿಸ್ತೂಲ್​ ಇದ್ದ ಪಾರ್ಸೆಲ್​ಗಳನ್ನು ತೆಗೆದುಕೊಂಡು ಸಂಗ್ರಹಿಸಿಟ್ಟುಕೊಳ್ಳುತ್ತಿದ್ದರು. ಆದರೆ ಕೃತ್ಯದ ಯೋಜನೆ, ಸಂಚನ್ನು ಬೇರೆ ತಂಡ ರೂಪಿಸುತ್ತಿದ್ದ ಅಂಶ ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ಸಿಸಿಬಿ (CCB) ಅಧಿಕಾರಿಗಳು ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ವಿಚಾರಣೆ ವೇಳೆ ಸಿಸಿಬಿ ಮುಂದೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಂಕಿತ ಉಗ್ರರು

ಇನ್ನು ಈ ಗ್ರೆನೇಡ್​​, ಪಿಸ್ತೂಲ್ ಬಗ್ಗೆ ಯಾರಿಗೂ ಹೇಳದಂತೆ ಶಂಕಿತರ ಬಳಿ ಆರೋಪಿಗಳಾದ ನಜೀರ್​, ಜುನೈದ್​​​​ ಪ್ರಮಾಣ ಮಾಡಿಸಿಕೊಂಡಿದ್ದರಂತೆ. ಡೆಲಿವರಿ ಬಾಯ್​ ನೀಡುವ ಪಾರ್ಸೆಲ್​​​ ಓಪನ್ ಮಾಡಬಾರದು. ಏನೇ ಕೆಲಸ ಮಾಡಿದರೂ ಯಾರಿಗೂ ಹೇಳದಂತೆ ಶಂಕಿತರು ಪ್ರಮಾಣ ಮಾಡಿದ್ದರು. ಹೀಗಾಗಿ ಶಂಕಿತ ಉಗ್ರರು ಪಾರ್ಸೆಲ್​​​​ ತೆರೆಯದೆ ಸೇಫಾಗಿಟ್ಟಿದ್ದರು.

ಶಂಕಿತ ಐವರು ಉಗ್ರರಲ್ಲಿ ಓರ್ವನ ಪ್ರಿಯತಮೆಯಿಂದ ಡ್ರಗ್ಸ್​ ಸಪ್ಲೈ

ಶಂಕಿತ ಉಗ್ರರು ನಗರದಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದಲ್ಲದೆ, ಡ್ರಗ್ಸ್ ಕೂಡ ಸಪ್ಲೈ ಮಾಡುತ್ತಿದ್ದರು ಎಂಬ ಅಂಶ ಸಿಸಿಬಿ ತನಿಖೆ ವೇಳೆ ಬಯಲಾಗಿತ್ತು. ಬಂಧಿತರ ಐವರು ಶಂಕಿತ ಉಗ್ರರ ಪೈಕಿ ಮುದಾಸಿರ್ ಹಾಗೂ ಉಮರ್​ ಇಬ್ಬರು ಶಂಕಿತ ಉಗ್ರರರು ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು.

ಸಿಸಿಬಿ ಪೊಲೀಸರು ಶಂಕತಿ ಉಗ್ರ ಮುದಾಸಿರ್​​​ ಪ್ರಿಯತಮೆಯನ್ನು ವಿಚಾರಣೆಗೆ ಒಳಪಡಿಸಿದಾಗ ಈ ಅಂಶ ಬಯಲಾಗಿದೆ. ಹೌದು ಮುದಾಸಿರ್​ ಪ್ರಿಯತಮೆ ಕೈಯಲ್ಲಿ ಡ್ರಗ್ಸ್ ಇಟ್ಟು ನಾನು ಹೇಳಿದವರಿಗೆ ಇದನ್ನು ಕೊಡು ಎಂದು ಹೇಳಿ ಹೋಗುತ್ತಿದ್ದನಂತೆ. ಇದರಂತೆ ಪ್ರಿಯತಮ ಮುದಾಸಿರ್​ ಹೇಳಿದವರಿಗೆ ಗೆಳತಿ ಡ್ರಗ್ಸ್​ ಕೊಡುತ್ತಿದ್ದಳು. ಇನ್ನು ಮುದಾಸಿರ್​ ತಾನು ಬಂಧನವಾದ ದಿನವೂ ಗೆಳತಿಗೆ ಡ್ರಗ್ಸ್​​ ಕೊಟ್ಟು ಸಪ್ಲೈ ಮಾಡು ಎಂದಿದ್ದನಂತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:02 am, Sat, 29 July 23

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ