AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕಿತ ಉಗ್ರರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ: ವಿದೇಶದಿಂದ ಗ್ರೆನೇಡ್ ಸಪ್ಲೈ

ಬೆಂಗಳೂರಲ್ಲಿ ಐವರು ಶಂಕಿತ ಭಯೋತ್ಪಾದಕರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರ ಮನೆಯಲ್ಲಿ ಸಿಕ್ಕ ಗ್ರೆನೇಡ್​ ವಿದೇಶದಿಂದ ಆಮದಾಗಿರುವ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ.

ಶಂಕಿತ ಉಗ್ರರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ: ವಿದೇಶದಿಂದ ಗ್ರೆನೇಡ್ ಸಪ್ಲೈ
ಬಂಧಿತ ಶಂಕಿತ ಉಗ್ರರು
ಪ್ರಜ್ವಲ್ ಅಮೀನ್​, ಉಡುಪಿ
| Edited By: ವಿವೇಕ ಬಿರಾದಾರ|

Updated on:Jul 29, 2023 | 10:45 AM

Share

ಬೆಂಗಳೂರು: ನಗರದಲ್ಲಿ ಐವರು ಶಂಕಿತ ಭಯೋತ್ಪಾದಕರ (Suspected Terrorists) ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರ ಮನೆಯಲ್ಲಿ ಸಿಕ್ಕ ಗ್ರೆನೇಡ್ (Grande)​ ವಿದೇಶದಿಂದ ಆಮದಾಗಿರುವ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ. ಇದೀಗ ಗ್ರೆನೇಡ್​ ಬಗ್ಗೆ ಬಿಡಿಟಿಎಸ್​​​, FSL ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಬಂಧಿತ ಐವರು ಶಂಕಿತರು ಕೇವಲ ಕೊರಿಯರ್​ ಮೂಲಕ ಬಂದ ಗ್ರೆನೇಡ್​, ಪಿಸ್ತೂಲ್​ ಇದ್ದ ಪಾರ್ಸೆಲ್​ಗಳನ್ನು ತೆಗೆದುಕೊಂಡು ಸಂಗ್ರಹಿಸಿಟ್ಟುಕೊಳ್ಳುತ್ತಿದ್ದರು. ಆದರೆ ಕೃತ್ಯದ ಯೋಜನೆ, ಸಂಚನ್ನು ಬೇರೆ ತಂಡ ರೂಪಿಸುತ್ತಿದ್ದ ಅಂಶ ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ಸಿಸಿಬಿ (CCB) ಅಧಿಕಾರಿಗಳು ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ವಿಚಾರಣೆ ವೇಳೆ ಸಿಸಿಬಿ ಮುಂದೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಂಕಿತ ಉಗ್ರರು

ಇನ್ನು ಈ ಗ್ರೆನೇಡ್​​, ಪಿಸ್ತೂಲ್ ಬಗ್ಗೆ ಯಾರಿಗೂ ಹೇಳದಂತೆ ಶಂಕಿತರ ಬಳಿ ಆರೋಪಿಗಳಾದ ನಜೀರ್​, ಜುನೈದ್​​​​ ಪ್ರಮಾಣ ಮಾಡಿಸಿಕೊಂಡಿದ್ದರಂತೆ. ಡೆಲಿವರಿ ಬಾಯ್​ ನೀಡುವ ಪಾರ್ಸೆಲ್​​​ ಓಪನ್ ಮಾಡಬಾರದು. ಏನೇ ಕೆಲಸ ಮಾಡಿದರೂ ಯಾರಿಗೂ ಹೇಳದಂತೆ ಶಂಕಿತರು ಪ್ರಮಾಣ ಮಾಡಿದ್ದರು. ಹೀಗಾಗಿ ಶಂಕಿತ ಉಗ್ರರು ಪಾರ್ಸೆಲ್​​​​ ತೆರೆಯದೆ ಸೇಫಾಗಿಟ್ಟಿದ್ದರು.

ಶಂಕಿತ ಐವರು ಉಗ್ರರಲ್ಲಿ ಓರ್ವನ ಪ್ರಿಯತಮೆಯಿಂದ ಡ್ರಗ್ಸ್​ ಸಪ್ಲೈ

ಶಂಕಿತ ಉಗ್ರರು ನಗರದಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದಲ್ಲದೆ, ಡ್ರಗ್ಸ್ ಕೂಡ ಸಪ್ಲೈ ಮಾಡುತ್ತಿದ್ದರು ಎಂಬ ಅಂಶ ಸಿಸಿಬಿ ತನಿಖೆ ವೇಳೆ ಬಯಲಾಗಿತ್ತು. ಬಂಧಿತರ ಐವರು ಶಂಕಿತ ಉಗ್ರರ ಪೈಕಿ ಮುದಾಸಿರ್ ಹಾಗೂ ಉಮರ್​ ಇಬ್ಬರು ಶಂಕಿತ ಉಗ್ರರರು ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು.

ಸಿಸಿಬಿ ಪೊಲೀಸರು ಶಂಕತಿ ಉಗ್ರ ಮುದಾಸಿರ್​​​ ಪ್ರಿಯತಮೆಯನ್ನು ವಿಚಾರಣೆಗೆ ಒಳಪಡಿಸಿದಾಗ ಈ ಅಂಶ ಬಯಲಾಗಿದೆ. ಹೌದು ಮುದಾಸಿರ್​ ಪ್ರಿಯತಮೆ ಕೈಯಲ್ಲಿ ಡ್ರಗ್ಸ್ ಇಟ್ಟು ನಾನು ಹೇಳಿದವರಿಗೆ ಇದನ್ನು ಕೊಡು ಎಂದು ಹೇಳಿ ಹೋಗುತ್ತಿದ್ದನಂತೆ. ಇದರಂತೆ ಪ್ರಿಯತಮ ಮುದಾಸಿರ್​ ಹೇಳಿದವರಿಗೆ ಗೆಳತಿ ಡ್ರಗ್ಸ್​ ಕೊಡುತ್ತಿದ್ದಳು. ಇನ್ನು ಮುದಾಸಿರ್​ ತಾನು ಬಂಧನವಾದ ದಿನವೂ ಗೆಳತಿಗೆ ಡ್ರಗ್ಸ್​​ ಕೊಟ್ಟು ಸಪ್ಲೈ ಮಾಡು ಎಂದಿದ್ದನಂತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:02 am, Sat, 29 July 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ