AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕಿತ ಉಗ್ರರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ: ವಿದೇಶದಿಂದ ಗ್ರೆನೇಡ್ ಸಪ್ಲೈ

ಬೆಂಗಳೂರಲ್ಲಿ ಐವರು ಶಂಕಿತ ಭಯೋತ್ಪಾದಕರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರ ಮನೆಯಲ್ಲಿ ಸಿಕ್ಕ ಗ್ರೆನೇಡ್​ ವಿದೇಶದಿಂದ ಆಮದಾಗಿರುವ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ.

ಶಂಕಿತ ಉಗ್ರರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ: ವಿದೇಶದಿಂದ ಗ್ರೆನೇಡ್ ಸಪ್ಲೈ
ಬಂಧಿತ ಶಂಕಿತ ಉಗ್ರರು
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Jul 29, 2023 | 10:45 AM

Share

ಬೆಂಗಳೂರು: ನಗರದಲ್ಲಿ ಐವರು ಶಂಕಿತ ಭಯೋತ್ಪಾದಕರ (Suspected Terrorists) ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರ ಮನೆಯಲ್ಲಿ ಸಿಕ್ಕ ಗ್ರೆನೇಡ್ (Grande)​ ವಿದೇಶದಿಂದ ಆಮದಾಗಿರುವ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ. ಇದೀಗ ಗ್ರೆನೇಡ್​ ಬಗ್ಗೆ ಬಿಡಿಟಿಎಸ್​​​, FSL ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಬಂಧಿತ ಐವರು ಶಂಕಿತರು ಕೇವಲ ಕೊರಿಯರ್​ ಮೂಲಕ ಬಂದ ಗ್ರೆನೇಡ್​, ಪಿಸ್ತೂಲ್​ ಇದ್ದ ಪಾರ್ಸೆಲ್​ಗಳನ್ನು ತೆಗೆದುಕೊಂಡು ಸಂಗ್ರಹಿಸಿಟ್ಟುಕೊಳ್ಳುತ್ತಿದ್ದರು. ಆದರೆ ಕೃತ್ಯದ ಯೋಜನೆ, ಸಂಚನ್ನು ಬೇರೆ ತಂಡ ರೂಪಿಸುತ್ತಿದ್ದ ಅಂಶ ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ಸಿಸಿಬಿ (CCB) ಅಧಿಕಾರಿಗಳು ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ವಿಚಾರಣೆ ವೇಳೆ ಸಿಸಿಬಿ ಮುಂದೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಂಕಿತ ಉಗ್ರರು

ಇನ್ನು ಈ ಗ್ರೆನೇಡ್​​, ಪಿಸ್ತೂಲ್ ಬಗ್ಗೆ ಯಾರಿಗೂ ಹೇಳದಂತೆ ಶಂಕಿತರ ಬಳಿ ಆರೋಪಿಗಳಾದ ನಜೀರ್​, ಜುನೈದ್​​​​ ಪ್ರಮಾಣ ಮಾಡಿಸಿಕೊಂಡಿದ್ದರಂತೆ. ಡೆಲಿವರಿ ಬಾಯ್​ ನೀಡುವ ಪಾರ್ಸೆಲ್​​​ ಓಪನ್ ಮಾಡಬಾರದು. ಏನೇ ಕೆಲಸ ಮಾಡಿದರೂ ಯಾರಿಗೂ ಹೇಳದಂತೆ ಶಂಕಿತರು ಪ್ರಮಾಣ ಮಾಡಿದ್ದರು. ಹೀಗಾಗಿ ಶಂಕಿತ ಉಗ್ರರು ಪಾರ್ಸೆಲ್​​​​ ತೆರೆಯದೆ ಸೇಫಾಗಿಟ್ಟಿದ್ದರು.

ಶಂಕಿತ ಐವರು ಉಗ್ರರಲ್ಲಿ ಓರ್ವನ ಪ್ರಿಯತಮೆಯಿಂದ ಡ್ರಗ್ಸ್​ ಸಪ್ಲೈ

ಶಂಕಿತ ಉಗ್ರರು ನಗರದಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದಲ್ಲದೆ, ಡ್ರಗ್ಸ್ ಕೂಡ ಸಪ್ಲೈ ಮಾಡುತ್ತಿದ್ದರು ಎಂಬ ಅಂಶ ಸಿಸಿಬಿ ತನಿಖೆ ವೇಳೆ ಬಯಲಾಗಿತ್ತು. ಬಂಧಿತರ ಐವರು ಶಂಕಿತ ಉಗ್ರರ ಪೈಕಿ ಮುದಾಸಿರ್ ಹಾಗೂ ಉಮರ್​ ಇಬ್ಬರು ಶಂಕಿತ ಉಗ್ರರರು ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು.

ಸಿಸಿಬಿ ಪೊಲೀಸರು ಶಂಕತಿ ಉಗ್ರ ಮುದಾಸಿರ್​​​ ಪ್ರಿಯತಮೆಯನ್ನು ವಿಚಾರಣೆಗೆ ಒಳಪಡಿಸಿದಾಗ ಈ ಅಂಶ ಬಯಲಾಗಿದೆ. ಹೌದು ಮುದಾಸಿರ್​ ಪ್ರಿಯತಮೆ ಕೈಯಲ್ಲಿ ಡ್ರಗ್ಸ್ ಇಟ್ಟು ನಾನು ಹೇಳಿದವರಿಗೆ ಇದನ್ನು ಕೊಡು ಎಂದು ಹೇಳಿ ಹೋಗುತ್ತಿದ್ದನಂತೆ. ಇದರಂತೆ ಪ್ರಿಯತಮ ಮುದಾಸಿರ್​ ಹೇಳಿದವರಿಗೆ ಗೆಳತಿ ಡ್ರಗ್ಸ್​ ಕೊಡುತ್ತಿದ್ದಳು. ಇನ್ನು ಮುದಾಸಿರ್​ ತಾನು ಬಂಧನವಾದ ದಿನವೂ ಗೆಳತಿಗೆ ಡ್ರಗ್ಸ್​​ ಕೊಟ್ಟು ಸಪ್ಲೈ ಮಾಡು ಎಂದಿದ್ದನಂತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:02 am, Sat, 29 July 23

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ