AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಂಗಾಳದ ಯುವಕನ ಅನುಮಾನಸ್ಪದ ಸಾವು, ಹೂತಿಟ್ಟ ಶವ ಹೊರತೆಗೆದ ಪೊಲೀಸರು

ಪಶ್ಚಿಮ ಬಂಗಾಳ ಮೂಲದ ಯುವಕ ಸಾವಿನ ಹಿಂದೆ ಅನುಮಾನ ವ್ಯಕ್ತವಾಗಿದ್ದು, ಹೂತಿಟ್ಟ ಮೃತದೇಹವನ್ನು ಹೊರತೆಗೆದ ಬೆಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಯೋ, ಕೊಲೆಯೋ ಎಂಬುದನ್ನ ಪತ್ತೆಹಚ್ಚಲು ಮೃತದೇಹ ಹೊರತೆಗೆಯಲಾಗಿದೆ.

ಬೆಂಗಳೂರಿನಲ್ಲಿ ಬಂಗಾಳದ ಯುವಕನ ಅನುಮಾನಸ್ಪದ ಸಾವು, ಹೂತಿಟ್ಟ ಶವ ಹೊರತೆಗೆದ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: Rakesh Nayak Manchi|

Updated on:Feb 07, 2023 | 7:39 AM

Share

ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಯುವಕ ಸಾವಿನ (Suspicious death) ಅಸಲಿಯತ್ತು ಪತ್ತೆಯಚ್ಚುವ ನಿಟ್ಟಿನಲ್ಲಿ ಹೂತಿಟ್ಟ ಮೃತದೇಹವನ್ನು ಹೊರತೆಗೆದ ಬೆಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಯೋ, ಕೊಲೆಯೋ ಎಂಬುದನ್ನ ಪತ್ತೆಹಚ್ಚಲು ಮೃತದೇಹ ಹೊರತೆಗೆಯಲಾಗಿದೆ. ಎರಡು ವಾರದ ಹಿಂದೆ ಕೂಲಿ ಕೆಲಸ ಮಾಡಿಕೊಂಡಿದ್ದ ರಸೂಲ್ ಎಂಬ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಆದರೆ ಸಾವಿನ ವಿಷ್ಯವನ್ನ ಪೊಲೀಸರಿಗೆ ತಿಳಿಸದೇ ಸ್ನೇಹಿರು ಅಂತ್ಯಕ್ರಿಯೆ ಮಾಡಿ ಮುಗಿಸಿದ್ದರು. ಇದೀಗ ಸಾವಿನ ಹಿಂದೆ ಅನುಮಾನ ಹುಟ್ಟಿಕೊಂಡ ಹಿನ್ನಲೆ ಶವ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ನಗರದ ಕಾಡುಗೋಡಿ ಪೊಲೀಸರು ಶವ ಹೊರತೆಗೆದಿದ್ದು, ರಸೂಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಕೊಲೆ ಮಾಡಿ ಹೂತು ಹಾಕಲಾಗಿತ್ತೋ ಎಂಬುದನ್ನ ಪತ್ತೆಹಚ್ಚಲು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ವರದಿ ಬಂದ ನಂತರವಷ್ಟೇ ಸಾವಿನ ಅಸಲಿಯತ್ತು ತಿಳಿದುಬರಲಿದೆ. ಸದ್ಯ ಮರಣೋತ್ತರ ಪರೀಕ್ಷೆ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಇದನ್ನೂ ಓದಿ: ದೆಹಲಿ: ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ ಪಾರ್ಶ್ವವಾಯು ಪೀಡಿತ ಅಪ್ಪನನ್ನು ಹೊಡೆದು ಕೊಂದ ಮಗ

ರಸೂಲ್​ನನ್ನು ಬಿಟ್ಟು ದೂರಾಗಿದ್ದ ಪತ್ನಿ

ಮೃತ ರಸೂಲ್ ಪತ್ನಿ ಆತನ ಬಿಟ್ಟು ಹೋಗಿದ್ದಳು, ಮತ್ತೊಂದೆಡೆ ಮಾಲೀಕ ಸಂಬಳ ಸಹ ಸರಿಯಾಗಿ ನೀಡುತ್ತಿರಲಿಲ್ಲ. ಈ ಎರಡು ವಿಚಾರಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯೂ ಇದೆ. ಆದರೆ ಸ್ನೇಹಿತರು ಮತ್ತು ಮಾಲೀಕ, ಸಾವಿನ ಬಗ್ಗೆ ಯಾರಿಗೂ ತಿಳಿಸದೇ ಸಮಾಧಿ ಮಾಡಿದ ಹಿನ್ನಲೆ ಮೃತ ರಸೂಲ್ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಸಾವಿನ ಮಾಹಿತಿ ನೀಡದೇ ಅಂತ್ಯಕ್ರಿಯೆ ನಡೆಸಿರುವ ಬಗ್ಗೆ ಕಾಡುಗೊಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:39 am, Tue, 7 February 23

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ