AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು

ಬೆಂಗಳೂರಿನ ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ನಡುವೆ ನಡೆಯಲಿರುವ ರೈಲ್ವೆ ಇಂಜಿನಿಯರಿಂಗ್ ಕಾಮಗಾರಿಗಳ ಕಾರಣದಿಂದಾಗಿ ಜೂನ್ 7 ಮತ್ತು 8 ರಂದು ಅಶೋಕಪುರಂ ಎಕ್ಸ್‌ಪ್ರೆಸ್ ಸೇರಿದಂತೆ 2 ರೈಲುಗಳನ್ನು ರದ್ದುಗೊಳಿಸಲಾಗಿದ್ದು, 6 ಮೆಮು ರೈಲುಗಳ ಸಂಚಾರ ಭಾಗಶಃ ರದ್ದಾಗಿವೆ. ರದ್ದಾದ ರೈಲುಗಳ ವಿವರ ಇಲ್ಲಿದೆ.

ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು
ಸಾಂದರ್ಭಿಕ ಚಿತ್ರImage Credit source: PTI
ಗಣಪತಿ ಶರ್ಮಾ
|

Updated on:Jun 04, 2026 | 12:24 PM

Share

ಬೆಂಗಳೂರು, ಜೂನ್ 4: ಬೆಂಗಳೂರಿನ (Bengaluru) ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ಪ್ಯಾನಲ್ ಕ್ಯಾಬಿನ್ ನಡುವೆ ಹಳಿಗಳ ಇಂಜಿನಿಯರಿಂಗ್ ಕಾಮಗಾರಿ (ಲೈನ್ ಬ್ಲಾಕ್) ಹಮ್ಮಿಕೊಳ್ಳಲಾಗಿರುವ ಕಾರಣ ಈ ಮಾರ್ಗದಲ್ಲಿ ಸಂಚರಿಸುವ ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನೈಋತ್ಯ ರೈಲ್ವೆ (SWR) ತಿಳಿಸಿದೆ. ಜೂನ್ 7 ಮತ್ತು ಜೂನ್ 8 ರಂದು ಎರಡು ಪ್ರಮುಖ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, 6 ಮೆಮು (MEMU) ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇದರಿಂದಾಗಿ ಪ್ರತಿನಿತ್ಯ ಕಚೇರಿ ಹಾಗೂ ಇತರೆ ಕೆಲಸಗಳಿಗೆ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಕೋರಲಾಗಿದೆ.

ಸಂಚಾರ ರದ್ದಾಗಿರುವ ರೈಲುಗಳ ವಿವರ

ರೈಲ್ವೆ ಇಲಾಖೆಯ ಮಾಹಿತಿ ಪ್ರಕಾರ, ಜೂನ್ 8 ರಂದು ಸಂಚರಿಸಬೇಕಿದ್ದ ರೈಲು ಸಂಖ್ಯೆ 20623 ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 20624 ಕೆಎಸ್ಆರ್ ಬೆಂಗಳೂರು – ಅಶೋಕಪುರಂ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

ಜೂನ್ 7 ರಂದು ಭಾಗಶಃ ರದ್ದಾಗುವ ರೈಲುಗಳು

  • ರೈಲು ಸಂಖ್ಯೆ 66533 (ಮರಿಕುಪ್ಪಂ – ಕೆ.ಆರ್. ಪುರಂ ಮೆಮು): ಈ ರೈಲು ವೈಟ್‌ಫೀಲ್ಡ್ ಮತ್ತು ಕೆ.ಆರ್. ಪುರಂ ನಡುವೆ ಭಾಗಶಃ ರದ್ದಾಗಲಿದ್ದು, ವೈಟ್‌ಫೀಲ್ಡ್ ನಿಲ್ದಾಣದಲ್ಲೇ ಪ್ರಯಾಣ ಕೊನೆಗೊಳಿಸಲಿದೆ (Short-terminate).
  • ರೈಲು ಸಂಖ್ಯೆ 66534 (ಕೆ.ಆರ್. ಪುರಂ – ಕುಪ್ಪಂ ಮೆಮು): ಈ ರೈಲು ಕೆ.ಆರ್. ಪುರಂ ಬದಲಿಗೆ ವೈಟ್‌ಫೀಲ್ಡ್ ನಿಲ್ದಾಣದಿಂದಲೇ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲಿದೆ.
  • ರೈಲು ಸಂಖ್ಯೆ 66560 (ಅನಂತಪುರ – ಕೆಎಸ್ಆರ್ ಬೆಂಗಳೂರು ಮೆಮು): ಚನ್ನಸಂದ್ರ ಮತ್ತು ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಈ ರೈಲಿನ ಸಂಚಾರ ಕಡಿತಗೊಳಿಸಲಾಗಿದೆ.
  • ರೈಲು ಸಂಖ್ಯೆ 66520 (ಕೆಎಸ್ಆರ್ ಬೆಂಗಳೂರು – ಮರಿಕುಪ್ಪಂ ಮೆಮು): ಕೆಎಸ್ಆರ್ ಬೆಂಗಳೂರು ಮತ್ತು ವೈಟ್‌ಫೀಲ್ಡ್ ನಡುವೆ ಭಾಗಶಃ ರದ್ದಾಗಲಿದ್ದು, ಬೆಂಗಳೂರು ಬದಲಿಗೆ ವೈಟ್‌ಫೀಲ್ಡ್‌ನಿಂದಲೇ ಸಂಚಾರ ಆರಂಭಿಸಲಿದೆ.

ಜೂನ್ 8 ರಂದು ಭಾಗಶಃ ರದ್ದಾಗುವ ರೈಲುಗಳು

  • ರೈಲು ಸಂಖ್ಯೆ 66519 (ಮರಿಕುಪ್ಪಂ – ಕೆಎಸ್ಆರ್ ಬೆಂಗಳೂರು ಮೆಮು): ಈ ರೈಲು ವೈಟ್‌ಫೀಲ್ಡ್ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದ್ದು, ವೈಟ್‌ಫೀಲ್ಡ್ ನಿಲ್ದಾಣದಲ್ಲೇ ಸ್ಥಗಿತಗೊಳ್ಳಲಿದೆ.
  • ರೈಲು ಸಂಖ್ಯೆ 66546 (ಕೆಎಸ್ಆರ್ ಬೆಂಗಳೂರು – ಮರಿಕುಪ್ಪಂ ಮೆಮು): ಈ ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣದ ಬದಲಿಗೆ ವೈಟ್‌ಫೀಲ್ಡ್‌ನಿಂದಲೇ ನಿಗದಿತ ಸಮಯಕ್ಕೆ ಮರಿಕುಪ್ಪಂ ಕಡೆಗೆ ಸಂಚರಿಸಲಿದೆ.

ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಿ ರೈಲುಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಈ ತಾತ್ಕಾಲಿಕ ಬದಲಾವಣೆ ಅನಿವಾರ್ಯವಾಗಿದ್ದು, ಪ್ರಯಾಣಿಕರು ರೈಲ್ವೆ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ನೈಋತ್ಯ ರೈಲ್ವೆ ವಿನಂತಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Thu, 4 June 26

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್