AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು

ಬೆಂಗಳೂರಿನ ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ನಡುವೆ ನಡೆಯಲಿರುವ ರೈಲ್ವೆ ಇಂಜಿನಿಯರಿಂಗ್ ಕಾಮಗಾರಿಗಳ ಕಾರಣದಿಂದಾಗಿ ಜೂನ್ 7 ಮತ್ತು 8 ರಂದು ಅಶೋಕಪುರಂ ಎಕ್ಸ್‌ಪ್ರೆಸ್ ಸೇರಿದಂತೆ 2 ರೈಲುಗಳನ್ನು ರದ್ದುಗೊಳಿಸಲಾಗಿದ್ದು, 6 ಮೆಮು ರೈಲುಗಳ ಸಂಚಾರ ಭಾಗಶಃ ರದ್ದಾಗಿವೆ. ರದ್ದಾದ ರೈಲುಗಳ ವಿವರ ಇಲ್ಲಿದೆ.

ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು
ಸಾಂದರ್ಭಿಕ ಚಿತ್ರImage Credit source: PTI
ಗಣಪತಿ ಶರ್ಮಾ
|

Updated on:Jun 04, 2026 | 12:24 PM

Share

ಬೆಂಗಳೂರು, ಜೂನ್ 4: ಬೆಂಗಳೂರಿನ (Bengaluru) ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ಪ್ಯಾನಲ್ ಕ್ಯಾಬಿನ್ ನಡುವೆ ಹಳಿಗಳ ಇಂಜಿನಿಯರಿಂಗ್ ಕಾಮಗಾರಿ (ಲೈನ್ ಬ್ಲಾಕ್) ಹಮ್ಮಿಕೊಳ್ಳಲಾಗಿರುವ ಕಾರಣ ಈ ಮಾರ್ಗದಲ್ಲಿ ಸಂಚರಿಸುವ ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನೈಋತ್ಯ ರೈಲ್ವೆ (SWR) ತಿಳಿಸಿದೆ. ಜೂನ್ 7 ಮತ್ತು ಜೂನ್ 8 ರಂದು ಎರಡು ಪ್ರಮುಖ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, 6 ಮೆಮು (MEMU) ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇದರಿಂದಾಗಿ ಪ್ರತಿನಿತ್ಯ ಕಚೇರಿ ಹಾಗೂ ಇತರೆ ಕೆಲಸಗಳಿಗೆ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಕೋರಲಾಗಿದೆ.

ಸಂಚಾರ ರದ್ದಾಗಿರುವ ರೈಲುಗಳ ವಿವರ

ರೈಲ್ವೆ ಇಲಾಖೆಯ ಮಾಹಿತಿ ಪ್ರಕಾರ, ಜೂನ್ 8 ರಂದು ಸಂಚರಿಸಬೇಕಿದ್ದ ರೈಲು ಸಂಖ್ಯೆ 20623 ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 20624 ಕೆಎಸ್ಆರ್ ಬೆಂಗಳೂರು – ಅಶೋಕಪುರಂ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

ಜೂನ್ 7 ರಂದು ಭಾಗಶಃ ರದ್ದಾಗುವ ರೈಲುಗಳು

  • ರೈಲು ಸಂಖ್ಯೆ 66533 (ಮರಿಕುಪ್ಪಂ – ಕೆ.ಆರ್. ಪುರಂ ಮೆಮು): ಈ ರೈಲು ವೈಟ್‌ಫೀಲ್ಡ್ ಮತ್ತು ಕೆ.ಆರ್. ಪುರಂ ನಡುವೆ ಭಾಗಶಃ ರದ್ದಾಗಲಿದ್ದು, ವೈಟ್‌ಫೀಲ್ಡ್ ನಿಲ್ದಾಣದಲ್ಲೇ ಪ್ರಯಾಣ ಕೊನೆಗೊಳಿಸಲಿದೆ (Short-terminate).
  • ರೈಲು ಸಂಖ್ಯೆ 66534 (ಕೆ.ಆರ್. ಪುರಂ – ಕುಪ್ಪಂ ಮೆಮು): ಈ ರೈಲು ಕೆ.ಆರ್. ಪುರಂ ಬದಲಿಗೆ ವೈಟ್‌ಫೀಲ್ಡ್ ನಿಲ್ದಾಣದಿಂದಲೇ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲಿದೆ.
  • ರೈಲು ಸಂಖ್ಯೆ 66560 (ಅನಂತಪುರ – ಕೆಎಸ್ಆರ್ ಬೆಂಗಳೂರು ಮೆಮು): ಚನ್ನಸಂದ್ರ ಮತ್ತು ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಈ ರೈಲಿನ ಸಂಚಾರ ಕಡಿತಗೊಳಿಸಲಾಗಿದೆ.
  • ರೈಲು ಸಂಖ್ಯೆ 66520 (ಕೆಎಸ್ಆರ್ ಬೆಂಗಳೂರು – ಮರಿಕುಪ್ಪಂ ಮೆಮು): ಕೆಎಸ್ಆರ್ ಬೆಂಗಳೂರು ಮತ್ತು ವೈಟ್‌ಫೀಲ್ಡ್ ನಡುವೆ ಭಾಗಶಃ ರದ್ದಾಗಲಿದ್ದು, ಬೆಂಗಳೂರು ಬದಲಿಗೆ ವೈಟ್‌ಫೀಲ್ಡ್‌ನಿಂದಲೇ ಸಂಚಾರ ಆರಂಭಿಸಲಿದೆ.

ಜೂನ್ 8 ರಂದು ಭಾಗಶಃ ರದ್ದಾಗುವ ರೈಲುಗಳು

  • ರೈಲು ಸಂಖ್ಯೆ 66519 (ಮರಿಕುಪ್ಪಂ – ಕೆಎಸ್ಆರ್ ಬೆಂಗಳೂರು ಮೆಮು): ಈ ರೈಲು ವೈಟ್‌ಫೀಲ್ಡ್ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದ್ದು, ವೈಟ್‌ಫೀಲ್ಡ್ ನಿಲ್ದಾಣದಲ್ಲೇ ಸ್ಥಗಿತಗೊಳ್ಳಲಿದೆ.
  • ರೈಲು ಸಂಖ್ಯೆ 66546 (ಕೆಎಸ್ಆರ್ ಬೆಂಗಳೂರು – ಮರಿಕುಪ್ಪಂ ಮೆಮು): ಈ ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣದ ಬದಲಿಗೆ ವೈಟ್‌ಫೀಲ್ಡ್‌ನಿಂದಲೇ ನಿಗದಿತ ಸಮಯಕ್ಕೆ ಮರಿಕುಪ್ಪಂ ಕಡೆಗೆ ಸಂಚರಿಸಲಿದೆ.

ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಿ ರೈಲುಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಈ ತಾತ್ಕಾಲಿಕ ಬದಲಾವಣೆ ಅನಿವಾರ್ಯವಾಗಿದ್ದು, ಪ್ರಯಾಣಿಕರು ರೈಲ್ವೆ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ನೈಋತ್ಯ ರೈಲ್ವೆ ವಿನಂತಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Thu, 4 June 26

Follow Us
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​