AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 7ನೇ ಕ್ಲಾಸ್ ವಿದ್ಯಾರ್ಥಿ ಕಪಾಳಕ್ಕೆ ಹೊಡೆದಿದ್ದ ಶಿಕ್ಷಕ ಅರೆಸ್ಟ್, ಆಗಿದ್ದೇನು?

7ನೇ ಕ್ಲಾಸ್ ವಿದ್ಯಾರ್ಥಿಯ ಕಪಾಳಕ್ಕೆ ಹೊಡೆದಿಕ್ಕೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲೆಯಲ್ಲಿ ಮಾಡಿದ ಕಿಡಿಗೇಡಿತನಕ್ಕೆ ಶಿಕ್ಷಕ, ವಿದ್ಯಾರ್ಥಿಯ ಕೆನ್ನೆಗೆ ಹೊಡೆದಿದ್ದು, ಏಟಿಗೆ ಬಾಲಕನ ಕೆನ್ನೆ ಊದಿಕೊಂಡಿದೆ. ಇದರಿಂದ ಆತಂಕಗೊಂಡ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ಪೊಲೀಸರು, ಶಿಕ್ಷಕನನ್ನು ಬಂಧಿಸಿದ್ದಾರೆ. ಅಷ್ಟಕ್ಕೂ ಶಿಕ್ಷಕ ವಿದ್ಯಾರ್ಥಿಗೆ ಹೊಡೆದಿದ್ಯಾಕೆ? ಇನ್ನು ವಿದ್ಯಾರ್ಥಿ ಮಾಡಿದ ತಪ್ಪೇನು ಎನ್ನುವ ವಿವರ ಇಲ್ಲಿದೆ

ಬೆಂಗಳೂರಿನಲ್ಲಿ 7ನೇ ಕ್ಲಾಸ್ ವಿದ್ಯಾರ್ಥಿ ಕಪಾಳಕ್ಕೆ ಹೊಡೆದಿದ್ದ ಶಿಕ್ಷಕ ಅರೆಸ್ಟ್, ಆಗಿದ್ದೇನು?
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Dec 07, 2025 | 4:05 PM

Share

ಬೆಂಗಳೂರು, (ಡಿಸೆಂಬರ್ 07): ಏಳನೇ ತರಗತಿ ವಿದ್ಯಾರ್ಥಿ (School Student) ಮೇಲೆ ಹಲ್ಲೆ ಮಾಡಿದ ಆರೋಪದಡಿ ಬೆಂಗಳೂರಿನ (Bengaluru) ನಾರಾಯಣ ಇ-ಸ್ಕೂಲ್​​​ನ ಪಿಟಿ ಶಿಕ್ಷಕ (Teacher) ರಾಜೇಶ್ ಎನ್ನುವರ ವಿರುದ್ಧ FIR ದಾಖಲಾಗಿದ್ದು, ಇದೀಗ ಬೆಂಗಳೂರಿನ ಹುಳಿಮಾವು ಪೊಲೀಸರು, ಶಿಕ್ಷಕ ರಾಜೇಶ್ ಅವರನ್ನು ಬಂಧಿಸಿದ್ದಾರೆ. ಶಿಕ್ಷಕ ರಾಜೇಶ್ ಸ್ಟಾಫ್ ರೂಮ್​ನಲ್ಲಿ ಶಿಕ್ಷಕರ ಮುಂದೆ ವಿದ್ಯಾರ್ಥಿ ಕೆನ್ನೆಗೆ ಬಾರಿಸಿದ್ದು, ಹೊಡೆದ ಏಟಿಗೆ ವಿದ್ಯಾರ್ಥಿಯ ಕೆನ್ನೆ ಊದಿಕೊಂಡಿದೆ. ಇದರಿಂದ ಬಾಲಕ ಮನೆಗೆ ಹೋಗಿರಲಿಲ್ಲ. ಇದರಿಂದ ಆತಂಕಗೊಂಡ ಪೋಷಕರು ಶಾಲೆಗೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಹುಳಿಮಾವು ಬಳಿಯ ನಾರಾಯಣ ಇ-ಟೆಕ್ನೋ ಶಾಲೆಯಲ್ಲಿ ರಾಜೇಶ್ ದೈಹಿಕ ಶಿಕ್ಷಕರಾಗುರುವ ಶಿಕ್ಷಕ ರಾಜೇಶ್, ಏಳನೇ ಕ್ಲಾಸ್ ವಿದ್ಯಾರ್ಥಿ ಸುಮಂತ್ ಕುಮಾರ್ (ಹೆಸರು ಬದಲಾಯಿಸಲಾಗಿದೆ) ಎಂಬಾತನ ಕಪಾಳಕ್ಕೆ ನಾಲ್ಕೈದು ಶಿಕ್ಷಕರ ಮುಂದೆ ಹೊಡೆದಿದ್ದರು. ವಿದ್ಯಾರ್ಥಿಯನ್ನು ಮನೆಗೆ ಕಳುಹಿಸದೇ ಸಂಜೆಯವರೆಗೂ ಶಾಲೆಯಲ್ಲಿಯೇ ಇರಿಸಿಕೊಂಡಿದ್ರು ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಫುಟ್​ಪಾತ್ ಮೇಲೆಯೇ ಟ್ರಾನ್ಸ್​ಫಾರ್ಮರ್​​ಗಳ ಸ್ಥಾಪನೆ; ಜನರ ಜೀವದ ಜೊತೆ ಆಟ ಆಡುತ್ತಿದೆಯಾ ಬೆಸ್ಕಾಂ?

ಸಂಜೆಯಾದ್ರು ಮಗ ಮನೆಗೆ ಬರದಿದ್ದಾಗ ಸುಮಂತ್ ಕುಮಾರ್ ಪೋಷಕರು ಶಾಲೆಯತ್ತ ಬಂದಿದ್ದಾರೆ. ಶಾಲೆಗೆ ಬಂದಾಗ ಸುಮಂತ್ ಕುಮಾರ್ ಕೆನ್ನೆ ಊದಿಕೊಂಡಿರುವ ವಿಷಯ ಗೊತ್ತಾಗಿದೆ. ಕೂಡಲೇ ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹುಳಿಮಾವು ಠಾಣೆಯಲ್ಲಿ ಶಿಕ್ಷಕ ರಾಜೇಶ್ ವಿರುದ್ಧ ದೂರು ದಾಖಲಿಸಿದ್ದಾರೆ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಶಿಕ್ಷಕ ಹೊಡೆದಿದ್ಯಾಕೆ?

ಸುಮಂತ್ ಕುಮಾರ್ ಊಟದ ವೇಳೆ ಸಹಪಾಠಿಯ ಕುರ್ಚಿಯನ್ನು ಎಳೆದಿದ್ದ. ಕ್ಲಾಸ್‌ ರೂಮ್‌ನಲ್ಲಯೂ ಇದೇ ರೀತಿ ಕುರ್ಚಿ ಎಳೆದಿದ್ದರಿಂದ ವಿದ್ಯಾರ್ಥಿಯೋರ್ವ ಕೆಳಗೆ ಬಿದ್ದಿದ್ದ. ಕೆಳಗೆ ಬಿದ್ದ ವಿದ್ಯಾರ್ಥಿ ನೇರವಾಗಿ ಶಿಕ್ಷಕ ರಾಜೇಶ್ ಬಳಿ ತೆರಳಿ ಸುಮಂತ್ ಕುಮಾರ್ ವಿರುದ್ಧ ದೂರು ನೀಡಿದ್ದ. ಶಿಕ್ಷಕ ರಾಜೇಶ್, ಸುಮಂತ್​​​​ ನನ್ನು ಸ್ಟಾಪ್ ರೂಮ್​​ಗೆ ಕರೆದು ಕಪಾಳಕ್ಕೆ ಹೊಡೆದಿದ್ದರು .

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ