AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ: ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ

Bengaluru Teachers Constituency Bypoll: ವಿಧಾನಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಇದೇ ಫೆಬ್ರವರಿ16ರಂದು ಉಪಚುನಾವಣೆ ನಡೆಯಲಿದ್ದು, ಅಂದು ಕ್ಷೇತ್ರ ವ್ಯಾಪ್ತಿಯ ಅರ್ಹ ಶಿಕ್ಷಕ ಮತದಾರರಿಗೆ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ: ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ
ವಿಧಾನಸೌಧ
ರಮೇಶ್ ಬಿ. ಜವಳಗೇರಾ
|

Updated on:Feb 14, 2024 | 10:53 PM

Share

ಬೆಂಗಳೂರು, (ಫೆಬ್ರವರಿ 14): ಕರ್ನಾಟಕ ವಿಧಾನಪರಿಷತ್​ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ(Bengaluru Teachers Constituency Bypoll: )ಇದೇ ಫೆಬ್ರವರಿ 16ರಂದು ನಡೆಯಲಿದ್ದು, ಇದಕ್ಕೆ ಬಿಬಿಎಂಪಿ ಎಲ್ಲಾ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಈ ಸಂಬಂಧ ಮಲ್ಲೇಶ್ವರದ ಐಪಿಪಿ ಸಭಾಂಗಣದಲ್ಲಿ ಅಂತಿಮ ಹಂತದ ಕ್ರಮಗಳ ಕುರಿತು ಸಭೆ ಬಿಬಿಎಂಪಿ ನಡೆಸಿತು. ಇನ್ನು ಮತದಾನದ ದಿನ (ಫೆ.16) ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಇರಲಿದೆ. ಕ್ಷೇತ್ರ ವ್ಯಾಪ್ತಿಯ ಅರ್ಹ ಶಿಕ್ಷಕ ಮತದಾರರಿಗೆ ಅಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,  ರಾಮನಗರ ಜಿಲ್ಲೆಯ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ನಡೆಯಲಿದ್ದು, ಇಲ್ಲಿನ ಸರ್ಕಾರಿ, ಖಾಸಗಿ ಶಾಲಾ ಕಾಲೇಜು, ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಅರ್ಹ ಮತದಾರರಿಗೆ ಈ ರಜೆ ಆದೇಶ ಅನ್ವಯವಾಗಲಿದೆ. ಉಪ ಚುನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸಲು ಪೂರ್ವಾನುಮತಿ ಪಡೆಯಬೇಕೆಂದು ಷರತ್ತಿಗೆ ಒಳಪಟ್ಟು ಈ ರಜೆ ಮಂಜೂರು ಮಾಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ  ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶದಲ್ಲಿ ಸೂಚಿಸಿದೆ.

ಇದನ್ನೂ ಓದಿ: ಪರಿಷತ್ ಚುನಾವಣೆಗೆ ಮದ್ಯ ಮಾರಾಟ ನಿರ್ಬಂಧ‌ದಲ್ಲಿ ಮಾರ್ಪಾಡು; ಮತದಾನ, ಎಣಿಕೆ‌‌ ದಿನದಂದು ಮಾತ್ರ ನಿರ್ಬಂಧ

ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 14,432 ಮತದಾರಾರು ಇದ್ದಾರೆ. ಫೆಬ್ರವರಿ 16ರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಒಟ್ಟು 45 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಮತಗಟ್ಟೆಗಳ ಬಳಿ 144 ಸೆಕ್ಷನ್ ಇರಲಿದೆ.ಇನ್ನು ಫೆಬ್ರವರಿ 20 ರಂದು ಬೆಂಗಳೂರಿನ ನೃಪತುಂಗ ರಸ್ತೆಯ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತದಾನದ ಮೇಲ್ವಿಚಾರಣೆಗೆ FST,SST ಟೀಂ ರಚನೆ ಮಾಡಲಾಗಿದೆ.

‘ಮತದಾನದ ದಿನ ಫೆ.16 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಹಾಗೂ ಮತ ಎಣಿಕೆ ನಡೆಯುವ ಫೆ.20 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಮಾತ್ರ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:50 pm, Wed, 14 February 24