Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Tech Summit 2023: ಬೆಂಗಳೂರಿನಲ್ಲಿ ಊಬರ್ ಗ್ರೀನ್ ಕಾರ್ಯಾರಂಭ

ಕ್ಯಾಬ್ ಅಗ್ರಿಗೇಟರ್ ಉಬರ್ ನಗರದಲ್ಲಿ ಎಲೆಕ್ಟ್ರಿಕ್ ವಾಹನ ಸೇವೆ "ಉಬರ್ ಗ್ರೀನ್" (ವಾಹನ) ಅನ್ನು ಪ್ರಾರಂಭಿಸಿದೆ. ಗುರುವಾರ (ನ.30) ರಂದು ಅರಮನೆ ಮೈದಾನದಲ್ಲಿ ಆರಂಭವಾದ ಬೆಂಗಳೂರು ಟೆಕ್ ಸಮ್ಮಿಟ್​ 2023ರಲ್ಲಿ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಊಬರ್​ ಗ್ರೀನ್​​ಗೆ ಚಾಲನೆ ನೀಡಿದರು.

Bengaluru Tech Summit 2023: ಬೆಂಗಳೂರಿನಲ್ಲಿ ಊಬರ್ ಗ್ರೀನ್ ಕಾರ್ಯಾರಂಭ
ಉಬರ್ ಗ್ರೀನ್​
Follow us
ವಿವೇಕ ಬಿರಾದಾರ
|

Updated on:Dec 01, 2023 | 9:19 AM

ಬೆಂಗಳೂರು ಡಿ.01: ಕ್ಯಾಬ್ ಅಗ್ರಿಗೇಟರ್ ಊಬರ್ (Uber) ನಗರದಲ್ಲಿ ಎಲೆಕ್ಟ್ರಿಕ್ ವಾಹನ ಸೇವೆ “ಉಬರ್ ಗ್ರೀನ್” (ವಾಹನ) ಅನ್ನು ಪ್ರಾರಂಭಿಸಿದೆ. ಗುರುವಾರ (ನ.30) ರಂದು ಅರಮನೆ ಮೈದಾನದಲ್ಲಿ ಆರಂಭವಾದ ಬೆಂಗಳೂರು ಟೆಕ್ ಸಮ್ಮಿಟ್​ 2023ರಲ್ಲಿ (Bengaluru Tech Summit) ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಊಬರ್​ ಗ್ರೀನ್​​ಗೆ ಚಾಲನೆ ನೀಡಿದರು. ಮಧ್ಯ ಬೆಂಗಳೂರು (Bengaluru) ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಊಬರ್​ ಗ್ರೀನ್ ಈಗ ಲಭ್ಯವಿದ್ದು, ಶೀಘ್ರದಲ್ಲೇ ಇದನ್ನು ನಗರದ ಹೆಚ್ಚಿನ ಭಾಗಗಳಿಗೆ ವಿಸ್ತರಿಸಲಾಗುವುದು. ಮುಂದಿನ ದಿನಗಳಲ್ಲಿ ಹೆಚ್ಚಿನ ಜನರು ಊಬರ್​ ಗ್ರೀನ್​ ವಾಹನದಲ್ಲಿ ಪ್ರಯಾಣ ಮಾಡಲಿದ್ದಾರೆ. ಈ ಸೇವೆಯು ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕಂಪನಿ ಹೇಳಿದೆ.

ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟವನ್ನು ಸುಧಾರಿಸುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ. ಉಬರ್‌ನ ಈ ಕ್ರಮ ಶ್ಲಾಘನೀಯ. ನಾವು ದೀರ್ಘಾವಧಿಯಲ್ಲಿ ಪರಿಣಾಮಕಾರಿ ಮತ್ತು ಅರ್ಥಪೂರ್ಣ ಬದಲಾವಣೆಗಳಿಗೆ ದಾರಿ ಮಾಡಿಕೊಡುವ ಮತ್ತು ಸುಸ್ಥಿರತೆಯ ಸಂಸ್ಕೃತಿಯನ್ನು ಬೆಳೆಸುವ ಸ್ಪಷ್ಟವಾದ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಪ್ರಿಯಾಂಕ್​ ಖರ್ಗೆ ಹೇಳಿದರು.

ಊಬರ್ ಇಂಡಿಯಾ ಅಧ್ಯಕ್ಷ ಪ್ರಭಜೀತ್ ಸಿಂಗ್ ಮಾತನಾಡಿ ಊಬರ್ ಸುಸ್ಥಿರತೆಗೆ “ಅಚಲವಾದ ಬದ್ಧತೆಯನ್ನು” ಹೊಂದಿದೆ ಮತ್ತು ಉಬರ್ ಗ್ರೀನ್ ಅದರತ್ತ ಒಂದು ಹೆಜ್ಜೆಯಾಗಿದೆ. ಬೆಂಗಳೂರಿನಲ್ಲಿ ಊಬರ್ ಗ್ರೀನ್‌ ಆರಂಭವಾಗಿರುವುದು ದೇಶದಲ್ಲಿ ನಮ್ಮದು ಎರಡನೇ ಹೆಜ್ಜೆಯಾಗಿದೆ. ಇದು ಈಗಾಗಲೇ ಮುಂಬೈನಲ್ಲಿ ಕಾರ್ಯನಿರ್ವಹಿಸುತ್ತಿದೆ, ಅಲ್ಲಿ ಅನೇಕ ಜನರು ಊಬರ್​ ಗ್ರೀನ್​​ ಬಳಸುತ್ತಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:10 am, Fri, 1 December 23

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ