AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Tech Summit 2023: ಬೆಂಗಳೂರಿನಲ್ಲಿ ಊಬರ್ ಗ್ರೀನ್ ಕಾರ್ಯಾರಂಭ

ಕ್ಯಾಬ್ ಅಗ್ರಿಗೇಟರ್ ಉಬರ್ ನಗರದಲ್ಲಿ ಎಲೆಕ್ಟ್ರಿಕ್ ವಾಹನ ಸೇವೆ "ಉಬರ್ ಗ್ರೀನ್" (ವಾಹನ) ಅನ್ನು ಪ್ರಾರಂಭಿಸಿದೆ. ಗುರುವಾರ (ನ.30) ರಂದು ಅರಮನೆ ಮೈದಾನದಲ್ಲಿ ಆರಂಭವಾದ ಬೆಂಗಳೂರು ಟೆಕ್ ಸಮ್ಮಿಟ್​ 2023ರಲ್ಲಿ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಊಬರ್​ ಗ್ರೀನ್​​ಗೆ ಚಾಲನೆ ನೀಡಿದರು.

Bengaluru Tech Summit 2023: ಬೆಂಗಳೂರಿನಲ್ಲಿ ಊಬರ್ ಗ್ರೀನ್ ಕಾರ್ಯಾರಂಭ
ಉಬರ್ ಗ್ರೀನ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Dec 01, 2023 | 9:19 AM

Share

ಬೆಂಗಳೂರು ಡಿ.01: ಕ್ಯಾಬ್ ಅಗ್ರಿಗೇಟರ್ ಊಬರ್ (Uber) ನಗರದಲ್ಲಿ ಎಲೆಕ್ಟ್ರಿಕ್ ವಾಹನ ಸೇವೆ “ಉಬರ್ ಗ್ರೀನ್” (ವಾಹನ) ಅನ್ನು ಪ್ರಾರಂಭಿಸಿದೆ. ಗುರುವಾರ (ನ.30) ರಂದು ಅರಮನೆ ಮೈದಾನದಲ್ಲಿ ಆರಂಭವಾದ ಬೆಂಗಳೂರು ಟೆಕ್ ಸಮ್ಮಿಟ್​ 2023ರಲ್ಲಿ (Bengaluru Tech Summit) ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಊಬರ್​ ಗ್ರೀನ್​​ಗೆ ಚಾಲನೆ ನೀಡಿದರು. ಮಧ್ಯ ಬೆಂಗಳೂರು (Bengaluru) ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಊಬರ್​ ಗ್ರೀನ್ ಈಗ ಲಭ್ಯವಿದ್ದು, ಶೀಘ್ರದಲ್ಲೇ ಇದನ್ನು ನಗರದ ಹೆಚ್ಚಿನ ಭಾಗಗಳಿಗೆ ವಿಸ್ತರಿಸಲಾಗುವುದು. ಮುಂದಿನ ದಿನಗಳಲ್ಲಿ ಹೆಚ್ಚಿನ ಜನರು ಊಬರ್​ ಗ್ರೀನ್​ ವಾಹನದಲ್ಲಿ ಪ್ರಯಾಣ ಮಾಡಲಿದ್ದಾರೆ. ಈ ಸೇವೆಯು ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕಂಪನಿ ಹೇಳಿದೆ.

ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟವನ್ನು ಸುಧಾರಿಸುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ. ಉಬರ್‌ನ ಈ ಕ್ರಮ ಶ್ಲಾಘನೀಯ. ನಾವು ದೀರ್ಘಾವಧಿಯಲ್ಲಿ ಪರಿಣಾಮಕಾರಿ ಮತ್ತು ಅರ್ಥಪೂರ್ಣ ಬದಲಾವಣೆಗಳಿಗೆ ದಾರಿ ಮಾಡಿಕೊಡುವ ಮತ್ತು ಸುಸ್ಥಿರತೆಯ ಸಂಸ್ಕೃತಿಯನ್ನು ಬೆಳೆಸುವ ಸ್ಪಷ್ಟವಾದ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಪ್ರಿಯಾಂಕ್​ ಖರ್ಗೆ ಹೇಳಿದರು.

ಊಬರ್ ಇಂಡಿಯಾ ಅಧ್ಯಕ್ಷ ಪ್ರಭಜೀತ್ ಸಿಂಗ್ ಮಾತನಾಡಿ ಊಬರ್ ಸುಸ್ಥಿರತೆಗೆ “ಅಚಲವಾದ ಬದ್ಧತೆಯನ್ನು” ಹೊಂದಿದೆ ಮತ್ತು ಉಬರ್ ಗ್ರೀನ್ ಅದರತ್ತ ಒಂದು ಹೆಜ್ಜೆಯಾಗಿದೆ. ಬೆಂಗಳೂರಿನಲ್ಲಿ ಊಬರ್ ಗ್ರೀನ್‌ ಆರಂಭವಾಗಿರುವುದು ದೇಶದಲ್ಲಿ ನಮ್ಮದು ಎರಡನೇ ಹೆಜ್ಜೆಯಾಗಿದೆ. ಇದು ಈಗಾಗಲೇ ಮುಂಬೈನಲ್ಲಿ ಕಾರ್ಯನಿರ್ವಹಿಸುತ್ತಿದೆ, ಅಲ್ಲಿ ಅನೇಕ ಜನರು ಊಬರ್​ ಗ್ರೀನ್​​ ಬಳಸುತ್ತಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:10 am, Fri, 1 December 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್