AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಔಷಧ ಹೆಸರಿನಲ್ಲಿ ಟೆಕ್ಕಿಗೆ ವಂಚಿಸಿ ಕಿಡ್ನಿಗೆ ಹಾನಿಗೆ ಕಾರಣನಾಗಿದ್ದ ವಿಜಯ್ ಗುರೂಜಿ ಬಂಧನ

ಬೆಂಗಳೂರು ಟೆಕ್ಕಿ ತೇಜಸ್‌ ಎಂಬವರನ್ನು ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಮೋಸಮಾಡಿ 48 ಲಕ್ಷ ರೂ. ವಂಚಿಸಿದ ವಿಜಯ್ ಗುರೂಜಿಯನ್ನು ಬೆಂಗಳೂರಿನ ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಔಷಧಿಯಿಂದ ಕಿಡ್ನಿ ಹಾನಿಯಾದ ಬಳಿಕ ತೇಜಸ್ ದೂರು ನೀಡಿದ್ದರು. ಪ್ರಕರಣದಲ್ಲಿ ತನಿಖೆ ಮುಂದುವರಿದೆ.

ಲೈಂಗಿಕ ಔಷಧ ಹೆಸರಿನಲ್ಲಿ ಟೆಕ್ಕಿಗೆ ವಂಚಿಸಿ ಕಿಡ್ನಿಗೆ ಹಾನಿಗೆ ಕಾರಣನಾಗಿದ್ದ ವಿಜಯ್ ಗುರೂಜಿ ಬಂಧನ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on:Dec 02, 2025 | 9:10 AM

Share

ಬೆಂಗಳೂರು, ಡಿಸೆಂಬರ್ 2: ಲೈಂಗಿಕ ಸಮಸ್ಯೆಗೆ ಚಿಕಿತ್ಸೆ ಕೊಡಿಸುವುದಾಗಿ ನಂಬಿಸಿ ಐಟಿ ಉದ್ಯೋಗಿಯಿಂದ 48 ಲಕ್ಷ ರೂ. ವಂಚಿಸಿದ ಪ್ರಕರಣದಲ್ಲಿ ವಿಜಯ್ ಗುರೂಜಿ (Vijay Guruji) ಎಂಬವರನ್ನು ಬೆಂಗಳೂರಿನ (Bengaluru) ಜ್ಞಾನಭಾರತಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೇಜಸ್ ಎಂಬ ಟೆಕ್ಕಿ ಲೈಂಗಿಕ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಕೆಂಗೇರಿ ಸನೈರಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹೋಗಿ ಬರುವಾಗ ರಸ್ತೆ ಪಕ್ಕದ ಟೆಂಟ್‌ನಲ್ಲಿ ‘‘ಲೈಂಗಿಕ ಸಮಸ್ಯೆಗೆ ಚಿಕಿತ್ಸೆ’’ ಎಂಬ ಬೋರ್ಡ್ ನೋಡಿ ಒಳಗೆ ಹೋಗಿದ್ದರು. ಅಲ್ಲಿ ಭೇಟಿಯಾದ ವ್ಯಕ್ತಿ ವಿಜಯ್ ಗುರೂಜಿಯನ್ನು ಪರಿಚಯಿಸಿ, ಆಯುರ್ವೇದಿಕ್ ಚಿಕಿತ್ಸೆ ಮೂಲಕ ಸಮಸ್ಯೆ ಗುಣವಾಗುತ್ತದೆ ಎಂದು ಭರವಸೆ ನೀಡಿದ್ದರು.

ತೇಜಸ್ ನಂತರ ಟೆಂಟ್‌ ಗುರೂಜಿಯನ್ನು ಭೇಟಿಯಾಗಿ ‘ದೇವರಾಜ್ ಬೂಟಿ’ ಎಂಬ 1 ಗ್ರಾಂ ಔಷಧಿಗೆ 1.60 ಲಕ್ಷ ರೂ. ದರ ಫಿಕ್ಸ್ ಮಾಡಲಾಗಿತ್ತು. ಯಶವಂತಪುರದ ವಿಜಯಲಕ್ಷ್ಮೀ ಆಯುರ್ವೇದಿಕ್ ಶಾಪ್‌ಗೆ ಹೋಗಿ ಮಾತ್ರೆಗಳು ಮತ್ತು ‘ದೇವರಾಜ್ ಬೂಟಿ’ಯನ್ನು ಖರೀದಿಸುವಂತೆ ಸೂಚಿಸಲಾಗಿತ್ತು. ಆನ್‌ಲೈನ್ ಪೇಮೆಂಟ್ ಮಾಡಬಾರದು, ಯಾರನ್ನೂ ಜೊತೆಗೆ ಕರೆದುಕೊಂಡು ಬರಬಾರದು ಎಂದು ಕಟ್ಟುನಿಟ್ಟಿನ ಷರತ್ತು ಹಾಕಲಾಗಿತ್ತು. ತೇಜಸ್ ಒಂದೇ ಬಾರಿಗೆ ಅಲ್ಲ, ಹಲವಾರು ಬಾರಿ ‘ದೇವರಾಜ್ ಬೂಟಿ’ ಮತ್ತು ‘ಭವನ ಬೂಟಿ ತೈಲ’ಗಳನ್ನು ಖರೀದಿಸುತ್ತಾ ಒಟ್ಟಿನಲ್ಲಿ 48 ಲಕ್ಷ ರೂ. ಖರ್ಚು ಮಾಡಿದ್ದರು.

ಆದರೆ, ಔಷಧಿ ಸೇವಿಸಿದರೂ ಲೈಂಗಿಕ ಸಮಸ್ಯೆ ಪರಿಹಾರವಾಗದೇ, ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆ ತೇಜಸ್ ರಕ್ತ ಪರೀಕ್ಷೆ ಮಾಡಿಸಿದಾಗ ಕಿಡ್ನಿಗೆ ಗಂಭೀರ ಸಮಸ್ಯೆ ಉಂಟಾಗಿದೆ ಎಂಬುದು ಪತ್ತೆಯಾಯಿತು. ಆಯುರ್ವೇದಿಕ್ ಮಿಶ್ರಣವೇ ಕಿಡ್ನಿ ಹಾನಿಗೆ ಕಾರಣ ಎಂದು ವೈದ್ಯರು ಸೂಚಿಸಿದ್ದಾರೆ. ತೇಜಸ್ ಚಿಕಿತ್ಸೆ ಪರಿಣಾಮಕಾರಿಯಲ್ಲ ಎಂದು ಪ್ರಶ್ನಿಸಿದಾಗ ವಿಜಯ್ ಗುರೂಜಿಮ ‘ಸಮಸ್ಯೆ ಇನ್ನೂ ಹೆಚ್ಚಾಗುವಂತೆ ಮಾಡುತ್ತೇನೆ’ ಎಂದು ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೆಪದಲ್ಲಿ ಟೆಕ್ಕಿಗೆ ಟೋಪಿ; ಕಿಡ್ನಿಗೂ ಹಾನಿ

ಘಟನೆಯ ಬಗ್ಗೆ ತೇಜಸ್ ಜ್ಞಾನಭಾರತಿ ಪೊಲೀಸರಿಗೆ ದೂರು ನೀಡಿದ್ದರು. ನಂತರ ತನಿಖೆ ನಡೆಸಿದ ಪೊಲೀಸರು ವಿಜಯ್ ಗುರೂಜಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಜಯಲಕ್ಷ್ಮೀ ಆಯುರ್ವೇದಿಕ್ ಶಾಪ್‌ ಬಗ್ಗೆಯೂ ತನಿಖೆ ಆರಂಭಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 am, Tue, 2 December 25

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ