AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟೆಕ್ಕಿ ನಿಗೂಢ ನಾಪತ್ತೆ; ಹುಡುಕಿಕೊಡುವಂತೆ ಎಕ್ಸ್​ ಮೂಲಕ ಪೊಲೀಸ್ ಆಯುಕ್ತರಿಗೆ ಪತ್ನಿ ಮನವಿ

ಬೆಂಗಳೂರಿನ ಟೆಕ್ಕಿಯೊಬ್ಬರು ನಿಗೂಢವಾಗಿ ಕಾಣೆಯಾಗಿದ್ದು ಹುಡುಕಾಡಲು ಪತ್ನಿ ಹರಸಾಹಸ ಪಡುತ್ತಿದ್ದಾರೆ. ನಾಪತ್ತೆಯಾದ ಪತಿ ಹುಡುಕಲು ಸಹಾಯ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಮಾಡಿ ಕಣ್ಣೀರಿಟ್ಟಿದ್ದಾರೆ. ಅಲ್ಲದೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಎಕ್ಸ್ ಮೂಲಕ ದೂರು ನೀಡಿದ್ದಾರೆ. ಇನ್ನು ಕೋಡಿಗೆಹಳ್ಳಿ ಪೊಲೀಸ್ ಠಾಣೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಬೆಂಗಳೂರಿನಲ್ಲಿ ಟೆಕ್ಕಿ ನಿಗೂಢ ನಾಪತ್ತೆ; ಹುಡುಕಿಕೊಡುವಂತೆ ಎಕ್ಸ್​ ಮೂಲಕ ಪೊಲೀಸ್ ಆಯುಕ್ತರಿಗೆ ಪತ್ನಿ ಮನವಿ
ಬೆಂಗಳೂರಿನಲ್ಲಿ ಟೆಕ್ಕಿ ನಿಗೂಢ ನಾಪತ್ತೆ
Jagadisha B
| Edited By: |

Updated on: Aug 12, 2024 | 9:17 AM

Share

ಬೆಂಗಳೂರು, ಆಗಸ್ಟ್​.12: ಮಾನ್ಯತಾ ಟೆಕ್ ಪಾರ್ಕ್​ನ ಕಂಪನಿಯೊಂದರಲ್ಲಿ ಟೆಕ್ಕಿಯಾಗಿರುವ ವಿಪಿನ್ ಗುಪ್ತಾ (37) ಕಾಣೆಯಾಗಿದ್ದಾರೆ (Missing). ಕೈಯಲ್ಲಿ ಟಿ ಶರ್ಟ್​ ಹಿಡಿದು ತನ್ನ ಕವಾಸಕಿ ಬೈಕ್​ ತೆಗೆದುಕೊಂಡು ಮನೆ ಬಿಟ್ಟಿದ್ದ ಪತಿ ಎಂಟು ದಿನ ಕಳೆದರೂ ಮನೆಗೆ ಬಂದಿಲ್ಲ, ಹುಡುಕಿಕೊಡಿ ಎಂದು ವಿಪಿನ್ ಪತ್ನಿ ನಗರ ಪೊಲೀಸ್ ಆಯುಕ್ತರಿಗೆ ಎಕ್ಸ್​ ಖಾತೆ ಮೂಲಕ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ. ಇನ್ನು ಮನೆ ಬಿಟ್ಟ ಕೆಲವೇ ನಿಮಿಷಗಳಲ್ಲಿ ಟೆಕ್ಕಿ 1 ಲಕ್ಷದ 80 ಸಾವಿರ ಹಣ ಡ್ರಾ ಮಾಡಿ ಕೊಂಡಿದ್ದು ಯಾರಾದರೂ ಬ್ಲಾಕ್ ಮೇಲ್ ಮಾಡಿ ಹಣ ಪಡೆದು ಕಿಡ್ನಾಪ್ (Kidnap) ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಕಳೆದ ಮೂರು ವರ್ಷದಿಂದ ಬೆಂಗಳೂರಿನಲ್ಲಿ ಪತ್ನಿ, ಮಕ್ಕಳ ಜೊತೆ ವಾಸವಿದ್ದ ವಿಪಿನ್ ಲಕ್ನೋ ಮೂಲದವರು. ಕಳೆದ 8 ದಿನಗಳ ಹಿಂದೆ ಅಂದರೆ ಇದೇ ತಿಂಗಳ 04 ರಂದು ಮಧ್ಯಾಹ್ನ 12:44ಕ್ಕೆ ಏಕಾಏಕಿ ಪತ್ನಿಗೂ ಒಂದು ಮಾತು ತಿಳಿಸದೆ ಕೈಯಲ್ಲಿ ಟಿ ಶರ್ಟ್ ಹಿಡಿದು ಮನೆಯಿಂದ ಹೊರಗೆ ಹೆಜ್ಜೆ ಹಾಕಿದ ವಿಪಿನ್ ಬಳಿಕ ತನ್ನ ಕವಾಸಕಿ ಬೈಕ್ ತೆಗೆದುಕೊಂಡಿ ಆಚೆ ಹೋಗಿದ್ದರು. ನಿನ್ನೆ ಬರುತ್ತಾರೆ ಎಂದು ಎಷ್ಟೋ ಕಾದರೂ ಪತಿ ಹಿಂದಿರುಗಿಲ್ಲ. ಅಲ್ಲದೆ ವಿಪಿನ್ ಮನೆ ಬಿಟ್ಟ ಕೆಲವೇ ನಿಮಿಷಗಳಲ್ಲಿ 1 ಲಕ್ಷ 80 ಸಾವಿರ ಹಣ ಡ್ರಾ ಆಗಿದೆ. ಆ ಬಳಿಕ ಟೆಕ್ಕಿ ವಿಪಿನ್ ಮೊಬೈಲ್ ಸ್ವಿಚ್ ಆಫ್ ಆಗಿದೆ.

ಇದನ್ನೂ ಓದಿ: ಕೊಚ್ಚಿಹೋದ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್; ನದಿಗೆ ನೀರು ಬಿಡುಗಡೆ, ನದಿ ಪಾತ್ರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ

ವಿಪಿನ್ ಕಳೆದ ಎಂಟು ದಿನಗಳಿಂದ ಮನೆಗೆ ಬಂದಿಲ್ಲ. ಇದರಿಂದ ಪತ್ನಿ ಹಾಗೂ ಇಬ್ಬರು ಮಕ್ಕಳು ಕಂಗಾಲಾಗಿದ್ದಾರೆ. ಕಾಣೆಯಾದ ಪತಿ ಹುಡುಕಿಕೊಡುವಂತೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದು ದೂರು ನೀಡಿದರೂ ಪೊಲೀಸರು ಬೇಜವಾಬ್ದಾರಿ ತೋರಿಸಿದ್ದಾರೆ. ಪತಿ ಕಾಣೆಯಾಗಿ 8 ದಿನಗಳೆದರೂ ಪೊಲೀಸರು ಯಾವುದೇ ಹುಡುಕುವ ಪ್ರಯತ್ನ ಮಾಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ. ಸದ್ಯ ಈಗ ನಗರ ಪೊಲೀಸ್ ಆಯುಕ್ತರಿಗೆ ಎಕ್ಸ್​ ಖಾತೆ ಮೂಲಕ ಪತಿ ಹುಡುಕಿಕೊಂಡುವಂತೆ ಮನವಿ ಮಾಡಿದ್ದಾರೆ. ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪತಿ ಕಾಣೆಯಾದ ಬಗ್ಗೆ ಮಾಹಿತಿ ಹಂಚಿಕೊಂಡು ಸಹಾಯ ಮಾಡುವಂತೆ ಅಂಗಲಾಚಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!