AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ

ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ನೆರೆಮನೆಯವನಾದ ಕರ್ನಲ್, ಶರ್ಮಿಳಾರನ್ನು ಅತ್ಯಾಚಾರ ಮಾಡಲು ಯತ್ನಿಸಿ, ನಂತರ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಒಂದುವರೆ ತಿಂಗಳಿಂದ ಆಕೆಯನ್ನು ಹಿಂಬಾಲಿಸುತ್ತಿದ್ದ ಆರೋಪಿ, ಹತ್ಯೆ ನಂತರ ಬೆಂಕಿ ಹಚ್ಚಿ ಅಗ್ನಿಅವಘಡದಿಂದ ಸಾವು ಸಂಭವಿಸಿದೆ ಎಂದು ಬಿಂಬಿಸಲು ಯತ್ನಿಸಿದ್ದ. ಆದರೆ ನಡೆದಿದ್ದೇನು ಎಂಬುದನ್ನು ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ.

ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ
ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 26, 2026 | 12:57 PM

Share

ಬೆಂಗಳೂರು, ಜನವರಿ 26: ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಹತ್ಯೆ (Techie Sharmila case) ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ತನಿಖೆ ವೇಳೆ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ. ನೆರೆಮನೆಯವನೇ ಆದ ಆರೋಪಿ ಕರ್ನಲ್ (18), ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನುವ ಶಂಕೆ ವ್ಯಕ್ತವಾಗಿತ್ತು. ಮೊದಲಿಗೆ ದೌರ್ಜನ್ಯದ ಆರೋಪವನ್ನು ಕರ್ನಲ್ ತಳ್ಳಿಹಾಕಿದ್ದ. ಆದರೀಗ ಆಕೆಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿರುವುದಾಗಿ ಪೊಲೀಸ್ ತನಿಖೆಯ ವೇಳೆ ಒಪ್ಪಿಕೊಂಡಿದ್ದಾನೆ.

ಹೊಂಚು ಹಾಕಿ ಕಾದು ಕುಳಿತಿದ್ದ ಯುವಕ

34 ವಯಸ್ಸಿನ ಟೆಕ್ಕಿ ಶರ್ಮಿಳಾನ್ನು ಪ್ರೀತಿಸುತ್ತಿದ್ದ. ಆಕೆಯ ಹತ್ಯೆಗೂ ಒಂದುವರೆ ತಿಂಗಳಿಂದ ಪ್ರತಿನಿತ್ಯ ಟೆರಸ್ ಮೇಲೆ ಯುವತಿಯ ಚಲನ ವಲನಗಳನ್ನು ಗಮನಿಸುತ್ತಿದ್ದ. ಶರ್ಮಿಳಾ ಕೆಲಸಕ್ಕೆ ಹೋಗುವಾಗಲೂ ಆಕೆಯನ್ನು ಹಿಂಬಾಲಿಸುತ್ತಿದ್ದ ಯುವಕ, ಕೆಲಸ ಮುಗಿಸಿ ಆಕೆ ವಾಪಸ್ ಬರುವ ವೇಳೆ ಕಾದು ಕೂರುತ್ತಿದ್ದ ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಹಲವು ದಿನಗಳಿಂದ ಆಕೆಯ ಮೇಲೆ ಕಣ್ಣಿಟ್ಟಿದ್ದ ಆರೋಪಿ ಜನವರಿ 3ರ ರಾತ್ರಿ ಟೆಕ್ಕಿಯ ಮನೆಗೆ ನುಗ್ಗಿ, ಆಕೆಯ ಮೇಲೆ ಮೇಲೆ ಅತ್ಯಾಚಾರಕ್ಕೆ ಪ್ರಯತ್ನ ಪಟ್ಟಿದ್ದಾಗಿ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ.

ಇದನ್ನೂ ಓದಿ ಬೆಂಗಳೂರಿನಲ್ಲಿ ಮಂಗಳೂರು ಮೂಲದ ಟೆಕ್ಕಿ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್: ಹತ್ಯೆಗೂ ಮುನ್ನ ರೇಪ್ ಮಾಡಿರುವ ಶಂಕೆ

ಆ ರಾತ್ರಿ ನಡೆದಿದ್ದೇನು?

ಶರ್ಮಿಳಾ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಯತ್ನಿಸಿದ ಸಮಯದಲ್ಲಿ ಆಕೆ ಜೋರಾಗಿ ಕಿರುಚಿಕೊಂಡಿದ್ದರು. ಈ ವೇಳೆ ಆಕೆಯ ಬಾಯಿಯನ್ನು ಗಟ್ಟಿಯಾಗಿ ಮುಚ್ಚಿದ್ದ. ಮಹಿಳೆ ಎಷ್ಟೇ ಬೇಡಿಕೊಂಡರೂ ಕನಿಕರವಿಲ್ಲದೆ ಕತ್ತು ಹಿಸುಕಿ ಕೊಲೆ ಮಾಡಿದ್ದ. ಆ ಬಳಿಕ ಟಿಶ್ಯು ಪೇಪರ್ ಹಾಸಿಗೆ ಮೇಲಿಟ್ಟು ಬೆಂಕಿ ಹಚ್ಚಿದ್ದ ಕಿರಾತಕ‌, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಾಲ್ಕನಿ ಡೋರ್ ಮೂಲಕವೇ ಜಿಗಿದು ಪರಾರಿಯಾಗಿದ್ದ. ಅಗ್ನಿ ಅವಘಡದಿಂದಾಗಿ ಮಹಿಳೆ ಸಾವನ್ನಪ್ಪಿದ್ದಾರೆಂದು ಬಿಂಬಿಸಲು ಹೊರಟಿದ್ದವನ ಸತ್ಯ ವಿಚಾರಣೆ ವೇಳೆ ಹೊರಬಂದಿದೆ. ಸಧ್ಯಕ್ಕೆ ಮೃತರ ಪೋಸ್ಟ್​ಮಾರ್ಟಮ್ ರಿಪೋರ್ಟ್​ ಸೇರಿ ಕೆಲ ಮೆಡಿಕಲ್ ಸ್ಯಾಂಪಲ್​ಗಳನ್ನು ಎಫ್​ಎಸ್​ಎಲ್ಗೆ ಕಳುಹಿಸಲಾಗಿದ್ದು, ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?