AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ, ಒಣ ಹವೆ!

Karnataka Weather: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯಿದ್ದು, ಇಂದಿನಂತೆ ಕೆಲ ದಿನಗಳ ಕಾಲ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇವಿಸಲು ವೈದ್ಯರು ಸಲಹೆ ನೀಡಿದ್ದಾರೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ, ಒಣ ಹವೆ!
ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ!
ಭಾವನಾ ಹೆಗಡೆ
|

Updated on: Jan 25, 2026 | 7:28 AM

Share

ಬೆಂಗಳೂರು, ಜನವರಿ 25: ಇಂದೂ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ (Weather Forecast) ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಮಂಜು

ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 17°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ
ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ
ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ
ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?