AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಇಂದು ಒಣ ಹವೆ, ಹೆಚ್ಚಿನ ತಾಪಮಾನ!

Karnataka Weather: ಬೆಂಗಳೂರಿನಲ್ಲಿ ಹೀಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಇಂದು ಒಣ ಹವೆಯಿದ್ದು, ಇನ್ನೂ ಕೆಲ ದಿನ ಇದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಇಂದು ಒಣ ಹವೆ, ಹೆಚ್ಚಿನ ತಾಪಮಾನ!
ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಇಂದು ಒಣ ಹವೆ, ಹೆಚ್ಚಿನ ತಾಪಮಾನ!
ಭಾವನಾ ಹೆಗಡೆ
|

Updated on: Mar 10, 2026 | 7:58 AM

Share

ಬೆಂಗಳೂರು, ಮಾರ್ಚ್​ 10: ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ.

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಮಾರ್ಚ್​ ಎರಡನೇ ವಾರದಲ್ಲಿ ತಾಪಮಾನ ಹೆಚ್ಚಳ

ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us