ಕರ್ನಾಟಕ ಹವಾಮಾನ ವರದಿ: ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ!

Karnataka Weather: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಇಂದೂ ಸಹ ಕರಾವಳಿ, ಉತ್ತರದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ. ಆದರೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇನ್ನೂ ಹಲವು ದಿನಗಳವರೆಗೂ ರಾಜ್ಯದಲ್ಲಿ ಶುಷ್ಕ ವಾತಾವರಣ ಇರಬಹುದು ಎಂದು ಇಲಾಖೆ ಮುನ್ಸೂಚನೆ ನಿಡಿದೆ.

ಕರ್ನಾಟಕ ಹವಾಮಾನ ವರದಿ: ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ!
ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ!

Updated on: Feb 21, 2026 | 8:11 AM

ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ಇಂದು ಕೆಲ ಪ್ರದೇಶಗಳಲ್ಲಿ ಮಳೆರಾಯನ ಆಗಮನವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಎಲ್ಲೆಲ್ಲಿ ಮಳೆ , ಒಣ ಹವೆ?

ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡಗು ಸಹಿತ ಸಾಧಾರಣ ಮಳೆಯಾಗಬಹುದೆಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಶುಷ್ಕ ವಾತಾವರಣ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 18°C ಇದ್ದು, ಗರಿಷ್ಠ 31°C ಇರಲಿದೆ ಎಂದು ಇಲಾಖೆ ತಿಳಿಸಿದೆ. ನಗರದ ತಾಪಮಾನದಲ್ಲಿ ತಕ್ಕಮಟ್ಟಿಗೆ ಸುಧಾರಣೆಯಾಗಿದ್ದು, ಶುಷ್ಕ ವಾತಾವರಣ ಮುಂದುವರೆದಿದೆ. ಇಂದು ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.