ಕರ್ನಾಟಕ ಹವಾಮಾನ ವರದಿ: ಇಂದೂ ಗುಡುಗು ಸಹಿತ ಮಳೆಯಾಗುವ ಸಂಭವ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

Karnataka Weather: ರಾಜ್ಯದಲ್ಲಿ ಹಲವು ದಿನಗಳು ಸಾಧಾರಣ ಮಳೆಯಾಗಿದೆ. ಇಂದೂ ಸಹ ಹಲವೆಡೆ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಹವಾಮಾನ ಇಲಾಖೆ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಿದೆ. ಉಳಿದೆಡೆ ಒಣಹವೆಯಿರಲಿದ್ದು, ಬೆಂಗಳೂರಿನಲ್ಲಿ ಇಂದೂ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ಇಂದೂ ಗುಡುಗು ಸಹಿತ ಮಳೆಯಾಗುವ ಸಂಭವ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!
ಇಂದೂ ಗುಡುಗು ಸಹಿತ ಮಳೆಯಾಗುವ ಸಂಭವ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

Updated on: Apr 06, 2026 | 7:41 AM

ಬೆಂಗಳೂರು, ಏಪ್ರಿಲ್ 06: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ  (Weather Forecast)ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​

ಕಲಬುರ್ಗಿ, ಧಾರವಾಡ, ಗದಗ, ಶಿವಮೊಗ್ಗ ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ಇದನ್ನೂ ಓದಿ 1,2,3,4,5,6,7 ಈ ದಿನದಂದು ಮಧ್ಯಾಹ್ನದ ನಂತರ ಬರಲಿದೆ ಗುಡುಗು ಸಹಿತ ಮಳೆ; ಎಲ್ಲೆಲ್ಲಿ ಮಳೆಯಾಗಬಹುದು?

ಎಲ್ಲೆಲ್ಲಿ ಮಳೆ

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ರಾಯಚೂರು ಮತ್ತು ಕಲ್ಬುರ್ಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಕೋಲಾರದಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:40 am, Mon, 6 April 26

Follow Us