AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ

Karnataka Weather: ಹೊಸ ವರ್ಷದ ಕೊಡುಗೆಯೆಂಬಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದ್ದು, ಇಂದೂ ಸಹ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ
ರಾಜ್ಯದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ
ಭಾವನಾ ಹೆಗಡೆ
|

Updated on: Jan 02, 2026 | 7:44 AM

Share

ಬೆಂಗಳೂರು, ಜನವರಿ 02: ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಕೆಲವೆಡೆ ಲಘು ಮಳೆಯಾಗುವ (Weather Forecast) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಹಾಗೆಯೇ ಇಂದೂ ಸಹ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆ

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನ ತಾಪಮಾನದಲ್ಲಿ ಅಷ್ಟೇನೂ ಸುಧಾರಣೆಯಿಲ್ಲದ ಕಾರಣ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣಹವೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿಯಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಮಂಜು

ಬೆಂಗಳೂರಿನಲ್ಲಿ ಇಂದು ಮಂಜು ಕವಿದ ವಾತಾವರಣವಿದ್ದು, ತಾಪಮಾನ ಕನಿಷ್ಠ 16°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ