AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru news: ಭಯೊತ್ಪಾದಕ‌ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಕಟ

ಬೆಂಗಳೂರು: ಅಪಾರ ಪ್ರಮಾಣದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳು, ಉಪಕರಣಗಳು, ರಾಸಾಯನಿಕ ಸ್ಪೂಟಕಗಳನ್ನು ಸಂಗ್ರಹಣೆ ಮಾಡಿ ಭಯೋತ್ಪಾದನಾ ಚಟುವಟಕಿಯಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಕರಟಗೊಂಡಿದೆ.

Bengaluru news: ಭಯೊತ್ಪಾದಕ‌ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಕಟ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 14, 2023 | 4:43 PM

Share

ಬೆಂಗಳೂರು: ನಗರದಲ್ಲಿ ಭಯೊತ್ಪಾದಕ‌ ಚಟುವಟಿಕೆಯಲ್ಲಿ (Terrorist Activity Case) ತೊಡಗಿದ್ದ ನಾಲ್ವರು ಆರೋಪಿಗಳಿಗೆ ಎನ್‌ಐಎ ವಿಶೇಷ ನ್ಯಾಯಾಲಯವು (NIA Special Court) ಏಳು ವರ್ಷ ಶಿಕ್ಷೆ ಪ್ರಕಟಗೊಳಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನ ಸೋಲದೇವನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್, ಕಡೋರ್ ಕಾಜಿ ಅಲಿಯಾಸ್ ಮಿಜನೂರ್ ರಹಮಾನ್, ಆದಿಲ್ ಶೇಖ್ ಅಲಿಯಾಸ್ ಅಸಾದುಲ್ಲಾ, ಅಬ್ದುಲ್ ಕರೀಮ್ ಅಲಿಯಾಸ್ ಕೊರಿಮ್, ಲಾಲ್ಜನ್ ಶೇಖ್ ಎಂಬ ಆರೋಪಿಗಳಿಗೆ 7 ವರ್ಷ ಶಿಕ್ಷೆ ವಿಧಿಸಿ ಆದೇಶಿಸಿದೆ.

ಬಾಂಬ್‌ಗಳು ಮತ್ತು ಐಇಡಿಗಳ ತಯಾರಿಕೆಗೆ ಬಳಸುವ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳು, ಉಪಕರಣಗಳು, ರಾಸಾಯನಿಕ ಸ್ಪೂಟಕಗಳನ್ನು ಆರೋಪಿಗಳು ಅಪಾರ ಪ್ರಮಾಣದಲ್ಲಿ ಸಂಗ್ರಹಣೆ ಮಾಡಿದ್ದರು. ರಾಜ್ಯದಲ್ಲಿ ರಾಕೇಟ್ ಲಾಂಚರ್ ಅನ್ನು ಪರೀಕ್ಷೆಯನ್ನೂ ಈ ಆರೋಪಿಗಳು ನಡೆಸಿದ್ದರು. ಈ ಎಲ್ಲಾ ಕುಕೃತ್ಯಗಳಿಗೆ ಡಕಾಯಿತಿ ಮುಖಾಂತರ ಹಣ ಸಂಗ್ರಹಣೆ ಮಾಡುತ್ತಿದ್ದರು.

ಆರೋಪಿಗಳ ವಿರುದ್ಧ ಬೆಂಗಳೂರಿನ ಅತ್ತಿಬೆಲೆ, ಕೆ.ಆರ್.ಪುರ ಸೇರಿದಂತೆ ಬೆಂಗಳೂರಿನ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಆರೋಪಿಗಳ ವಿರುದ್ಧ ಬೆಂಗಳೂರಿನ ಸೋಲದೇವನಹಳ್ಳಿ ಠಾಣೆಯಲ್ಲಿ 2019ರ ಜುಲೈ 7ರಂದು ದಾಖಲಾಗಿತ್ತು. ಗಂಭೀರ ಪ್ರಕರಣವಾಗಿದ್ದರಿಂದ ಪ್ರಕರಣದ ತನಿಖೆಯನ್ನು ಅದೇ ವರ್ಷದ ಜುಲೈ 29ರಂದು ಎನ್​ಐಎ ಹೆಗಲಿಗೆ ನೀಡಲಾಗಿತ್ತು.

ಇದನ್ನೂ ಓದಿ: NIA ಭರ್ಜರಿ ಕಾರ್ಯಾಚರಣೆ: ಬ್ರಹ್ಮಾವರ ಕಾಂಗ್ರೆಸ್ ಮುಖಂಡನ ಪುತ್ರ, ಶಂಕಿತ ಉಗ್ರನ ಸ್ನೇಹಿತ ವಶಕ್ಕೆ

ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಎನ್​ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒಟ್ಟು 11 ಶಂಕಿತ ಉಗ್ರರರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿತ್ತು. ಅಲ್ಲದೆ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ನಾಲ್ವರು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣವನ್ನು ಆಲಿಸಿದ ಕೋರ್ಟ್, ಆರೋಪಿಗಳಿಗೆ ಇಂದು ಏಳು ವರ್ಷ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:43 pm, Sat, 14 January 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​