AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಂಡ ಮನೆಗೆ ದ್ರೋಹ ಬಗೆದ ಖತರ್ನಾಕ್ ಖದೀಮರು, ಕನ್ನಡ ಸಿನಿಮಾವೊಂದರ ಸ್ಟೋರಿಯನ್ನೇ ಹೊಲುತ್ತೇ ಈ ಕಹಾನಿ

ದಿನಸಿ ವಸ್ತುಗಳ ಸರಬರಾಜು ಮಾಡುವ ಕಂಪನಿಗೆ ಡೆಲಿವರಿ ಬಾಯ್​(Delivery Boy)ಗಳೇ ಸೇರಿಕೊಂಡು ದೋಖಾ ಮಾಡಿದ್ದಾರೆ. ಈ ಮೂಲಕ ಉಂಡ ಮನೆಗೆ ದ್ರೋಹ ಬಗೆದಿದ್ದಾರೆ. ಹೌದು, ಡೆಲಿವರಿ ಬಾಯ್​ಗಳ ಕಳ್ಳಾಟಕ್ಕೆ ಕಂಪನಿಯ ಸೆಕ್ಯೂರಿಟಿಗಾರ್ಡ್ ಸಹ ಸಾಥ್ ನೀಡಿದ್ದಾನೆ. ಕಂಪನಿಯಿಂದ ಅನುಮಾನ ಬಂದು ಪರಿಶೀಲನೆ ವೇಳೆ ಘಟನೆ ಬೆಳಕಿಗೆ ಬಂದಿದೆ.

ಉಂಡ ಮನೆಗೆ ದ್ರೋಹ ಬಗೆದ ಖತರ್ನಾಕ್ ಖದೀಮರು, ಕನ್ನಡ ಸಿನಿಮಾವೊಂದರ ಸ್ಟೋರಿಯನ್ನೇ ಹೊಲುತ್ತೇ ಈ ಕಹಾನಿ
ಬಂಧಿತ ಆರೋಪಿಗಳು
Jagadisha B
| Edited By: |

Updated on: Apr 10, 2024 | 4:31 PM

Share

ಬೆಂಗಳೂರು, ಏ.10: ದಿನಸಿ ವಸ್ತುಗಳ ಸರಬರಾಜು ಮಾಡುವ ಕಂಪನಿಗೆ ಡೆಲಿವರಿ ಬಾಯ್​(Delivery Boy)ಗಳೇ ಸೇರಿಕೊಂಡು ದೋಖಾ ಮಾಡಿದ್ದಾರೆ. ಈ ಮೂಲಕ ಉಂಡ ಮನೆಗೆ ದ್ರೋಹ ಬಗೆದಿದ್ದಾರೆ. ಹೌದು, ಡೆಲಿವರಿ ಬಾಯ್​ಗಳ ಕಳ್ಳಾಟಕ್ಕೆ ಕಂಪನಿಯ ಸೆಕ್ಯೂರಿಟಿಗಾರ್ಡ್ ಸಹ ಸಾಥ್ ನೀಡಿದ್ದಾನೆ. ಕಂಪನಿಯಿಂದ ಅನುಮಾನ ಬಂದು ಪರಿಶೀಲನೆ ವೇಳೆ ಘಟನೆ ಬೆಳಕಿಗೆ ಬಂದಿದೆ. ಇನ್ನು ಈ ಘಟನೆ ಸಿನಿಮಾವೊಂದರ ಕಥೆಯಲ್ಲಿ ದೊಡ್ಡಣ್ಣನಿಗೆ ಕೊಮಲ್ ಮಾಡಿದ್ದ ಬೆಣ್ಣೆ ಮೋಸದಂತಿದೆ. ಡೆಲಿವರಿ ವೇಳೆ ನಿಗದಿತ ವಸ್ತುಗಳಿಗಿಂತ ಕಡಿಮೆ ಐಟಂಗಳನ್ನು ಡೆಲಿವರಿ ಮಾಡುತ್ತಿದ್ದ ಖದೀಮರು, ಬಳಿಕ ಕಳ್ಳಾಟದಲ್ಲಿ ಇಟ್ಟುಕೊಂಡ ವಸ್ತುಗಳನ್ನ ಬೇರೆ ಅಂಗಡಿಗೆ ಮಾರುತಿದ್ದರು.

ಈ ಕುರಿತು ಕಂಪನಿ ನೀಡಿದ ದೂರು ಹಿನ್ನಲೆ ತನಿಖೆ ನಡೆಸಿದ ಬ್ಯಾಟರಾಯನಪುರ ಪೊಲೀಸರು,ಇದೀಗ ನಾಲ್ವರನ್ನು ಬಂಧಿಸಿದ್ದಾರೆ. ಡೆಲಿವರಿ ಬಾಯ್​ಗಳಾದ ಸತೀಶ್, ಈಶ್ವರ್ ಹಾಗೂ ಸೆಕ್ಯೂರಿಟಿ ಲಕ್ಷ್ಮಣ್ ಸೇರಿದಂತೆ ನಾಲ್ವರು ಬಂಧಿತ ಆರೋಪಿಗಳು. ಈ ಕುರಿತು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಕೊಡಗು ಬಿಜೆಪಿ ಸಮಾವೇಶದಲ್ಲಿ ಮಾಜಿ ಶಾಸಕರು ಸೇರಿದಂತೆ ಹಲವರ ಪರ್ಸ್ ಕಳ್ಳತನ: 13 ಬಂಧನ ಬಂಧನ

ವ್ಹೀಲಿಂಗ್​ಗಾಗಿ ಬೈಕ್ ಕಳ್ಳತನ ಮಾಡಿ ಮಾರಾಟ ಮಾಡ್ತಿದ್ದ ಆಸಾಮಿಗಳ ಬಂಧನ

ವಿದ್ಯಾರಣ್ಯಪುರ ಹಾಗೂ ಅಮೃತಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ವ್ಹೀಲಿಂಗ್​ಗಾಗಿ ಬೈಕ್​ಗಳನ್ನು ಕ್ಷಣಾರ್ಧದಲ್ಲಿ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಆಸಾಮಿಗಳನ್ನು ಬಂಧಿಸಲಾಗಿದೆ. ರಾತ್ರಿ ವೇಳೆ ಮನೆ ಮುಂದೆ ಪಾರ್ಕ್ ಮಾಡಿದ್ದ ಬೈಕ್ ಗಳನ್ನ ಇಬ್ಬರು ಅಪ್ರಾಪ್ತ ಬಾಲಕರನ್ನ ಬಳಸಿಕೊಂಡು ಬೈಕ್ ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿ ಮದನ್ ಎಂಬಾತನನ್ನು ಬಂಧಿಸಲಾಗಿದೆ.

ಕದ್ದ ಬೈಕ್​ನಲ್ಲಿ ವ್ಹೀಲಿಂಗ್ ಮಾಡಿ ಬಳಿಕ ಮಾರಾಟ

ವ್ಹೀಲಿಂಗ್ ಹುಚ್ಚಿಗಾಗಿ ಅಪ್ರಾಪ್ತರಿಂದ ಬೈಕ್ ಕಳ್ಳತನ ಮಾಡಿಸಿ, ಕದ್ದ ಬೈಕ್​ನಲ್ಲಿ ವ್ಹೀಲಿಂಗ್ ಮಾಡಿ ಬಳಿಕ ಮಾರಾಟ ಮಾಡುತ್ತಿದ್ದ. ಬಹುತೇಕ ಡಿಯೋ ಬೈಕ್​ಗಳನ್ನೇ ವ್ಹೀಲಿಂಗ್​ಗಾಗಿ ಖದೀಯಲಾಗುತ್ತಿತ್ತು. ಇನ್ನು ಇವರು ಬೆಂಗಳೂರು ಗ್ರಾಮಾಂತರ ಭಾಗ ಸೇರಿದಂತೆ ನಗರದಲ್ಲಿ ಸಾಕಷ್ಟು ಕಡೆ ಕಳ್ಳತನ ಮಾಡಿದ್ದರು. ಸ್ವಲ್ಪ ಹಣವನ್ನು ಅಪ್ರಾಪ್ತರಿಗೆ ಕೊಟ್ಟು, ಉಳಿದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದರು. ಸದ್ಯ ಆರೋಪಿಯಿಂದ ಬರೊಬ್ಬರಿ 22 ಲಕ್ಷ ಮೌಲ್ಯದ 29 ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಎರಡು ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ‌‌ನಡೆಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!