AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಡವರ ಮಕ್ಕಳ ಸರ್ಕಾರಿ ಶಾಲೆ ಅಧೋಗತಿ, ಕುಸಿಯುವ ಹಂತದಲ್ಲಿ ಕಟ್ಟಡ

ಬೆಂಗಳೂರಲ್ಲಿ ಹಲವು ಸರ್ಕಾರಿ ಶಾಲೆಗಳ ಕಟ್ಟಡವು ಶಿಥಿಲಗೊಂಡಿದ್ದು, ಮಕ್ಕಳು ನಿತ್ಯ ಹೆದರುತ್ತಲೇ ಶಾಲೆಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಬಡವರ ಮಕ್ಕಳು ಹೋಗುವ ಈ ಸರ್ಕಾರಿ ಶಾಲೆಯ ಪರಿಸ್ಥಿತಿ ತೀರಾ ಶೋಚನೀಯವಾಗಿದೆ. ಹೆಸರಿಗೆ ಮಾದರಿ ಸರ್ಕಾರಿ ಶಾಲೆ ಆದರೆ ಯಾವಾಗ ನೆಲ ಕಚ್ಚುತ್ತೋ ಎನ್ನುವ ಭಯದಲ್ಲಿ ಮಕ್ಕಳಿದ್ದಾರೆ.

ಬೆಂಗಳೂರು: ಬಡವರ ಮಕ್ಕಳ ಸರ್ಕಾರಿ ಶಾಲೆ ಅಧೋಗತಿ, ಕುಸಿಯುವ ಹಂತದಲ್ಲಿ ಕಟ್ಟಡ
ಬೆಳ್ಳಂದೂರು ಸರ್ಕಾರಿ ಶಾಲೆ
Follow us
Shivaraj
| Updated By: ನಯನಾ ರಾಜೀವ್

Updated on:Nov 29, 2023 | 12:07 PM

ಬೆಂಗಳೂರಲ್ಲಿ ಹಲವು ಸರ್ಕಾರಿ ಶಾಲೆಗಳ ಕಟ್ಟಡವು ಶಿಥಿಲಗೊಂಡಿದ್ದು, ಮಕ್ಕಳು ನಿತ್ಯ ಹೆದರುತ್ತಲೇ ಶಾಲೆ(School)ಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಬಡವರ ಮಕ್ಕಳು ಹೋಗುವ ಈ ಸರ್ಕಾರಿ ಶಾಲೆಯ ಪರಿಸ್ಥಿತಿ ತೀರಾ ಶೋಚನೀಯವಾಗಿದೆ. ಹೆಸರಿಗೆ ಮಾದರಿ ಸರ್ಕಾರಿ ಶಾಲೆ ಆದರೆ ಯಾವಾಗ ನೆಲ ಕಚ್ಚುತ್ತೋ ಎನ್ನುವ ಭಯದಲ್ಲಿ ಮಕ್ಕಳಿದ್ದಾರೆ.

ಬೆಳ್ಳಂದೂರಿನಲ್ಲಿರುವ ಈ ಸರ್ಕಾರಿ ಮಾದರಿ ಶಾಲೆ 95 ವರ್ಷಕ್ಕಿಂತಲೂ ಹಳೆಯದು. ಕಟ್ಟಡವೆಲ್ಲವೂ ಶಿಥಿಲಗೊಂಡಿದ್ದು, ಬೀಳುವ ಆತಂಕ ಎದುರಾಗಿದೆ. ಅಲ್ಲಲ್ಲಿ ಬಿರುಕು ಬಿಟ್ಟಿದೆ, ಸುಮಾರು 500 ಕ್ಕೂ ಹೆಚ್ಚು ಮಕ್ಕಳು ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಮಕ್ಕಳು ಕೂರಲು ಜಾಗವಿಲ್ಲದ ಕಾರಣ ಕಾರ್​ ಶೆಡ್​ನಲ್ಲಿ ಪಾಠ ಮಾಡಲಾಗುತ್ತಿದೆ, ಶಾಲೆಯ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್​ಫಾರ್ಮರ್​ ಕೂಡ ಇದೆ. ದಯಮಾಡಿ ದೊಡ್ಡ ಮಟ್ಟದ ಅನಾಹುತವಾಗುವ ಮುನ್ನ ಶಾಲೆ ಕಟ್ಟಿಸಿಕೊಡಿ ಎನ್ನುತ್ತಿರುವ ಮಕ್ಕಳ ಪೋಷಕರು.

ಇಲ್ಲಿ ಓದುತ್ತಿರುವ ಮಕ್ಕಳಲ್ಲಿ ಕೂಲಿ ಕಾರ್ಮಿಕರೇ ಹೆಚ್ಚು, ಬಡವರ ಮಕ್ಕಳ ಜೀವಕ್ಕೆ ಬೆಲೆ ಇಲ್ವಾ ಎನ್ನುವ ಪ್ರಶ್ನೆ ಎದ್ದಿದೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು, ಶಿಕ್ಷಣ ಸಚಿವರು ಈ ಬಗ್ಗೆ ಗಮನಹರಿಸಿ ನೂತನ ಕಟ್ಟಡ ನಿರ್ಮಿಸಿ ಮಕ್ಕಳ ಜೀವ ಉಳಿಸಿ ಎಂಬುದು ನಮ್ಮ ಕಳಕಳಿಯ ಮನವಿ.

ಮತ್ತಷ್ಟು ಓದಿ: ಬೆಂಗಳೂರು: ಶಿವಾಜಿನಗರದಲ್ಲಿ ಕುಸಿದುಬಿದ್ದ ನರ್ಸರಿ ಶಾಲೆ ಕಟ್ಟಡ, ತಪ್ಪಿದ ಭಾರೀ ಅನಾಹುತ

ಶಿವಾಜಿನಗರದಲ್ಲಿ ನರ್ಸರಿ ಶಾಲೆಯ ಕಟ್ಟಡ ಕುಸಿದಿತ್ತು ಬೆಂಗಳೂರಿನ ಶಿವಾಜಿನಗರದಲ್ಲಿ ನರ್ಸರಿ ಶಾಲೆ ಕಟ್ಟಡವೊಂದು ಕುಸಿದುಬಿದ್ದಿತ್ತು. ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಇಂದು (ನವೆಂಬರ್ 27) ಬೆಳಗಿನ ಜಾವ ನಸುಕಿನ ಜಾವ ಬಿದ್ದಿದೆ. ಪರಿಣಾಮ ಕಟ್ಟಡ ಅವಶೇಷದಡಿ ವಾಹನಗಳು ಸಿಲುಕಿ ಸಂಪೂರ್ಣವಾಗಿ ಜಖಂ ಆಗಿತ್ತು, ಅದೃಷ್ಟವಶಾತ್ ಶಾಲೆಯಲ್ಲಿ ಮಕ್ಕಳು ಇಲ್ಲದ ವೇಳೆ ಕಟ್ಟಡ ಬಿದ್ದಿದೆ. ಇದರಿಂದ ಅನಾಹುತವೊಂದು ತಪ್ಪಿದಂತಾಗಿದೆ.

ಆದರೆ ಈ ಮಕ್ಕಳ ಅದೃಷ್ಟ ಚೆನ್ನಾಗಿತ್ತು ಯಾರಿಗೂ ಏನೂ ಅಪಾಯವಾಗಿಲ್ಲ. ಆದರೆ ಈ ಬೆಳ್ಳಂದೂರು ಶಾಲೆಯಲ್ಲಿ ತರಗತಿ ನಡೆಯುವಾಗಲೇ ಅನಾಹುತ ಸಂಭವಿಸಿದರೆ ಏನು ಗತಿ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:02 pm, Wed, 29 November 23

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ