ಬೆಂಗಳೂರು: ಬಡವರ ಮಕ್ಕಳ ಸರ್ಕಾರಿ ಶಾಲೆ ಅಧೋಗತಿ, ಕುಸಿಯುವ ಹಂತದಲ್ಲಿ ಕಟ್ಟಡ

ಬೆಂಗಳೂರಲ್ಲಿ ಹಲವು ಸರ್ಕಾರಿ ಶಾಲೆಗಳ ಕಟ್ಟಡವು ಶಿಥಿಲಗೊಂಡಿದ್ದು, ಮಕ್ಕಳು ನಿತ್ಯ ಹೆದರುತ್ತಲೇ ಶಾಲೆಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಬಡವರ ಮಕ್ಕಳು ಹೋಗುವ ಈ ಸರ್ಕಾರಿ ಶಾಲೆಯ ಪರಿಸ್ಥಿತಿ ತೀರಾ ಶೋಚನೀಯವಾಗಿದೆ. ಹೆಸರಿಗೆ ಮಾದರಿ ಸರ್ಕಾರಿ ಶಾಲೆ ಆದರೆ ಯಾವಾಗ ನೆಲ ಕಚ್ಚುತ್ತೋ ಎನ್ನುವ ಭಯದಲ್ಲಿ ಮಕ್ಕಳಿದ್ದಾರೆ.

ಬೆಂಗಳೂರು: ಬಡವರ ಮಕ್ಕಳ ಸರ್ಕಾರಿ ಶಾಲೆ ಅಧೋಗತಿ, ಕುಸಿಯುವ ಹಂತದಲ್ಲಿ ಕಟ್ಟಡ
ಬೆಳ್ಳಂದೂರು ಸರ್ಕಾರಿ ಶಾಲೆ
Follow us
Shivaraj
| Updated By: ನಯನಾ ರಾಜೀವ್

Updated on:Nov 29, 2023 | 12:07 PM

ಬೆಂಗಳೂರಲ್ಲಿ ಹಲವು ಸರ್ಕಾರಿ ಶಾಲೆಗಳ ಕಟ್ಟಡವು ಶಿಥಿಲಗೊಂಡಿದ್ದು, ಮಕ್ಕಳು ನಿತ್ಯ ಹೆದರುತ್ತಲೇ ಶಾಲೆ(School)ಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಬಡವರ ಮಕ್ಕಳು ಹೋಗುವ ಈ ಸರ್ಕಾರಿ ಶಾಲೆಯ ಪರಿಸ್ಥಿತಿ ತೀರಾ ಶೋಚನೀಯವಾಗಿದೆ. ಹೆಸರಿಗೆ ಮಾದರಿ ಸರ್ಕಾರಿ ಶಾಲೆ ಆದರೆ ಯಾವಾಗ ನೆಲ ಕಚ್ಚುತ್ತೋ ಎನ್ನುವ ಭಯದಲ್ಲಿ ಮಕ್ಕಳಿದ್ದಾರೆ.

ಬೆಳ್ಳಂದೂರಿನಲ್ಲಿರುವ ಈ ಸರ್ಕಾರಿ ಮಾದರಿ ಶಾಲೆ 95 ವರ್ಷಕ್ಕಿಂತಲೂ ಹಳೆಯದು. ಕಟ್ಟಡವೆಲ್ಲವೂ ಶಿಥಿಲಗೊಂಡಿದ್ದು, ಬೀಳುವ ಆತಂಕ ಎದುರಾಗಿದೆ. ಅಲ್ಲಲ್ಲಿ ಬಿರುಕು ಬಿಟ್ಟಿದೆ, ಸುಮಾರು 500 ಕ್ಕೂ ಹೆಚ್ಚು ಮಕ್ಕಳು ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಮಕ್ಕಳು ಕೂರಲು ಜಾಗವಿಲ್ಲದ ಕಾರಣ ಕಾರ್​ ಶೆಡ್​ನಲ್ಲಿ ಪಾಠ ಮಾಡಲಾಗುತ್ತಿದೆ, ಶಾಲೆಯ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್​ಫಾರ್ಮರ್​ ಕೂಡ ಇದೆ. ದಯಮಾಡಿ ದೊಡ್ಡ ಮಟ್ಟದ ಅನಾಹುತವಾಗುವ ಮುನ್ನ ಶಾಲೆ ಕಟ್ಟಿಸಿಕೊಡಿ ಎನ್ನುತ್ತಿರುವ ಮಕ್ಕಳ ಪೋಷಕರು.

ಇಲ್ಲಿ ಓದುತ್ತಿರುವ ಮಕ್ಕಳಲ್ಲಿ ಕೂಲಿ ಕಾರ್ಮಿಕರೇ ಹೆಚ್ಚು, ಬಡವರ ಮಕ್ಕಳ ಜೀವಕ್ಕೆ ಬೆಲೆ ಇಲ್ವಾ ಎನ್ನುವ ಪ್ರಶ್ನೆ ಎದ್ದಿದೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು, ಶಿಕ್ಷಣ ಸಚಿವರು ಈ ಬಗ್ಗೆ ಗಮನಹರಿಸಿ ನೂತನ ಕಟ್ಟಡ ನಿರ್ಮಿಸಿ ಮಕ್ಕಳ ಜೀವ ಉಳಿಸಿ ಎಂಬುದು ನಮ್ಮ ಕಳಕಳಿಯ ಮನವಿ.

ಮತ್ತಷ್ಟು ಓದಿ: ಬೆಂಗಳೂರು: ಶಿವಾಜಿನಗರದಲ್ಲಿ ಕುಸಿದುಬಿದ್ದ ನರ್ಸರಿ ಶಾಲೆ ಕಟ್ಟಡ, ತಪ್ಪಿದ ಭಾರೀ ಅನಾಹುತ

ಶಿವಾಜಿನಗರದಲ್ಲಿ ನರ್ಸರಿ ಶಾಲೆಯ ಕಟ್ಟಡ ಕುಸಿದಿತ್ತು ಬೆಂಗಳೂರಿನ ಶಿವಾಜಿನಗರದಲ್ಲಿ ನರ್ಸರಿ ಶಾಲೆ ಕಟ್ಟಡವೊಂದು ಕುಸಿದುಬಿದ್ದಿತ್ತು. ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಇಂದು (ನವೆಂಬರ್ 27) ಬೆಳಗಿನ ಜಾವ ನಸುಕಿನ ಜಾವ ಬಿದ್ದಿದೆ. ಪರಿಣಾಮ ಕಟ್ಟಡ ಅವಶೇಷದಡಿ ವಾಹನಗಳು ಸಿಲುಕಿ ಸಂಪೂರ್ಣವಾಗಿ ಜಖಂ ಆಗಿತ್ತು, ಅದೃಷ್ಟವಶಾತ್ ಶಾಲೆಯಲ್ಲಿ ಮಕ್ಕಳು ಇಲ್ಲದ ವೇಳೆ ಕಟ್ಟಡ ಬಿದ್ದಿದೆ. ಇದರಿಂದ ಅನಾಹುತವೊಂದು ತಪ್ಪಿದಂತಾಗಿದೆ.

ಆದರೆ ಈ ಮಕ್ಕಳ ಅದೃಷ್ಟ ಚೆನ್ನಾಗಿತ್ತು ಯಾರಿಗೂ ಏನೂ ಅಪಾಯವಾಗಿಲ್ಲ. ಆದರೆ ಈ ಬೆಳ್ಳಂದೂರು ಶಾಲೆಯಲ್ಲಿ ತರಗತಿ ನಡೆಯುವಾಗಲೇ ಅನಾಹುತ ಸಂಭವಿಸಿದರೆ ಏನು ಗತಿ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:02 pm, Wed, 29 November 23

ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಫ್ರಾನ್ಸ್​ ಮಹಾಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಪ್ರಧಾನಿ ಮೋದಿ ನಮನ
ಫ್ರಾನ್ಸ್​ ಮಹಾಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಪ್ರಧಾನಿ ಮೋದಿ ನಮನ