AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​​ಗೆ ಡ್ರಗ್ಸ್​​ ಮಾರಲು ಯತ್ನಿಸ್ತಿದ್ದವರು ಲಾಕ್; 28 ಲಕ್ಷ ರೂ. ಡ್ರಗ್ಸ್ ಜಪ್ತಿ

ಹೊಸ ವರ್ಷಕ್ಕೆ(New Year) ಡ್ರಗ್ಸ್​​ ಮಾರಲು ಯತ್ನಿಸುತ್ತಿದ್ದ ಕೇರಳ ಮೂಲದ ಮೂವರು ಡ್ರಗ್​​ ಪೆಡ್ಲರ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಬರೊಬ್ಬರಿ 28 ಲಕ್ಷ ರೂ. ಮೌಲ್ಯದ 170 MDMA ಕ್ರಿಸ್ಟಲ್, 25 MDMA ಎಕ್ಸಟೆಸಿ ಮಾತ್ರೆಗಳು, 200 LSD ಸ್ಟ್ರಿಪ್​ಗಳು ಹಾಗೂ 3 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

ನ್ಯೂ ಇಯರ್​​ಗೆ ಡ್ರಗ್ಸ್​​ ಮಾರಲು ಯತ್ನಿಸ್ತಿದ್ದವರು ಲಾಕ್; 28 ಲಕ್ಷ ರೂ. ಡ್ರಗ್ಸ್ ಜಪ್ತಿ
ಬೆಂಗಳೂರಿನಲ್ಲಿ ಡ್ರಗ್ಸ್​ ವಶಕ್ಕೆ
Follow us
Prajwal Kumar NY
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 28, 2023 | 3:22 PM

ಬೆಂಗಳೂರು, ಡಿ.28: ಹೊಸ ವರ್ಷಕ್ಕೆ(New Year) ಡ್ರಗ್ಸ್​​ ಮಾರಲು ಯತ್ನಿಸುತ್ತಿದ್ದ ಕೇರಳ ಮೂಲದ ಮೂವರು ಡ್ರಗ್​​ ಪೆಡ್ಲರ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಬರೊಬ್ಬರಿ 28 ಲಕ್ಷ ರೂ. ಮೌಲ್ಯದ 170 MDMA ಕ್ರಿಸ್ಟಲ್, 25 MDMA ಎಕ್ಸಟೆಸಿ ಮಾತ್ರೆಗಳು, 200 LSD ಸ್ಟ್ರಿಪ್​ಗಳು ಹಾಗೂ 3 ಕೆಜಿ ಗಾಂಜಾ ಜಪ್ತಿ ಮಾಡಲಾಗಿದ್ದು, ಈ ಕುರಿತು ಕೆಂಗೇರಿ ಹಾಗೂ ಅಮೃತಹಳ್ಳಿ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿದೆ.

ಗಾಂಜಾ ಮಾರಾಟ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ಪಟ್ಟಣದ ದೊಡ್ಡಬಳ್ಳಾಪುರ ರಸ್ತೆಯ ಸ್ಮಶಾನದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೋಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬ್ಯಾಗ್​ನಲ್ಲಿ ತಂದು ಗಾಂಜಾ ಮಾರಾಟ ಮಾಡುವ ವೇಳೆ ಬಂಧಿಸಲಾಗಿದ್ದು, ದಾಳಿ ವೇಳೆ ಆರೋಪಿಗಳಿಂದ 2 ಕೆಜಿ 200 ಗ್ರಾಂ ಗಾಂಜಾ ವಶ‌ಕ್ಕೆ ಪಡೆಯಲಾಗಿದೆ. ನಿತೀಶ್ ಕುಮಾರ್ (25) ಹಾಗೂ ವೆಂಕಟೇಶ್ (30) ಬಂಧಿತ ಆರೋಪಿಗಳು.

ಇದನ್ನೂ ಓದಿ:ಹೊಸ ವರ್ಷಾಚರಣೆಗೆ ನಶೆ ಏರಿಸಲು 100 ಕೋಟಿ ಮೌಲ್ಯದ ಡ್ರಗ್ಸ್ ಬೆಂಗಳೂರಿಗೆ ಸಪ್ಲೈ! ಸ್ಪೆಷಲ್ ಡ್ರೈವ್​​ಗೆ ಸಜ್ಜಾದ ನಗರ ಪೊಲೀಸರು

ಸುಮಾರು 6 ಸಾವಿರ ರೂಪಾಯಿ ಮೌಲ್ಯದ ಗಾಂಜಾ ವಶ

ಅಂದಾಜು 6 ಸಾವಿರ ರೂಪಾಯಿ ಮೌಲ್ಯದ ಗಾಂಜಾವನ್ನು ಬ್ಯಾಗ್​ನಲ್ಲಿ ಇಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದರು. ಬಿಹಾರ ಮೂಲದವನಾದ ಆರೋಪಿ ನಿತೀಶ್ ಕುಮಾರ್,  ದೇವನಹಳ್ಳಿಯಲ್ಲಿ ಶೆಡ್ ಹಾಕಿಕೊಂಡು ವಾಸ ಮಾಡುತ್ತಿದ್ದ. ಇನ್ನೋರ್ವ ಆರೋಪಿ ವೆಂಕಟೇಶ್ ದೇವನಹಳ್ಳಿ ಪಟ್ಟಣದ ಗಾಣಿಗರ ಪೇಟೆ ನಿವಾಸಿಯಾಗಿದ್ದು, ದೇವನಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದ ಪೋಲೀಸರು, ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ