AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಸಹಿ ಸುದ್ದಿ: ಬೆಂಗಳೂನಿಂದ-ಚೆನ್ನೈಗೆ 4 ಗಂಟೆಯಲ್ಲಿ ಪ್ರಯಾಣಿಸಿ

ರಾಜ್ಯ ರಾಜಧಾನಿ ಬೆಂಗಳೂರಿನಿಂದ ತಮಿಳುನಾಡು ರಾಜಧಾನಿ ಚೆನ್ನೈಗೆ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಅರಕ್ಕೋಣಂ ಮತ್ತು ಜೋಲಾರ್‌ಪೇಟ್ಟೈ ನಿಲ್ದಾಣಗಳ ನಡುವಿನ ರೈಲು ವೇಗವನ್ನು ಹೆಚ್ಚಿಸಲು ರೈಲ್ವೆ ಅಧಿಕಾರಿಗಳು ಅನುಮೋದನೆ ನೀಡಿದ್ದಾರೆ.

ಪ್ರಯಾಣಿಕರಿಗೆ ಸಹಿ ಸುದ್ದಿ: ಬೆಂಗಳೂನಿಂದ-ಚೆನ್ನೈಗೆ 4 ಗಂಟೆಯಲ್ಲಿ ಪ್ರಯಾಣಿಸಿ
ರೈಲು
ವಿವೇಕ ಬಿರಾದಾರ
|

Updated on:Aug 20, 2023 | 2:59 PM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಿಂದ ತಮಿಳುನಾಡು ರಾಜಧಾನಿ ಚೆನ್ನೈಗೆ (Bengaluru – Chennai) ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಅರಕ್ಕೋಣಂ ಮತ್ತು ಜೋಲಾರ್‌ಪೇಟ್ಟೈ ನಿಲ್ದಾಣಗಳ ನಡುವಿನ ರೈಲು ವೇಗವನ್ನು ಹೆಚ್ಚಿಸಲು ರೈಲ್ವೆ ಅಧಿಕಾರಿಗಳು ಅನುಮೋದನೆ ನೀಡಿದ್ದಾರೆ. ಇದರಿಂದ ಎರಡು ನಗರಗಳ ನಡುವಿನ ಪ್ರಯಾಣದ ಸಮಯ ನಾಲ್ಕು ಗಂಟೆ ಇಳಿಕೆಯಾಗಲಿದೆ. 144 ಕಿಮೀ ವ್ಯಾಪ್ತಿಯಲ್ಲಿ ರೈಲಿನ ವೇಗವನ್ನು ಗಂಟೆಗೆ 110 ಕಿಲೋಮೀಟರ್ (ಕಿಮೀ) ನಿಂದ 130 ಕಿಮೀಗೆ ಹೆಚ್ಚಿಸಲಾಗಿದೆ. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಈ ವೇಗದ ಪರಿಷ್ಕರಣೆಯು ಪ್ರಯಾಣಿಕರಿಗೆ 25 ರಿಂದ 30 ನಿಮಿಷಗಳನ್ನು ಉಳಿಸುವ ನಿರೀಕ್ಷೆಯಿದೆ. ಲಿಂಕ್ ಹಾಫ್‌ಮನ್ ಬುಷ್ (ಎಲ್‌ಹೆಚ್‌ಬಿ) ಕೋಚ್‌ಗಳನ್ನು ಹೊಂದಿರುವ ಒಟ್ಟು 124 ರೈಲುಗಳು ಮುಂದಿನ ವಾರದಿಂದ ಅರಕ್ಕೋಣಂ ಮತ್ತು ಜೋಲಾರ್‌ಪೆಟ್ಟೈ ನಡುವೆ 130 ಕಿಮೀ ವೇಗದಲ್ಲಿ ಸಂಚರಿಸಲಿವೆ. ಐಸಿಎಫ್ ವಿನ್ಯಾಸದ ಕೋಚ್‌ಗಳನ್ನು ಹೊಂದಿರುವ ರೈಲುಗಳು ಸುರಕ್ಷತೆಯ ಕಾರಣಗಳಿಂದ 110 ಕಿಮೀ ವೇಗದಲ್ಲಿ ಚಲಿಸುತ್ತವೆ. ಟ್ರ್ಯಾಕ್ ಮತ್ತು ಸಿಗ್ನಲಿಂಗ್ ಕೆಲಸಗಳು ಪೂರ್ಣಗೊಳ್ಳುವುದಕ್ಕಾಗಿ ಕಾಯಲಾಗುತ್ತಿದ್ದು, ಇದು ಪೂರ್ಣಗೊಂಡ ಕೂಡಲೇ ಈ ವೇಗ ವರ್ಧನೆ ಅನುಷ್ಠಾನಕ್ಕೆ ಬರಲಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಟ್ರೈನ್​ ಕ್ರಾಸಿಂಗ್​ ವೇಳೆ ಉಂಟಾಗುವ ಟ್ರಾಫಿಕ್​​ಗೆ ಸಿಗಲಿದೆ ಮುಕ್ತಿ; 26 ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ನಿರ್ಮಾಣ

ಸದ್ಯ ಬೆಂಗಳೂರು-ಚೆನ್ನೈ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪ್ರಯಾಣವನ್ನು 4 ಗಂಟೆ ಅವಧಿಯಲ್ಲಿ ಪೂರ್ಣಗೊಳಿಸುತ್ತದೆ. ಇನ್ನು ಶತಾಬ್ಧಿ, ಬೃಂದಾವನ್ ಎಕ್ಸ್ ಪ್ರೆಸ್ ರೈಲುಗಳು ಆರು ಗಂಟೆ ಬದಲು 5 ಗಂಟೆ 30 ನಿಮಿಷದ ಪ್ರಯಾಣದ ಅವಧಿಯಲ್ಲಿ ಈ ನಗರಗಳ ನಡುವೆ ಸಂಚರಿಸಲಿವೆ. ಬೆಂಗಳೂರು ಕಡೆಗೆ ಸಂಚರಿಸುವ ಇತರೆ ರೈಲುಗಳ ವೇಗ ವರ್ಧನೆಗೂ ಮುಂದಿನ ದಿನಗಳಲ್ಲಿ ಅನುಮತಿ ಸಿಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:57 pm, Sun, 20 August 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು