AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಸಹಿ ಸುದ್ದಿ: ಬೆಂಗಳೂನಿಂದ-ಚೆನ್ನೈಗೆ 4 ಗಂಟೆಯಲ್ಲಿ ಪ್ರಯಾಣಿಸಿ

ರಾಜ್ಯ ರಾಜಧಾನಿ ಬೆಂಗಳೂರಿನಿಂದ ತಮಿಳುನಾಡು ರಾಜಧಾನಿ ಚೆನ್ನೈಗೆ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಅರಕ್ಕೋಣಂ ಮತ್ತು ಜೋಲಾರ್‌ಪೇಟ್ಟೈ ನಿಲ್ದಾಣಗಳ ನಡುವಿನ ರೈಲು ವೇಗವನ್ನು ಹೆಚ್ಚಿಸಲು ರೈಲ್ವೆ ಅಧಿಕಾರಿಗಳು ಅನುಮೋದನೆ ನೀಡಿದ್ದಾರೆ.

ಪ್ರಯಾಣಿಕರಿಗೆ ಸಹಿ ಸುದ್ದಿ: ಬೆಂಗಳೂನಿಂದ-ಚೆನ್ನೈಗೆ 4 ಗಂಟೆಯಲ್ಲಿ ಪ್ರಯಾಣಿಸಿ
ರೈಲು
ವಿವೇಕ ಬಿರಾದಾರ
|

Updated on:Aug 20, 2023 | 2:59 PM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಿಂದ ತಮಿಳುನಾಡು ರಾಜಧಾನಿ ಚೆನ್ನೈಗೆ (Bengaluru – Chennai) ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಅರಕ್ಕೋಣಂ ಮತ್ತು ಜೋಲಾರ್‌ಪೇಟ್ಟೈ ನಿಲ್ದಾಣಗಳ ನಡುವಿನ ರೈಲು ವೇಗವನ್ನು ಹೆಚ್ಚಿಸಲು ರೈಲ್ವೆ ಅಧಿಕಾರಿಗಳು ಅನುಮೋದನೆ ನೀಡಿದ್ದಾರೆ. ಇದರಿಂದ ಎರಡು ನಗರಗಳ ನಡುವಿನ ಪ್ರಯಾಣದ ಸಮಯ ನಾಲ್ಕು ಗಂಟೆ ಇಳಿಕೆಯಾಗಲಿದೆ. 144 ಕಿಮೀ ವ್ಯಾಪ್ತಿಯಲ್ಲಿ ರೈಲಿನ ವೇಗವನ್ನು ಗಂಟೆಗೆ 110 ಕಿಲೋಮೀಟರ್ (ಕಿಮೀ) ನಿಂದ 130 ಕಿಮೀಗೆ ಹೆಚ್ಚಿಸಲಾಗಿದೆ. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಈ ವೇಗದ ಪರಿಷ್ಕರಣೆಯು ಪ್ರಯಾಣಿಕರಿಗೆ 25 ರಿಂದ 30 ನಿಮಿಷಗಳನ್ನು ಉಳಿಸುವ ನಿರೀಕ್ಷೆಯಿದೆ. ಲಿಂಕ್ ಹಾಫ್‌ಮನ್ ಬುಷ್ (ಎಲ್‌ಹೆಚ್‌ಬಿ) ಕೋಚ್‌ಗಳನ್ನು ಹೊಂದಿರುವ ಒಟ್ಟು 124 ರೈಲುಗಳು ಮುಂದಿನ ವಾರದಿಂದ ಅರಕ್ಕೋಣಂ ಮತ್ತು ಜೋಲಾರ್‌ಪೆಟ್ಟೈ ನಡುವೆ 130 ಕಿಮೀ ವೇಗದಲ್ಲಿ ಸಂಚರಿಸಲಿವೆ. ಐಸಿಎಫ್ ವಿನ್ಯಾಸದ ಕೋಚ್‌ಗಳನ್ನು ಹೊಂದಿರುವ ರೈಲುಗಳು ಸುರಕ್ಷತೆಯ ಕಾರಣಗಳಿಂದ 110 ಕಿಮೀ ವೇಗದಲ್ಲಿ ಚಲಿಸುತ್ತವೆ. ಟ್ರ್ಯಾಕ್ ಮತ್ತು ಸಿಗ್ನಲಿಂಗ್ ಕೆಲಸಗಳು ಪೂರ್ಣಗೊಳ್ಳುವುದಕ್ಕಾಗಿ ಕಾಯಲಾಗುತ್ತಿದ್ದು, ಇದು ಪೂರ್ಣಗೊಂಡ ಕೂಡಲೇ ಈ ವೇಗ ವರ್ಧನೆ ಅನುಷ್ಠಾನಕ್ಕೆ ಬರಲಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಟ್ರೈನ್​ ಕ್ರಾಸಿಂಗ್​ ವೇಳೆ ಉಂಟಾಗುವ ಟ್ರಾಫಿಕ್​​ಗೆ ಸಿಗಲಿದೆ ಮುಕ್ತಿ; 26 ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ನಿರ್ಮಾಣ

ಸದ್ಯ ಬೆಂಗಳೂರು-ಚೆನ್ನೈ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪ್ರಯಾಣವನ್ನು 4 ಗಂಟೆ ಅವಧಿಯಲ್ಲಿ ಪೂರ್ಣಗೊಳಿಸುತ್ತದೆ. ಇನ್ನು ಶತಾಬ್ಧಿ, ಬೃಂದಾವನ್ ಎಕ್ಸ್ ಪ್ರೆಸ್ ರೈಲುಗಳು ಆರು ಗಂಟೆ ಬದಲು 5 ಗಂಟೆ 30 ನಿಮಿಷದ ಪ್ರಯಾಣದ ಅವಧಿಯಲ್ಲಿ ಈ ನಗರಗಳ ನಡುವೆ ಸಂಚರಿಸಲಿವೆ. ಬೆಂಗಳೂರು ಕಡೆಗೆ ಸಂಚರಿಸುವ ಇತರೆ ರೈಲುಗಳ ವೇಗ ವರ್ಧನೆಗೂ ಮುಂದಿನ ದಿನಗಳಲ್ಲಿ ಅನುಮತಿ ಸಿಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:57 pm, Sun, 20 August 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್