AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಸಹಿ ಸುದ್ದಿ: ಬೆಂಗಳೂನಿಂದ-ಚೆನ್ನೈಗೆ 4 ಗಂಟೆಯಲ್ಲಿ ಪ್ರಯಾಣಿಸಿ

ರಾಜ್ಯ ರಾಜಧಾನಿ ಬೆಂಗಳೂರಿನಿಂದ ತಮಿಳುನಾಡು ರಾಜಧಾನಿ ಚೆನ್ನೈಗೆ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಅರಕ್ಕೋಣಂ ಮತ್ತು ಜೋಲಾರ್‌ಪೇಟ್ಟೈ ನಿಲ್ದಾಣಗಳ ನಡುವಿನ ರೈಲು ವೇಗವನ್ನು ಹೆಚ್ಚಿಸಲು ರೈಲ್ವೆ ಅಧಿಕಾರಿಗಳು ಅನುಮೋದನೆ ನೀಡಿದ್ದಾರೆ.

ಪ್ರಯಾಣಿಕರಿಗೆ ಸಹಿ ಸುದ್ದಿ: ಬೆಂಗಳೂನಿಂದ-ಚೆನ್ನೈಗೆ 4 ಗಂಟೆಯಲ್ಲಿ ಪ್ರಯಾಣಿಸಿ
ರೈಲು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Aug 20, 2023 | 2:59 PM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಿಂದ ತಮಿಳುನಾಡು ರಾಜಧಾನಿ ಚೆನ್ನೈಗೆ (Bengaluru – Chennai) ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಅರಕ್ಕೋಣಂ ಮತ್ತು ಜೋಲಾರ್‌ಪೇಟ್ಟೈ ನಿಲ್ದಾಣಗಳ ನಡುವಿನ ರೈಲು ವೇಗವನ್ನು ಹೆಚ್ಚಿಸಲು ರೈಲ್ವೆ ಅಧಿಕಾರಿಗಳು ಅನುಮೋದನೆ ನೀಡಿದ್ದಾರೆ. ಇದರಿಂದ ಎರಡು ನಗರಗಳ ನಡುವಿನ ಪ್ರಯಾಣದ ಸಮಯ ನಾಲ್ಕು ಗಂಟೆ ಇಳಿಕೆಯಾಗಲಿದೆ. 144 ಕಿಮೀ ವ್ಯಾಪ್ತಿಯಲ್ಲಿ ರೈಲಿನ ವೇಗವನ್ನು ಗಂಟೆಗೆ 110 ಕಿಲೋಮೀಟರ್ (ಕಿಮೀ) ನಿಂದ 130 ಕಿಮೀಗೆ ಹೆಚ್ಚಿಸಲಾಗಿದೆ. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಈ ವೇಗದ ಪರಿಷ್ಕರಣೆಯು ಪ್ರಯಾಣಿಕರಿಗೆ 25 ರಿಂದ 30 ನಿಮಿಷಗಳನ್ನು ಉಳಿಸುವ ನಿರೀಕ್ಷೆಯಿದೆ. ಲಿಂಕ್ ಹಾಫ್‌ಮನ್ ಬುಷ್ (ಎಲ್‌ಹೆಚ್‌ಬಿ) ಕೋಚ್‌ಗಳನ್ನು ಹೊಂದಿರುವ ಒಟ್ಟು 124 ರೈಲುಗಳು ಮುಂದಿನ ವಾರದಿಂದ ಅರಕ್ಕೋಣಂ ಮತ್ತು ಜೋಲಾರ್‌ಪೆಟ್ಟೈ ನಡುವೆ 130 ಕಿಮೀ ವೇಗದಲ್ಲಿ ಸಂಚರಿಸಲಿವೆ. ಐಸಿಎಫ್ ವಿನ್ಯಾಸದ ಕೋಚ್‌ಗಳನ್ನು ಹೊಂದಿರುವ ರೈಲುಗಳು ಸುರಕ್ಷತೆಯ ಕಾರಣಗಳಿಂದ 110 ಕಿಮೀ ವೇಗದಲ್ಲಿ ಚಲಿಸುತ್ತವೆ. ಟ್ರ್ಯಾಕ್ ಮತ್ತು ಸಿಗ್ನಲಿಂಗ್ ಕೆಲಸಗಳು ಪೂರ್ಣಗೊಳ್ಳುವುದಕ್ಕಾಗಿ ಕಾಯಲಾಗುತ್ತಿದ್ದು, ಇದು ಪೂರ್ಣಗೊಂಡ ಕೂಡಲೇ ಈ ವೇಗ ವರ್ಧನೆ ಅನುಷ್ಠಾನಕ್ಕೆ ಬರಲಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಟ್ರೈನ್​ ಕ್ರಾಸಿಂಗ್​ ವೇಳೆ ಉಂಟಾಗುವ ಟ್ರಾಫಿಕ್​​ಗೆ ಸಿಗಲಿದೆ ಮುಕ್ತಿ; 26 ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ನಿರ್ಮಾಣ

ಸದ್ಯ ಬೆಂಗಳೂರು-ಚೆನ್ನೈ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪ್ರಯಾಣವನ್ನು 4 ಗಂಟೆ ಅವಧಿಯಲ್ಲಿ ಪೂರ್ಣಗೊಳಿಸುತ್ತದೆ. ಇನ್ನು ಶತಾಬ್ಧಿ, ಬೃಂದಾವನ್ ಎಕ್ಸ್ ಪ್ರೆಸ್ ರೈಲುಗಳು ಆರು ಗಂಟೆ ಬದಲು 5 ಗಂಟೆ 30 ನಿಮಿಷದ ಪ್ರಯಾಣದ ಅವಧಿಯಲ್ಲಿ ಈ ನಗರಗಳ ನಡುವೆ ಸಂಚರಿಸಲಿವೆ. ಬೆಂಗಳೂರು ಕಡೆಗೆ ಸಂಚರಿಸುವ ಇತರೆ ರೈಲುಗಳ ವೇಗ ವರ್ಧನೆಗೂ ಮುಂದಿನ ದಿನಗಳಲ್ಲಿ ಅನುಮತಿ ಸಿಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:57 pm, Sun, 20 August 23

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್