AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಸಹಿ ಸುದ್ದಿ: ಬೆಂಗಳೂನಿಂದ-ಚೆನ್ನೈಗೆ 4 ಗಂಟೆಯಲ್ಲಿ ಪ್ರಯಾಣಿಸಿ

ರಾಜ್ಯ ರಾಜಧಾನಿ ಬೆಂಗಳೂರಿನಿಂದ ತಮಿಳುನಾಡು ರಾಜಧಾನಿ ಚೆನ್ನೈಗೆ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಅರಕ್ಕೋಣಂ ಮತ್ತು ಜೋಲಾರ್‌ಪೇಟ್ಟೈ ನಿಲ್ದಾಣಗಳ ನಡುವಿನ ರೈಲು ವೇಗವನ್ನು ಹೆಚ್ಚಿಸಲು ರೈಲ್ವೆ ಅಧಿಕಾರಿಗಳು ಅನುಮೋದನೆ ನೀಡಿದ್ದಾರೆ.

ಪ್ರಯಾಣಿಕರಿಗೆ ಸಹಿ ಸುದ್ದಿ: ಬೆಂಗಳೂನಿಂದ-ಚೆನ್ನೈಗೆ 4 ಗಂಟೆಯಲ್ಲಿ ಪ್ರಯಾಣಿಸಿ
ರೈಲು
ವಿವೇಕ ಬಿರಾದಾರ
|

Updated on:Aug 20, 2023 | 2:59 PM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಿಂದ ತಮಿಳುನಾಡು ರಾಜಧಾನಿ ಚೆನ್ನೈಗೆ (Bengaluru – Chennai) ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಅರಕ್ಕೋಣಂ ಮತ್ತು ಜೋಲಾರ್‌ಪೇಟ್ಟೈ ನಿಲ್ದಾಣಗಳ ನಡುವಿನ ರೈಲು ವೇಗವನ್ನು ಹೆಚ್ಚಿಸಲು ರೈಲ್ವೆ ಅಧಿಕಾರಿಗಳು ಅನುಮೋದನೆ ನೀಡಿದ್ದಾರೆ. ಇದರಿಂದ ಎರಡು ನಗರಗಳ ನಡುವಿನ ಪ್ರಯಾಣದ ಸಮಯ ನಾಲ್ಕು ಗಂಟೆ ಇಳಿಕೆಯಾಗಲಿದೆ. 144 ಕಿಮೀ ವ್ಯಾಪ್ತಿಯಲ್ಲಿ ರೈಲಿನ ವೇಗವನ್ನು ಗಂಟೆಗೆ 110 ಕಿಲೋಮೀಟರ್ (ಕಿಮೀ) ನಿಂದ 130 ಕಿಮೀಗೆ ಹೆಚ್ಚಿಸಲಾಗಿದೆ. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಈ ವೇಗದ ಪರಿಷ್ಕರಣೆಯು ಪ್ರಯಾಣಿಕರಿಗೆ 25 ರಿಂದ 30 ನಿಮಿಷಗಳನ್ನು ಉಳಿಸುವ ನಿರೀಕ್ಷೆಯಿದೆ. ಲಿಂಕ್ ಹಾಫ್‌ಮನ್ ಬುಷ್ (ಎಲ್‌ಹೆಚ್‌ಬಿ) ಕೋಚ್‌ಗಳನ್ನು ಹೊಂದಿರುವ ಒಟ್ಟು 124 ರೈಲುಗಳು ಮುಂದಿನ ವಾರದಿಂದ ಅರಕ್ಕೋಣಂ ಮತ್ತು ಜೋಲಾರ್‌ಪೆಟ್ಟೈ ನಡುವೆ 130 ಕಿಮೀ ವೇಗದಲ್ಲಿ ಸಂಚರಿಸಲಿವೆ. ಐಸಿಎಫ್ ವಿನ್ಯಾಸದ ಕೋಚ್‌ಗಳನ್ನು ಹೊಂದಿರುವ ರೈಲುಗಳು ಸುರಕ್ಷತೆಯ ಕಾರಣಗಳಿಂದ 110 ಕಿಮೀ ವೇಗದಲ್ಲಿ ಚಲಿಸುತ್ತವೆ. ಟ್ರ್ಯಾಕ್ ಮತ್ತು ಸಿಗ್ನಲಿಂಗ್ ಕೆಲಸಗಳು ಪೂರ್ಣಗೊಳ್ಳುವುದಕ್ಕಾಗಿ ಕಾಯಲಾಗುತ್ತಿದ್ದು, ಇದು ಪೂರ್ಣಗೊಂಡ ಕೂಡಲೇ ಈ ವೇಗ ವರ್ಧನೆ ಅನುಷ್ಠಾನಕ್ಕೆ ಬರಲಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಟ್ರೈನ್​ ಕ್ರಾಸಿಂಗ್​ ವೇಳೆ ಉಂಟಾಗುವ ಟ್ರಾಫಿಕ್​​ಗೆ ಸಿಗಲಿದೆ ಮುಕ್ತಿ; 26 ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ನಿರ್ಮಾಣ

ಸದ್ಯ ಬೆಂಗಳೂರು-ಚೆನ್ನೈ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪ್ರಯಾಣವನ್ನು 4 ಗಂಟೆ ಅವಧಿಯಲ್ಲಿ ಪೂರ್ಣಗೊಳಿಸುತ್ತದೆ. ಇನ್ನು ಶತಾಬ್ಧಿ, ಬೃಂದಾವನ್ ಎಕ್ಸ್ ಪ್ರೆಸ್ ರೈಲುಗಳು ಆರು ಗಂಟೆ ಬದಲು 5 ಗಂಟೆ 30 ನಿಮಿಷದ ಪ್ರಯಾಣದ ಅವಧಿಯಲ್ಲಿ ಈ ನಗರಗಳ ನಡುವೆ ಸಂಚರಿಸಲಿವೆ. ಬೆಂಗಳೂರು ಕಡೆಗೆ ಸಂಚರಿಸುವ ಇತರೆ ರೈಲುಗಳ ವೇಗ ವರ್ಧನೆಗೂ ಮುಂದಿನ ದಿನಗಳಲ್ಲಿ ಅನುಮತಿ ಸಿಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:57 pm, Sun, 20 August 23

ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ