AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ, ಈ ರಸ್ತೆಗಳಲ್ಲಿ ಇನ್ನೂ 15 ದಿನ ಟ್ರಾಫಿಕ್​ ಜಾಮ್​; ರಸ್ತೆಗಿಳಿಯುವ ಮುನ್ನ ಯೋಚಿಸಿ

ಸದರಿ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿ ಹಾಗೂ ಇನ್ನಿತರ ಕೆಲಸಗಳು ಸುಮಾರು 15 ದಿನಗಳ ಕಾಲ ಮುಂದುವರೆಯಲಿದ್ದು, ಅಲ್ಲಿಯ ತನಕವೂ ಜನರಿಗೆ ಟ್ರಾಫಿಕ್​ ಜಾಮ್ ಕಾಟ ಕಟ್ಟಿಟ್ಟ ಬುತ್ತಿ. ಹೀಗಾಗಿ ಈ ರಸ್ತೆಗಳಲ್ಲಿ ಸಂಚರಿಸುವ ಜನರು ತುರ್ತು ಕೆಲಸಗಳಿದ್ದಾಗ ಪರ್ಯಾಯ ಮಾರ್ಗ ನೋಡಿಕೊಳ್ಳುವುದೇ ಉತ್ತಮ.

ಬೆಂಗಳೂರಿಗರೇ, ಈ ರಸ್ತೆಗಳಲ್ಲಿ ಇನ್ನೂ 15 ದಿನ ಟ್ರಾಫಿಕ್​ ಜಾಮ್​; ರಸ್ತೆಗಿಳಿಯುವ ಮುನ್ನ ಯೋಚಿಸಿ
ಟ್ರಾಫಿಕ್ ಜಾಮ್
TV9 Web
| Edited By: |

Updated on: Aug 09, 2021 | 11:36 AM

Share

ಬೆಂಗಳೂರು: ಬೆಂಗಳೂರಿನ ಕೆಲವೆಡೆ ವೈಟ್ ಟಾಪಿಂಗ್ ಕಾಮಗಾರಿ ಆಗುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವಂತಾಗಿದೆ. ಬೆಂಗಳೂರಿನ ಕೆ.ಆರ್.ಮಾರ್ಕೆಟ್, SJP ರಸ್ತೆಯ ಜಂಕ್ಷನ್‌ನಲ್ಲಿ ವೈಟ್ ಟಾಪಿಂಗ್ ಮಾಡಲಾಗುತ್ತಿದ್ದು, ಮಾರ್ಕೆಟ್ ಬಳಿ ಇರುವ ಮೇಲ್ಸೇತುವೆಯ ಒಂದು ಕಡೆ ರಸ್ತೆ ಬಂದ್ ಆಗಿದೆ. ಹೀಗಾಗಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ ಮೇಲೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನಗಳು ಸಾಲುಗಟ್ಟಿ ನಿಂತ ಕಾರಣ ತುರ್ತು ಕೆಲಸಗಳ ನಿಮಿತ್ತ ರಸ್ತೆಗಿಳಿದಿದ್ದ ಜನರು ಒದ್ದಾಡುತ್ತಿದ್ದಾರೆ.

ಮೈಸೂರು ರಸ್ತೆಯಿಂದ ಟೌನ್ ಹಾಲ್ ಕಡೆಗೆ ಬರುವ ಡೌನ್ ರ್ಯಾಪ್ ಬಳಿಯ ಎಸ್.ಜೆ.ಪಿ ರಸ್ತೆಯ ಜಂಕ್ಷನ್​ನಲ್ಲಿ ವೈಟ್‌ಟಾಪಿಂಗ್ ಜತೆಗೆ ಅಡ್ಡಮೋರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ಫ್ಲೈಓವರ್ ಮೂಲಕ ನೇರವಾಗಿ ಟೌನ್ ಹಾಲ್ ಕಡೆಗೆ ಹೋಗುವ ರಸ್ತೆ ಬಂದ್ ಆಗಿದೆ. ಸದ್ಯ ಟೌನ್ ಹಾಲ್ ಕಡೆ ಹೋಗುವ ವಾಹನಗಳು ಕೆ.ಆರ್ ಮಾರುಕಟ್ಟೆ ಒಳಗೆ ಹೋಗಬೇಕಾಗಿದ್ದು, ವಾಹನ ದಟ್ಟಣೆ ಉಂಟಾಗಿದೆ.

ಬೆಂಗಳೂರಿಗರೇ ಇನ್ನೂ 15 ದಿನ ಟ್ರಾಫಿಕ್​ ಜಾಮ್ ಸದರಿ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿ ಹಾಗೂ ಇನ್ನಿತರ ಕೆಲಸಗಳು ಸುಮಾರು 15 ದಿನಗಳ ಕಾಲ ಮುಂದುವರೆಯಲಿದ್ದು, ಅಲ್ಲಿಯ ತನಕವೂ ಜನರಿಗೆ ಟ್ರಾಫಿಕ್​ ಜಾಮ ಕಾಟ ಕಟ್ಟಿಟ್ಟ ಬುತ್ತಿ. ಹೀಗಾಗಿ ಈ ರಸ್ತೆಗಳಲ್ಲಿ ಸಂಚರಿಸುವ ಜನರು ತುರ್ತು ಕೆಲಸಗಳಿದ್ದಾಗ ಪರ್ಯಾಯ ಮಾರ್ಗ ನೋಡಿಕೊಳ್ಳುವುದೇ ಉತ್ತಮವಾಗಿದ್ದು, ಕಾರು, ಬೈಕ್​ ರಸ್ತೆಗಿಳಿಸುವ ಮುನ್ನ ಯೋಚಿಸುವುದು ಒಳಿತು.

(Bengaluru to face traffic jam in these routes for another 15 days think before travel)

ಇದನ್ನೂ ಓದಿ: ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್ ಬಳಿ ಕೈ ಕಾರ್ಯಕರ್ತರ ಪ್ರತಿಭಟನೆ, 2 ಕಿಲೋಮೀಟರ್ ಟ್ರಾಫಿಕ್ ಜಾಮ್; ಧರಣಿ ನಿರತರನ್ನು ವಶಕ್ಕೆ ಪಡೆದ ಪೊಲೀಸರು

Lucknow Girl Video: ಪೊಲೀಸ್ ಎದುರಲ್ಲೇ ಟ್ರಾಫಿಕ್​ ಮಧ್ಯೆ ಕ್ಯಾಬ್​ ಚಾಲಕನಿಗೆ ಥಳಿಸಿದ ಯುವತಿ; ಶಾಕಿಂಗ್ ವಿಡಿಯೋ ವೈರಲ್

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ