AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯದೇವ ಆಯ್ತು, ಈಗ ಬೆಂಗಳೂರಿನ ಮತ್ತೊಂದು ಫ್ಲೈ ಓವರ್ ಧರೆಗೆ: ಏನಿದು ಬಿ-ಸ್ಮೈಲ್ ಹೊಸ ಪ್ಲಾನ್?

ಬೆಂಗಳೂರಿನ ಐಒಸಿ ಜಂಕ್ಷನ್‌ನಲ್ಲಿರುವ ಹಳೆಯ ಫ್ಲೈ ಓವರ್ ತೆರವುಗೊಳಿಸಿ, 436 ಕೋಟಿ ರೂ. ವೆಚ್ಚದ ಎಲಿವೇಟೆಡ್ ರೋಟರಿ ಫ್ಲೈ ಓವರ್ ನಿರ್ಮಿಸಲು ಬಿ-ಸ್ಮೈಲ್ ನಿರ್ಧರಿಸಿದೆ. ಈ ಯೋಜನೆಯಿಂದ ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ಸುಗಮ ಸಂಪರ್ಕ ಸಿಗಲಿದ್ದು, ಪೂರ್ವ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಕಾಮಗಾರಿ ವೇಳೆ ಸಂಚಾರ ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳ ಯೋಜನೆ ಸಿದ್ಧವಾಗುತ್ತಿದೆ.

ಜಯದೇವ ಆಯ್ತು, ಈಗ ಬೆಂಗಳೂರಿನ ಮತ್ತೊಂದು ಫ್ಲೈ ಓವರ್ ಧರೆಗೆ: ಏನಿದು ಬಿ-ಸ್ಮೈಲ್ ಹೊಸ ಪ್ಲಾನ್?
ಜಯದೇವ ಆಯ್ತು, ಈಗ ಬೆಂಗಳೂರಿನ ಮತ್ತೊಂದು ಫ್ಲೈ ಓವರ್ ಧರೆಗೆ
ಭಾವನಾ ಹೆಗಡೆ
|

Updated on: May 05, 2026 | 10:16 AM

Share

ಬೆಂಗಳೂರು, ಮೇ 05: ಜಯದೇವ ಮತ್ತು ಡಾಲ್ಮಿಯಾ ಫ್ಲೈ ಓವರ್‌ಗಳ ತೆರವು ಕಾರ್ಯಾಚರಣೆಯ ಬೆನ್ನಲ್ಲೇ, ಈಗ ಪೂರ್ವ ಬೆಂಗಳೂರಿನ ಮತ್ತೊಂದು ಪ್ರಮುಖ ಮೇಲ್ಸೇತುವೆ (Flyover) ಇತಿಹಾಸ ಸೇರಲು ಸಿದ್ಧವಾಗಿದೆ. ಐಒಸಿ ಜಂಕ್ಷನ್‌ನಲ್ಲಿರುವ ಹಳೆಯ ಫ್ಲೈ ಓವರ್ ಅನ್ನು ಕೆಡವಿ, ಅಲ್ಲಿ 436 ಕೋಟಿ ರೂಪಾಯಿ ವೆಚ್ಚದಲ್ಲಿ ಬೃಹತ್ ಎಲಿವೇಟೆಡ್ ರೋಟರಿ ಫ್ಲೈ ಓವರ್ ನಿರ್ಮಿಸಲು ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮೈಲ್) ಯೋಜನೆ ರೂಪಿಸಿದೆ. 2001-02ರ ಅವಧಿಯಲ್ಲಿ ರೈಲ್ವೇ ಇಲಾಖೆಯಿಂದ ನಿರ್ಮಾಣವಾಗಿದ್ದ ಈ ಹಳೆಯ ಸೇತುವೆಯು ಹೊಸ ವಿನ್ಯಾಸದ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಯೋಜನೆಯ ವೆಚ್ಚ ಮತ್ತು ವಿನ್ಯಾಸದ ಬದಲಾವಣೆ

ಆರಂಭದಲ್ಲಿ ಈ ರೋಟರಿ ಫ್ಲೈ ಓವರ್ ಯೋಜನೆಯನ್ನು 263 ಕೋಟಿ ರೂ. ವೆಚ್ಚದಲ್ಲಿ ಅಂದಾಜಿಸಲಾಗಿತ್ತು. ಆದರೆ ಕಾಮಗಾರಿ ವಿಳಂಬ ಮತ್ತು ಯೋಜನೆಯ ವಿನ್ಯಾಸದಲ್ಲಿ ಮಾಡಲಾದ ಮಹತ್ವದ ಬದಲಾವಣೆಗಳಿಂದಾಗಿ ಈಗ ಇದರ ವೆಚ್ಚ 436 ಕೋಟಿ ರೂ.ಗೆ ಏರಿಕೆಯಾಗಿದೆ. ಮಾರುತಿ ಸೇವಾನಗರ ರಸ್ತೆಯಿಂದ ಸುಮಾರು 1.5 ಕಿಲೋಮೀಟರ್ ಉದ್ದದ ಹೆಚ್ಚುವರಿ ಫ್ಲೈ ಓವರ್ ಅನ್ನು ಈ ಯೋಜನೆಗೆ ಸೇರ್ಪಡೆಗೊಳಿಸಿರುವುದು ಈ ದುಬಾರಿ ವೆಚ್ಚಕ್ಕೆ ಪ್ರಮುಖ ಕಾರಣವಾಗಿದೆ. ಜಿಎಸ್‌ಟಿ ಮತ್ತು ಇತರ ತಾಂತ್ರಿಕ ಘಟಕಗಳ ಸೇರ್ಪಡೆಯೂ ಅಂತಿಮ ಅಂದಾಜು ಮೊತ್ತದ ಮೇಲೆ ಪ್ರಭಾವ ಬೀರಿದೆ ಎಂದು ಬಿ-ಸ್ಮೈಲ್ ಅಧಿಕಾರಿಗಳು ತಿಳಿಸಿದ್ದಾರೆ.

ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ಸುಗಮ ಕನೆಕ್ಟಿವಿಟಿ

2022ರಲ್ಲಿ ಉದ್ಘಾಟನೆಗೊಂಡ ಸರ್ ಎಂ. ವಿಶ್ವೇಶ್ವರಯ್ಯ ರೈಲ್ವೇ ಟರ್ಮಿನಲ್ (SMVT) ಸದ್ಯ ಕಿರಿದಾದ ರಸ್ತೆಗಳು ಮತ್ತು ಸಂಪರ್ಕದ ಕೊರತೆಯಿಂದಾಗಿ ಪ್ರಯಾಣಿಕರಿಗೆ ತಲೆನೋವಾಗಿ ಪರಿಣಮಿಸಿದೆ. ಹೊಸ ಎಲಿವೇಟೆಡ್ ರೋಟರಿ ಫ್ಲೈ ಓವರ್ ನಿರ್ಮಾಣವಾದರೆ, ಹಳೆ ಮದ್ರಾಸ್ ರಸ್ತೆ, ಕಮ್ಮನಹಳ್ಳಿ, ಬಾಣಸವಾಡಿ ಮತ್ತು ಬೈಯಪ್ಪನಹಳ್ಳಿ ಭಾಗಗಳಿಂದ ಬರುವ ಜನರಿಗೆ ಯಾವುದೇ ಅಡೆತಡೆಯಿಲ್ಲದೆ ರೈಲ್ವೇ ನಿಲ್ದಾಣ ತಲುಪಲು ಸಾಧ್ಯವಾಗುತ್ತದೆ. ಇದರ ಜೊತೆಗೆ ಬೈಯಪ್ಪನಹಳ್ಳಿ ರಸ್ತೆಯಲ್ಲಿ ಹೊಸ ರೈಲ್ವೇ ಮೇಲ್ಸೇತುವೆಯನ್ನು ಕೂಡ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದು ಎಸ್.ವಿ. ರಸ್ತೆ ಮೆಟ್ರೋ ನಿಲ್ದಾಣದ ಕಡೆಯಿಂದ ಬರುವವರಿಗೂ ಸಹಕಾರಿಯಾಗಲಿದೆ.

ಇದನ್ನೂ ಓದಿ ವಾಹನ ಸವಾರರೇ ಗಮನಿಸಿ: ಇಂದಿನಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್! ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ

ಸಂಚಾರ ದಟ್ಟಣೆ ಮತ್ತು ಪರ್ಯಾಯ ಮಾರ್ಗಗಳ ಸವಾಲು

ಈ ಬೃಹತ್ ಕಾಮಗಾರಿ ಆರಂಭವಾದರೆ ದೊಡ್ಡ ಬಾಣಸವಾಡಿ ರಸ್ತೆ, ಕಮ್ಮನಹಳ್ಳಿ ಮುಖ್ಯ ರಸ್ತೆ ಮತ್ತು ಬೈಯಪ್ಪನಹಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗುವ ಆತಂಕವಿದೆ. ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ಕಂಗೆಟ್ಟಿರುವ ಈ ಭಾಗದ ಜನರಿಗೆ ಕಾಮಗಾರಿಯ ಅವಧಿಯಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಈ ಸವಾಲನ್ನು ಎದುರಿಸಲು ಬಿ-ಸ್ಮೈಲ್ ಸಂಸ್ಥೆಯು ಸಂಚಾರಿ ಪೊಲೀಸರೊಂದಿಗೆ ಸಭೆ ನಡೆಸಿ, ಕಾಮಗಾರಿ ಆರಂಭವಾಗುವ ಮುನ್ನವೇ ವೈಜ್ಞಾನಿಕವಾದ ಟ್ರಾಫಿಕ್ ಡೈವರ್ಷನ್ ಪ್ಲಾನ್ ಸಿದ್ಧಪಡಿಸಲು ಮುಂದಾಗಿದೆ. ಸ್ಥಳೀಯ ವಾಹನಗಳು ಮತ್ತು ಟರ್ಮಿನಲ್‌ಗೆ ಹೋಗುವ ವಾಹನಗಳನ್ನು ಪ್ರತ್ಯೇಕಿಸುವ ಮೂಲಕ ದಟ್ಟಣೆ ಕಡಿಮೆ ಮಾಡುವುದು ಯೋಜನೆಯ ಮುಖ್ಯ ಗುರಿಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?
‘ಸೆಟ್​​ನಲ್ಲಿ ಮೋನಿಷಾನ ಮಗಳು ಅಂತ ನಾನು ಯಾವಾಗಲೂ ನೋಡಿಲ್ಲ’; ದುನಿಯಾ ವಿಜಯ್
‘ಸೆಟ್​​ನಲ್ಲಿ ಮೋನಿಷಾನ ಮಗಳು ಅಂತ ನಾನು ಯಾವಾಗಲೂ ನೋಡಿಲ್ಲ’; ದುನಿಯಾ ವಿಜಯ್