AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Tirupati Helicopter: ಯಾತ್ರಾರ್ಥಿಗಳಿಗೆ ಸಿಹಿ ಸುದ್ದಿ, ಬೆಂಗಳೂರು-ತಿರುಪತಿ ಹೆಲಿಕಾಪ್ಟರ್​ ಸೇವೆ ಆರಂಭ, ಇಲ್ಲಿದೆ ದರ, ಸಮಯ

ಬೆಂಗಳೂರಿನಿಂದ ತಿರುಪತಿಗೆ ತೆರಳುವ ಭಕ್ತರಿಗೆ ಫ್ಲೈಬ್ಲೇಡ್​​ ಇಂಡಿಯಾ ಸಂಸ್ಥೆ ಸಹಿಸುದ್ದಿ ನೀಡಿದೆ. ಈ ಕಂಪನಿ ಬೆಂಗಳೂರಿನಿಂದ ತಿರುಪತಿಗೆ ತೆರಳುವ ಭಕ್ತರಿಗೆ ಹೆಲಿಕಾಪ್ಟರ್​ ಸೇವೆ ಆರಂಭಿಸಿದೆ.

Bangalore Tirupati Helicopter: ಯಾತ್ರಾರ್ಥಿಗಳಿಗೆ ಸಿಹಿ ಸುದ್ದಿ, ಬೆಂಗಳೂರು-ತಿರುಪತಿ ಹೆಲಿಕಾಪ್ಟರ್​ ಸೇವೆ ಆರಂಭ, ಇಲ್ಲಿದೆ ದರ, ಸಮಯ
ಬೆಂಗಳೂರು-ತಿರುಪತಿ ಹೆಲಿಕಾಪ್ಟರ್​ ಸೇವೆ
ವಿವೇಕ ಬಿರಾದಾರ
|

Updated on:Jun 09, 2023 | 10:32 AM

Share

ಬೆಂಗಳೂರು: ತಿರುಪತಿಯ (Tirupati) ಶ್ರೀ ವೆಂಕಟೇಶ್ವರ ಸ್ವಾಮಿ (Venkateswara Swamy) ದೇವಸ್ಥಾನ ದೇಶದಲ್ಲೇ ಪ್ರಸಿದ್ಧಿಯಾದ ಪುಣ್ಯಕ್ಷೇತ್ರ. ಭಾರತದ (India) ವಿವಿಧ ಪ್ರದೇಶಗಳಿಂದ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಪ್ರತಿನಿತ್ಯ ಭೇಟಿ ನೀಡುತ್ತಾರೆ. ಇದರಲ್ಲಿ ಕರ್ನಾಟಕವೇನು ಹೊರತಾಗಿಲ್ಲ. ರಾಜ್ಯದಿಂದಲೂ ಲಕ್ಷಾಂತರ ಭಕ್ತರು ಪ್ರತಿನಿತ್ಯ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆಯುತ್ತಾರೆ. ಇದೀಗ ಬೆಂಗಳೂರಿನಿಂದ ತಿರುಪತಿಗೆ (Bengaluru-Tirupati) ತೆರಳುವ ಭಕ್ತರಿಗೆ ಫ್ಲೈಬ್ಲೇಡ್​​ ಇಂಡಿಯಾ ಸಂಸ್ಥೆ ಸಹಿಸುದ್ದಿ ನೀಡಿದೆ. ಈ ಕಂಪನಿ ಬೆಂಗಳೂರಿನಿಂದ ತಿರುಪತಿಗೆ (Bengaluru-Tirupati Helicopter) ತೆರಳುವ ಭಕ್ತರಿಗೆ ಹೆಲಿಕಾಪ್ಟರ್​ ಸೇವೆ ಆರಂಭಿಸಿದೆ.

ಹಂಚ್ ವೆಂಚರ್ಸ್ ಮತ್ತು ಬೇಡ್ ಏರ್ ಮೊಬಿಲಿಟಿ ಜಂಟಿಯಾಗಿ ಸ್ಥಾಪಿಸಿದ ಕಂಪನಿಯು ಬೆಂಗಳೂರು – ತಿರುಪತಿ ನಡುವೆ ಹಲಿಕಾಪ್ಟರ್ ಸೇವಯನ್ನು ಪ್ರಾರಂಭಿಸಿದೆ. ಈ ಹಲಿಕಾಪ್ಟರ್‌ನಲ್ಲಿ ಯಾತ್ರಾರ್ಥಿಗಳು ಬೆಂಗಳೂರಿನಿಂದ ತಿರುಪತಿ, ಮರಳಿ ತಿರುಪತಿಯಿಂದ ಬೆಂಗಳೂರಿಗೆ ಪ್ರಯಾಣಿಸಬಹುದು ಎಂದು ಕಂಪನಿ ಹೇಳಿದೆ.

ತಿರುಪತಿ ಯಾತ್ರಾರ್ಥಿಗಳು ಹೆಲಿಕಾಪ್ಟರ್ ಸೇವೆಯನ್ನು ಯಾವಾಗ ಬೇಕಾದರೂ ಬಳಸಬಹುದು. ಕಂಪನಿಯು ಸೇವೆಯ ಬೆಲೆಯನ್ನು ರೂ.3,50,000 ಎಂದು ನಿಗದಿಪಡಿಸಿದೆ. ಪ್ರತಿ ಹಲಿಕಾಪ್ಟರ್‌ನಲ್ಲಿ ಗರಿಷ್ಠ ಐದು ಜನರು ಪ್ರಯಾಣಿಸಬಹುದು. ಪ್ರಯಾಣಿಕರು ಸಂಪೂರ್ಣ ಹಲಿಕಾಪ್ಟರ್​​ ಅನ್ನು ಬುಕ್ ಮಾಡಬಹುದು ಅಥವಾ ಇತರರೊಂದಿಗೆ ಹಂಚಿಕೊಳ್ಳಬಹುದು.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣ; ಸೆ.1 ರಿಂದ ಟರ್ಮಿನಲ್ 2ನಿಂದ ಕಾರ್ಯಾಚರಿಸಲಿವೆ ಅಂತಾರಾಷ್ಟ್ರೀಯ ವಿಮಾನಗಳು

ಹಲಿಕಾಪ್ಟರ್ ಸಮಯ

ಹಲಿಕಾಪ್ಟರ್ ಪ್ರಯಾಣವು ಬೆಂಗಳೂರಿನ HAL ವಿಮಾನ ನಿಲ್ದಾಣದಿಂದ ತಿರುಪತಿಗೆ ಬೆಳಿಗ್ಗೆ 09:15-09:30 ನಡುವೆ ಪ್ರಾರಂಭವಾಗುತ್ತದೆ. ತಿರುಪತಿಯಿಂದ ಬೆಂಗಳೂರಿಗೆ ಹಿಂತಿರುಗುವ ಹಲಿಕಾಪ್ಟರ್‌ಗಳು ಸಂಜೆ 04:00 ರಿಂದ 04:15 ರವರೆಗೆ ಹೊರಡುತ್ತವೆ. ಬೆಂಗಳೂರು-ತಿರುಪತಿ ನಡುವಿನ ಸಂಪರ್ಕವನ್ನು ಸುಧಾರಿಸಲು ಕಂಪನಿಯು ಈ ಸೇವೆಯನ್ನು ಪರಿಚಯಿಸಿದೆ. ವಯಸ್ಸಾದವರಿಗೆ ಹೆಚ್ಚು ಆರಾಮದಾಯಕ ಮತ್ತು ವೇಗದ ಪ್ರಯಾಣವನ್ನು ಒದಗಿಸಲು ಇದನ್ನು ಪರಿಚಯಿಸಲಾಗಿದೆ.

ಬೇಡ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಶ್ರೀ ಅಮಿತ್‌ ದತ್ತಾ ಮಾತನಾಡಿ, ಭಾರತದಲ್ಲಿ ತೀರ್ಥಯಾತ್ರೆ ಮಾಡುವುದು ಅತ್ಯಂತ ಸವಾಲಿನ ಕೆಲಸವಾಗಿದೆ. ವಯೋವೃದ್ಯರು ದೇವಸ್ಥಾನಗಳಿಗೆ ಹೋಗಲು ಕಷ್ಟವಾಗುತ್ತದೆ. ಇಂತಹ ಸಂದರ್ಭಗಳಲ್ಲಿ, ಪ್ರಮುಖ ಆಧ್ಯಾತ್ಮಿಕ ತಾಣವಾದ ತಿರುಪತಿಗೆ ಒಂದೇ ದಿನದಲ್ಲಿ ಹೋಗಿ ಬರಲು ಬೇಡ್ ಇಂಡಿಯಾ ಹೆಲಿಕಾಪ್ಟರ್​ ಸೇವೆ ಆರಂಭಿಸಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:26 am, Fri, 9 June 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!