AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಕಡ್ಡಾಯ: ಬಿಬಿಎಂಪಿ

ನಗರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಯಂತ್ರಿಸಲು ಹೊಸದಾಗಿ ಅಧಿಸೂಚಿತ ನಿಯಮಗಳನ್ನು ಜಾರಿಗೆ ತರಲು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ. ಈ ನಿಯಮ ಜಾರಿಗೆ ಬಂದರೇ ಎಲ್ಲಾ ತಂಬಾಕು ಮಾರಾಟಗಾರರು ಮಾರಾಟ ಮಾಡಲು ಪ್ರತ್ಯೇಕ ಪರವಾನಗಿಯನ್ನು ಪಡೆಯಬೇಕು.

ಇನ್ಮುಂದೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಕಡ್ಡಾಯ: ಬಿಬಿಎಂಪಿ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Apr 15, 2023 | 3:07 PM

Share

ಬೆಂಗಳೂರು: ನಗರದಲ್ಲಿ ತಂಬಾಕು ಉತ್ಪನ್ನಗಳ (Tobacco Products) ಮಾರಾಟವನ್ನು ನಿಯಂತ್ರಿಸಲು ಹೊಸದಾಗಿ ಅಧಿಸೂಚಿತ ನಿಯಮಗಳನ್ನು ಜಾರಿಗೆ ತರಲು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ನಿರ್ಧರಿಸಿದೆ. ಈ ನಿಯಮ ಜಾರಿಗೆ ಬಂದರೇ ಎಲ್ಲಾ ತಂಬಾಕು ಮಾರಾಟಗಾರರು ಮಾರಾಟ ಮಾಡಲು ಪ್ರತ್ಯೇಕ ಪರವಾನಗಿಯನ್ನು ಪಡೆಯಬೇಕು. ಮೇ ಅಂತ್ಯದಿಂದ ಪರವಾನಗಿ ನೀಡಲು ಆರಂಭಿಸಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ.

ನಾವು ಮೇ ಅಂತ್ಯದಿಂದ ತಂಬಾಕು ಪರವಾನಗಿ ನೀಡಲು ಪ್ರಾರಂಭಿಸುತ್ತೇವೆ. ನಂತರ ಪರವಾನಗಿ ಇಲ್ಲದೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರಿಗೆ ದಂಡ ವಿಧಿಸಲಾಗುವುದು ಅಥವಾ ಅವರ ಅಂಗಡಿಗಳನ್ನು ಮುಚ್ಚಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಕೆ.ವಿ.ತ್ರಿಲೋಕಚಂದ್ರ ಹೇಳಿದರು.

ಐದು ವರ್ಷಗಳ ಅವಧಿಗೆ ಪರವಾನಗಿ ಶುಲ್ಕ 500 ರೂ. ಇದೆ. ನಿಯಮ ಉಲ್ಲಂಘಿಸಿದರವರಿಗೆ 5,000 ರೂ ಮತ್ತು ನಂತರ ಹೀಗೆ ಮುಂದುವರೆದರೇ ದಿನಕ್ಕೆ 100 ರೂ. ದಂಡ ವಿಧಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಮಾರಾಟಗಾರರು ಅಂಗಡಿಯಲ್ಲಿ ಪರವಾನಗಿಯನ್ನು ಕಾಣುವಂತೆ ಹಾಕಬೇಕು ಮತ್ತು ಅಂಗಡಿಯ ಸುತ್ತಲೂ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡಬಾರದು.

ಇದನ್ನೂ ಓದಿ: ಕಾಮಗಾರಿ ಹೆಸರಲ್ಲಿ ಗುಂಡಿ ತೋಡಿ ಮಣ್ಣನ್ನು ಅಲ್ಲೇ ಗುಡ್ಡೆ ಹಾಕುತ್ತಿರುವ ಬಿಬಿಎಂಪಿ, ಧೂಳಿನಿಂದ ಸವಾರರು ಪರದಾಟ

ತಂಬಾಕು ಪರವಾನಗಿಯು ಕರ್ನಾಟಕ ಮುನ್ಸಿಪಲ್ ಕಾರ್ಪೊರೇಶನ್‌ಗಳ ಭಾಗವಾಗಿದೆ. ಈ ವರ್ಷದ ಆರಂಭದಲ್ಲಿ ಎಲ್ಲಾ ಪುರಸಭೆಯ ಸಂಸ್ಥೆಗಳು ಇದನ್ನು ಜಾರಿಗೆ ತರಲು ನಿರ್ಧರಿಸಿದ್ದು, ಮೇ ಅಂತ್ಯದಿಂದ ಇದು ಅನುಷ್ಠಾನಗೊಳ್ಳುತ್ತದೆ. ಈ ಮಧ್ಯೆ, ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನವನ್ನು ತಡೆಗಟ್ಟಲು ಬಿಬಿಎಂಪಿ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಕಾರ್ಯಪಡೆಗಳನ್ನು ರಚಿಸಿದೆ. ಕಾರ್ಯಪಡೆಗಳಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಇದ್ದಾರೆ ಎಂದು ತ್ರಿಲೋಕಚಂದ್ರ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ