AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಟ್ ಟಾಪಿಂಗ್ ಕಾಮಗಾರಿ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ 2 ತಿಂಗಳು ಬಂದ್​​

ಬೆಂಗಳೂರಿನ ದೇವರಬೀಸನಹಳ್ಳಿ ಸಕ್ತಾ ಆಸ್ಪತ್ರೆ ಮುಖ್ಯರಸ್ತೆಯಲ್ಲಿ (ಮಿಂತ್ರಾ ಅಪಾರ್ಟ್‌ಮೆಂಟ್‌ನಿಂದ ಬೆಳ್ಳಂದೂರು ಕೋಡಿವರೆಗೆ) 60 ದಿನಗಳ ಕಾಲ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ. ಈ ಅವಧಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳನ್ನು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ವೈಟ್ ಟಾಪಿಂಗ್ ಕಾಮಗಾರಿ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ 2 ತಿಂಗಳು ಬಂದ್​​
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Dec 03, 2024 | 12:46 PM

Share

ಬೆಂಗಳೂರು, ನವೆಂಬರ್​​ 14: ಬೃಹತ್​ ಬೆಂಗಳೂರು ಮಹಾನಗರ ಪಾಲೀಕೆ (BBMP) ವತಿಯಿಂದ ನಗರ ಹಲವು ರಸ್ತೆಗಳಿಗೆ ವೈಟ್ ಟಾಪಿಂಗ್ (White Topping) ಹಾಕಲಾಗುತ್ತಿದೆ. ವೈಟ್​ ಟಾಪಿಂಗ್​ ಕಾಮಗಾರಿ ಕೈಗೊಳ್ಳುವ ಹಿನ್ನಲೆಯಲ್ಲಿ ಬೆಂಗಳೂರಿನ (Bengaluru) ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ದೇವರಬೀಸನಹಳ್ಳಿ ಸಕ್ತಾ ಆಸ್ಪತ್ರೆ ಮುಖ್ಯರಸ್ತೆಯಲ್ಲಿ (ಮಿಂತ್ರಾ ಅಪಾರ್ಟ್ ಮೆಂಟ್ ಮುಂಭಾಗದ ರಸ್ತೆಯಿಂದ ಬೆಳ್ಳಂದೂರು ಕೋಡಿವರೆಗೆ) ವಾಹನ ಸಂಚಾರ 60 ದಿನಗಳ ಕಾಲ ನಿರ್ಬಂಧಿಸಲಾಗಿದೆ. ಬೆಂಗಳೂರು ಸಂಚಾರಿ ಪೊಲೀಸ್​​ ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ಮಾಹಿತಿ ನೀಡಿದೆ.

ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ:

ದೇವರಬೀಸನಹಳ್ಳಿ ಸಕ್ತಾ ಆಸ್ಪತ್ರೆ ಮುಖ್ಯರಸ್ತೆ (ಮಿಂತ್ರಾ ಅಪಾರ್ಟ್‌ಮೆಂಟ್ ಮುಂಭಾಗದ ರಸ್ತೆಯಿಂದ ಬೆಳ್ಳಂದೂರು ಕೋಡಿವರೆಗೆ) ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ:

ಯಮಲೂರು ಕಡೆಯಿಂದ ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಗೆ ಸಂಚರಿಸುವವರು ಹಳೆ ವಿಮಾನ ನಿಲ್ದಾಣ ರಸ್ತೆ – ಯಮಲೂರು ಜಂಕ್ಷನ್ – ಮಾರತ್ತಹಳ್ಳಿ ಬ್ರಿಡ್ಜ್ – ಕಾಡುಬೀಸನಹಳ್ಳಿ ಬ್ರಿಡ್ಜ್ – ಹೊರವರ್ತುಲ ರಸ್ತೆ ಮಾರ್ಗವಾಗಿ ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಗೆ ಸಂಚರಿಸಬಹುದಾಗಿದೆ.

ಯಮಲೂರು ಕಡೆಯಿಂದ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸುವವರು ಹಳೆ ವಿಮಾನ ನಿಲ್ದಾಣ ರಸ್ತೆ ಮಾರ್ಗವಾಗಿ ಯಮಲೂರು ಜಂಕ್ಷನ್ – ಯಮಲೂರು ವಿಲೇಜ್ ಮಾರ್ಗವಾಗಿ ಯಮಲೂರು ಕೋಡಿಯಲ್ಲಿ ಎಡ ತಿರುವು ಪಡೆದು ಕರಿಯಮ್ಮನ ಅಗ್ರಹಾರ ಮೂಲಕ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸಬಹುದಾಗಿದೆ.

ಇದನ್ನೂ ಓದಿ: ಪ್ರಯಾಣಿಕರಿಗೆ ಸಿಹಿ ಸುದ್ದಿ: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಡಿಜಿಟಲ್ ಲಾಕರ್ ಸೌಲಭ್ಯ

ಯಮಲೂರು ಕಡೆಯಿಂದ ಹೊರವರ್ತುಲ ರಸ್ತೆ ಕಡೆಗೆ ಸಂಚರಿಸುವವರು ಹಳೆ ವಿಮಾನ ನಿಲ್ದಾಣ ರಸ್ತೆ – ಯಮಲೂರು ಜಂಕ್ಷನ್ – ಯಮಲೂರು ವಿಲೇಜ್ ಮೂಲಕ ಯಮಲೂರು ಕೋಡಿ – ಬೆಳ್ಳಂದೂರು ಕೋಡಿ ಬಲ ತಿರುವು ಪಡೆದು ಬೆಳ್ಳಂದೂರು ವಿಲೇಜ್ ಮಾರ್ಗವಾಗಿ ಹೊರವರ್ತುಲ ರಸ್ತೆ ಕಡೆಗೆ ಸಂಚರಿಸಬಹುದಾಗಿದೆ.

ಟ್ವಿಟರ್​ ಪೋಸ್ಟ್​

ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಯಿಂದ ನಗರದ ಕಡೆಗೆ ಸಂಚರಿಸುವವರು ಹೊರವರ್ತುಲ ರಸ್ತೆ ಕಾಡುಬೀಸನಹಳ್ಳಿ ಬ್ರಿಡ್ಜ್ ಮಾರತ್ತಹಳ್ಳಿ ಬ್ರಿಡ್ಜ್ ಮೇಲೆ ಎಡ ತಿರುವು ಪಡೆದು ಯಮಲೂರು ಜಂಕ್ಷನ್ ಹಳೆ ವಿಮಾನ ನಿಲ್ದಾಣ ರಸ್ತೆ ಮೂಲಕ ನಗರದ ಕಡೆಗೆ ಸಂಚರಿಸಬಹುದಾಗಿದೆ.

ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಯಿಂದ ನಗರದ ಕಡೆಗೆ ಸಂಚರಿಸುವವರು ಕರಿಯಮ್ಮನ ಅಗ್ರಹಾರ – ಯಮಲೂರು ಕೋಡಿಯಲ್ಲಿ ಬಲ ತಿರುವು ಪಡೆದು ಯಮಲೂರು ವಿಲೇಜ್ ಮಾರ್ಗವಾಗಿ ಯಮಲೂರು ಜಂಕ್ಷನ್ ಹಳೆ ವಿಮಾನ ನಿಲ್ದಾಣ ರಸ್ತೆ ಮಾರ್ಗವಾಗಿ ನಗರದ ಕಡೆಗೆ ಸಂಚರಿಸಬಹುದಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Thu, 14 November 24

Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ