AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ ರಸ್ತೆಯಲ್ಲಿ 4 ದಿನ ಸಂಚಾರ ಬಂದ್​: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್ ​ಪೊಲೀಸ್​

ಬೆಂಗಳೂರಿನ ಫೀಲ್ಡ್​​ ಸಂಚಾರ ಪೊಲೀಸ್​ ಠಾಣಾ ವ್ಯಾಪ್ತಿಯ ಪಣತ್ತೂರು ರೈಲ್ವೇಬ್ರಿಡ್ಜ್​​ ಬಳಿ ರೈಲ್ವೆ ಇಲಾಖೆಯ ವತಿಯಿಂದ ಅಂಡರ್​ಪಾಸ್​ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ ಪಣತ್ತೂರು ದಿಣ್ಣೆಯಿಂದ ಪಣತ್ತೂರು ರೈಲ್ವೆ ಬ್ರಿಡ್ಜ್​​ವರೆಗಿನ ರಸ್ತೆಯಲ್ಲಿ ಸಂಚಾರ ಬಂದ್​ ಮಾಡಲಾಗಿದೆ.

ಬೆಂಗಳೂರಿನ ಈ ರಸ್ತೆಯಲ್ಲಿ 4 ದಿನ ಸಂಚಾರ ಬಂದ್​: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್ ​ಪೊಲೀಸ್​
ಬೆಂಗಳೂರು ಸಂಚಾರ ಸಲಹೆ
ವಿವೇಕ ಬಿರಾದಾರ
|

Updated on:Jul 09, 2024 | 8:08 AM

Share

ಬೆಂಗಳೂರು, ಜುಲೈ 09: ವೈಟ್​ ಫೀಲ್ಡ್​​ನ (White Field) ಪಣತ್ತೂರು ದಿಣ್ಣೆಯಿಂದ (Panathur Dinne) ಪಣತ್ತೂರು ರೈಲ್ವೆ ಬ್ರಿಡ್ಜ್ (Panathur Railway Bridge)​​ ವರೆಗಿನ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಾಲ್ಕು ದಿನಗಳ ಕಾಲ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್​ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ವೈಟ್​ ಫೀಲ್ಡ್​​ ಸಂಚಾರ ಪೊಲೀಸ್​ ಠಾಣಾ (Trafic Police) ವ್ಯಾಪ್ತಿಯ ಪಣತ್ತೂರು ರೈಲ್ವೇಬ್ರಿಡ್ಜ್​​ ಬಳಿ ರೈಲ್ವೆ ಇಲಾಖೆಯ ವತಿಯಿಂದ ಅಂಡರ್​ಪಾಸ್​ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ ಪಣತ್ತೂರು ದಿಣ್ಣೆಯಿಂದ ಪಣತ್ತೂರು ರೈಲ್ವೆ ಬ್ರಿಡ್ಜ್​​ವರೆಗಿನ ರಸ್ತೆಯಲ್ಲಿ ಸಂಚಾರವನ್ನು ಮಂಗಳವಾರ (ಜು.09) ಜುಲೈ 12 ವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗ ಇಲ್ಲಿದೆ.

ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ

ಪಣತ್ತೂರು ದಿಣ್ಣೆ ಕಡೆಯಿಂದ ಪಣತ್ತೂರು ಮತ್ತು ಕುಂದಲಹಳ್ಳಿ ಕಡೆಗೆ ಹೋಗುವ ವಾಹನ ಸವಾರರು ಗುಂಜೂರು ಪಾಳ್ಯ ರಸ್ತೆಯಿಂದ ಸಿಲ್ವರ್ ಓಕ್ ರಸ್ತೆ ಮುಖಾಂತರ ಬಳಗೆರೆ ಮುಖ್ಯರಸ್ತೆಯನ್ನು ಬಳಸಿ ಪಣತ್ತೂರು ಹಾಗೂ ಕುಂದಲಹಳ್ಳಿ, ಕಡೆಗೆ ಸಂಚರಿಸಬಹುದಾಗಿದೆ.

ಪಣತ್ತೂರು ಕಡೆಯಿಂದ ಪಣತ್ತೂರು ದಿಣ್ಣೆ ಕಡೆಗೆ ಹೋಗುವ ವಾಹನ ಸವಾರರು ಬಳಗೆರೆ ಮುಖ್ಯರಸ್ತೆಯಿಂದ ಸಿಲ್ವರ್ ಓಕ್ ಮುಖಾಂತರ ಗುಂಜೂರು ಪಾಳ್ಯ ರಸ್ತೆಯನ್ನು ಬಳಸಿ ಪಣತ್ತೂರು ದಿಣ್ಣೆ ಕಡೆಗೆ ಸಂಚರಿಸಬಹುದಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗದಲ್ಲಿನ ರಸ್ತೆಗಳು ಜಲಾವೃತ, ವಾಹನ ಸಂಚಾರಕ್ಕೆ ತೊಂದರೆ

ಸಂಚಾರ ಅಡಚಣೆ

ಸೋಮವಾರ ಸಾಯಂಕಾಲ ಬೆಂಗಳೂರು ಮಹಾನಗರದ ಹಲವೆಡೆ ಭಾರಿ ಮಳೆ ಸುರಿದಿದೆ. ಇದರಿಂದ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕಚೇರಿಯಿಂದ ಮನೆಗ ತೆರಳು ಉದ್ಯೋಗಿಗಳು ಪರದಾಡಿದರು. ಅನೇಕ ಕಡೆ ನಿಧಾನಗತಿಯ ವಾಹನ ಸಾಂಚಾರ ಇದ್ದರೆ, ಕೆಲವು ಅಂಡರ್​ ಪಾಸ್​ಗಳನ್ನು ಮುಚ್ಚಲಾಗಿತ್ತು.

ಹೆಣ್ಣೂರಿನಿಂದ ಬಾಗಲೂರು ರೈಲ್ವೇ ಅಂಡರ್​ಪಾಸ್​ನಲ್ಲಿ ನೀರು ನಿಂತಿದ್ದರಿಂದ ಸವಾರರು ನಿಧಾನಗತಿಯಲ್ಲಿ ಸಂಚರಿಸುವಂತೆ ಆಗಿತ್ತು. ನೆಲಮಂಗಲ ಸಂಚಾರ ಠಾಣೆ ಸರಹದ್ದಿನ ಚಿಕ್ಕಬಿದರಕಲ್ಲು ಜಿಂದಾಲ್​​ ಅಂಡರ್​ ಪಾಸ್​ ಬಳಿ ಸರ್ವಿಸ್​ ರಸ್ತೆ ಹದಗಟ್ಟಿದ್ದರಿಂದ ಪಾರ್ಲೆ ಜಿ ಟೋಲ್​ ಕಡೆಯಿಂದ ನೆಲಮಂಗಲದ ಕಡೆಗೆ ವಾಹನಗಳು ನಿಧಾನವಾಗಿ ಚಲಿಸಿದ್ದವು. ಕಲೆವೆ ಹೊತ್ತಿನಲ್ಲಿ ಸಂಚಾರಿ ಪೊಲೀಸರು ಅಗತ್ಯ ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:08 am, Tue, 9 July 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ