AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Traffic Advisory: ಬೆಂಗಳೂರಿನ ಅನೇಕ ರಸ್ತೆಗಳಲ್ಲಿ ಇಂದೂ ಸಂಚಾರಕ್ಕೆ ಅಡಚಣೆ, ಇಲ್ಲಿದೆ ಮಾಹಿತಿ

ಬೆಂಗಳೂರು ಸಂಚಾರ ಸಲಹೆ: ಬೆಂಗಳೂರಿನಲ್ಲಿ ಬುಧವಾರ ಮುಂಜಾನೆ ಮಳೆ ನಿಂತಿದೆ. ಆದಾಗ್ಯೂ ಮಂಗಳವಾರ ಇಡೀ ದಿನ ಸುರಿದ ಮಳೆಗೆ ಅಲ್ಲಲ್ಲಿ ಮರಗಳು ಬಿದ್ದಿದ್ದು ಹಾಗೂ ಕೆಲವು ರಸ್ತೆಗಳಲ್ಲಿ ಅವ್ಯವಸ್ಥೆ ಸೃಷ್ಟಿಯಾದ ಕಾರಣ ಸಂಚಾರಕ್ಕೆ ಅಡಚಣೆ ಮುಂದುವರಿದಿದೆ. ನಗರದ ಯಾವೆಲ್ಲ ರಸ್ತೆಗಳಲ್ಲಿ ನಿಧಾನಗತಿಯ ಸಂಚಾರ ಅಥವಾ ಸಂಚಾರಕ್ಕೆ ಅಡಚಣೆ ಇದೆ ಎಂಬ ಮಾಹಿತಿ ಇಲ್ಲಿದೆ.

Bengaluru Traffic Advisory: ಬೆಂಗಳೂರಿನ ಅನೇಕ ರಸ್ತೆಗಳಲ್ಲಿ ಇಂದೂ ಸಂಚಾರಕ್ಕೆ ಅಡಚಣೆ, ಇಲ್ಲಿದೆ ಮಾಹಿತಿ
ಟೋಲ್​ಗೇಟ್ ಎಂಸಿ ಸರ್ಕಲ್ ಹತ್ತಿರ ಮರ ಬಿದ್ದಿರುವುದು
ಗಣಪತಿ ಶರ್ಮಾ
|

Updated on: May 21, 2025 | 7:26 AM

Share

ಬೆಂಗಳೂರು, ಮೇ 21: ಎರಡ್ಮೂರು ದಿನಗಳಿಂದ ಬೆಂಗಳೂರಿನದಾದ್ಯಂತ ಸುರಿದ ಭಾರಿ ಮಳೆ (Bengaluru Rains) ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಅನೇಕ ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡ್ಡಿಯಾಗಿದ್ದರೆ, ಇನ್ನು ಅನೇಕ ರಸ್ತೆಗಳಲ್ಲಿ ಮರಗಳು ಬಿದ್ದ ಪರಿಣಾಮ ಸಂಚಾರಕ್ಕೆ ಸಮಸ್ಯೆಯಾಗಿದೆ. ಬಿಬಿಎಂಪಿ (BBMP) ಹಾಗೂ ಬೆಂಗಳೂರು ಸಂಚಾರ ಪೊಲೀಸರು ತ್ವರಿತಗತಿಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದರೂ ಅನೇಕ ರಸ್ತೆಗಳಲ್ಲಿ ಬುಧವಾರ ಮುಂಜಾನೆಯೂ ನಿಧಾನಗತಿಯ ಸಂಚಾರ ಮುಂದುವರಿದಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಎಕ್ಸ್​ ತಾಣದಲ್ಲಿ ಸಂದೇಶಗಳನ್ನು ಪ್ರಕಟಿಸುವ ಮೂಲಕ ಮಾಹಿತಿ (Bengaluru Traffic Advisory) ನೀಡಿದ್ದಾರೆ.

ನಮನ ಜಕ್ಷನ್‌ ಹತ್ತಿರ ಮರಬಿದ್ದಿರುವುದರಿಂದ ಕೋಡಿಚಿಕ್ಕನಹಳ್ಳಿ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ಟೋಲ್ ಗೇಟ್ ಎಂಸಿ ಸರ್ಕಲ್ ಹತ್ತಿರ ಮರಬಿದ್ದಿರುವುದರಿಂದ ಚೋಳರಪಾಳ್ಯ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ
Image
ನಿರಂತರ ಮಳೆಗೆ ಹೈರಾಣದ ಬೆಂಗಳೂರು ಜನ: ವ್ಯಾಪಾರ ವಹಿವಾಟು ಭಾರಿ ಕುಸಿತ
Image
ಮಳೆ ಅವಾಂತರರಿಂದ ಎಚ್ಚೆತ್ತ ಬಿಬಿಎಂಪಿ, ವೈಜ್ಞಾನಿಕ ಕ್ರಮಕ್ಕೆ ಪ್ಲ್ಯಾನ್​
Image
ಭಾರಿ ಮಳೆಗೆ ಕರ್ನಾಟಕದಲ್ಲಿ 4 ಸಾವು, ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆ
Image
ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್

ಬಾಳೇಕುಂದ್ರಿ ಜಕ್ಷನ್‌ ರಸ್ತೆ ತಾತ್ಕಾಲಿಕ ಬಂದ್

ಬಾಳೇಕುಂದ್ರಿ ಜಕ್ಷನ್‌ ಹತ್ತಿರ ಮರ ಬಿದ್ದಿರುವುದರಿಂದ ಚಂದ್ರಿಕಾ ಹೊಟೇಲ್ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ಈ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸಲು ಸೂಚಿಸಲಾಗಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಟ್ರಾಫಿಕ್ ಪೊಲೀಸ್ ಟ್ವೀಟ್

ರಸ್ತೆ ಹದಗೆಟ್ಟಿರುವ ಕಾರಣ ಹಗದೂರು ಜಂಕ್ಷನ್‌ನಿಂದ ಹಗದೂರು ಗ್ರಾಮದ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಟ್ರಾಫಿಕ್ ಪೊಲೀಸರು ಮಂಗಳವಾರ ರಾತ್ರಿ ತಿಳಿಸಿದ್ದರು. ಈ ರಸ್ತೆಯಲ್ಲಿ ಬುಧವಾರವೂ ಇಡೀ ದಿನ ನಿಧಾನಗತಿಯ ಸಂಚಾರ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಇನ್ಮುಂದೆ ಮನೆ ಕಟ್ಟಬೇಕಾದ್ರೆ ಬೇಸ್​ಮೆಂಟ್ ಮಾಡಬಾರದು: ಈ ಬಗ್ಗೆ ಪ್ರತ್ಯೇಕ ಕಾನೂನು ತರುತ್ತೇವೆ ಎಂದ ಡಿಕೆಶಿ

ಇಷ್ಟೇ ಅಲ್ಲದೆ, ಬೆಂಗಳೂರಿನ ಇನ್ನೂ ಅನೇಕ ರಸ್ತೆಗಳಲ್ಲಿ ಹೊಂಡ-ಗುಂಡಿ ಸಮಸ್ಯೆ, ಮರಬಿದ್ದಿರುವುದು ಮತ್ತು ಇತರ ಕಾರಣಗಳಿಂದ ಇಂದೂ ಸಹ ಸಂಚಾರಕ್ಕೆ ಅಡಚಣೆ ಅಥವಾ ನಿಧಾನಗತಿಯ ಸಂಚಾರದ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ