AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Traffic advisory: ಬೆಂಗಳೂರಿನ ಈ ರಸ್ತೆಯಲ್ಲಿ 2 ದಿನ ವಾಹನ ಸಂಚಾರ ನಿಷೇಧ

Bengaluru traffic advisory: ಬೆಂಗಳೂರಿನ ದೊಡ್ಡಗುಂಟ ದಸರಾ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪಾಟರಿ ಮತ್ತು ಅಸ್ಸೆ ರಸ್ತೆಯಲ್ಲಿ ಎರಡು ದಿನ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಹಾಗೇ ವಾಹನ ಪಾರ್ಕಿಂಗ್​​ ನಿಷೇಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

Traffic advisory: ಬೆಂಗಳೂರಿನ ಈ ರಸ್ತೆಯಲ್ಲಿ 2 ದಿನ ವಾಹನ ಸಂಚಾರ ನಿಷೇಧ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Oct 19, 2024 | 9:18 AM

ಬೆಂಗಳೂರು, ಅಕ್ಟೋಬರ್​ 19: ಬೆಂಗಳೂರು (Bengaluru) ನಗರದ ಈ ರಸ್ತೆಯಲ್ಲಿ ಎರಡು ದಿನ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಶನಿವಾರ ಮತ್ತು ರವಿವಾರ ರಂದು ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೊಡ್ಡಗುಂಟ ದಸರಾ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಇಂದು (ಅ.19) ಬೆಳಗ್ಗೆ 9 ಗಂಟೆಯಿಂದ ನಾಳೆ (ಅ.20) ರಾತ್ರಿ 11 ಗಂಟೆವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ವಾಹನ ಸಂಚಾರ ನಿರ್ಬಂಧ:

  1. ಪಾಟರಿ ರಸ್ತೆ – ಎಂ.ಎಂ ರಸ್ತೆ ಜಂಕ್ಷನ್‌ನಿಂದ ಎಂ.ಎಂ ರಸ್ತೆ ಮೂಲಕ ದೊಡ್ಡಗುಂಟಿ ಸರ್ಕಲ್ ಮತ್ತು ಅಸ್ಸೆ ರಸ್ತೆ ಜಂಕ್ಷನ್‌ವರೆಗೆ ಎರಡೂ ಬದಿಯ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
  2. ಅಸ್ಸೆ ರಸ್ತೆ – ಸುಂದರಮೂರ್ತಿ ರಸ್ತೆ ಜಂಕ್ಷನ್‌ನಿಂದ ತಂಬುಚೆಟ್ಟಿ ರಸ್ತೆ ಮೂಲಕ ಎಂ.ಎಂ ರಸ್ತೆ ಪಾಟರಿ ರಸ್ತೆ ಜಂಕ್ಷನ್​ವರೆಗೆ ಎರಡೂ ಬದಿಯ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
  3. ರಾಮಕೃಷ್ಣಪ್ಪ ರಸ್ತೆ – ಪಿ.ಎಸ್.ಕೆ ನಾಯ್ಡು ರಸ್ತೆ ಜಂಕ್ಷನ್​ನಿಂದ ರಾಮಕೃಷ್ಣಪ್ಪ ರಸ್ತೆ ಸುಂದರಮೂರ್ತಿ ರಸ್ತೆ ಮೂಲಕ ಅಸ್ಸೆ ರಸ್ತೆ ಜಂಕ್ಷನ್​ಕಡೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ

  1. ಪಾಟರಿ ರಸ್ತೆ – ಎಂ.ಎಂ ರಸ್ತೆ ಜಂಕ್ಷನ್‌ನಿಂದ ಎಂ.ಎಂ ರಸ್ತೆ ಮೂಲಕ ದೊಡ್ಡಗುಂಟ ಸರ್ಕಲ್ ಮತ್ತು ಅಸ್ಸೆ ರಸ್ತೆ ಕಡೆಗೆ ಹೋಗುವ ಎಲ್ಲ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಲಾಜರ್ ರಸ್ತೆ ಮುಖಾಂತರ ಬುದ್ಧ ವಿಹಾರ ರಸ್ತೆ ತಲುಪಿ ನಂತರ ಸಿಂಧಿ ಕಾಲೋನಿ ಜಂಕ್ಷನ್ ಮುಖಾಂತರ ಅಸ್ಸಯೇ ರಸ್ತೆ ಕಡೆಗೆ ಸಂಚರಿಸಬಹುದಾಗಿದೆ.
  2. ಅಸ್ಸೆ ರಸ್ತೆ – ಸುಂದರಮೂರ್ತಿ ರಸ್ತೆ ಜಂಕ್ಷನ್‌ನಿಂದ ತಂಬುಚೆಟ್ಟಿ ರಸ್ತೆ – ಎಂ.ಎಂ ರಸ್ತೆ ಕಡೆಗೆ ಹೋಗುವ ಎಲ್ಲ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಲಾಗಿದೆ. ಅಸ್ಸೆ ರಸ್ತೆ ಮೂಲಕ ಸಿಂಧಿ ಕಾಲೋನಿ ಜಂಕ್ಷನ್ ತಲುಪಿ ನಂತರ ಬುದ್ಧವಿಹಾರ ರಸ್ತೆ ಕೆಂಚಪ್ಪ ರಸ್ತೆ ಮೂಲಕ ಎಂ.ಎಂ ರಸ್ತೆ ಕಡೆಗೆ ಹೋಗಬಹುದಾಗಿದೆ.
  3. ರಾಮಕೃಷ್ಣಪ್ಪ ರಸ್ತೆ – ಪಿ.ಎಸ್.ಕೆ ನಾಯ್ಡು ರಸ್ತೆ ಜಂಕ್ಷನ್‌ನಿಂದ ರಾಮಕೃಷ್ಣಪ್ಪ ರಸ್ತೆ – ಸುಂದರಮೂರ್ತಿ ರಸ್ತೆ ಮೂಲಕ ಅಸ್ಸೆ ರಸ್ತೆ ಜಂಕ್ಷನ್ ಕಡೆಗೆ ಹೋಗುವ ಎಲ್ಲ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ವಾಹನ ಸವಾರರು ಪಿ.ಎಸ್.ಕೆ ನಾಯ್ಡು ರಸ್ತೆಯಲ್ಲಿ ನೇರವಾಗಿ ಸಾಗಿ ಅಸ್ಸಯೇ ರಸ್ತೆ ಎಡ ತಿರುವು ಪಡೆದು ನಂತರ ಸದರಿ ರಸ್ತೆಯಲ್ಲಿ ಎಂ.ಇ.ಜಿ ಗೇಟ್ ಬಳಿ ಯೂ ಟರ್ನ್ ಪಡೆದು ಅಸ್ಸಯೇ ರಸ್ತೆ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿದೆ.

ಪಾರ್ಕಿಂಗ್ ನಿಷೇಧ

ಈ ಎರಡೂ ದಿನ ಎಂಎಂ ರಸ್ತೆ, ದೊಡ್ಡಗುಂಟ ಸರ್ಕಲ್​, ಸುಂದರಮೂರ್ತಿ ರಸ್ತೆ, ವೆಬ್‌ಸ್ಟರ್ ರಸ್ತೆ, ರಾಮಕೃಷ್ಣಪ್ಪ ರಸ್ತೆ, ಚಾರ್ಲ್ಸ್ ಕ್ಯಾಂಬೆಲ್ ರಸ್ತೆ, ಪಿ.ಎಸ್.ಕೆ ನಾಯ್ಡು ರಸ್ತೆ ಹಾಗೂ ತಂಬುಚೆಟ್ಟಿ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಪಾರ್ಕಿಂಗ್​ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:14 am, Sat, 19 October 24

ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ