AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಳ್ಳಂದೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ 1 ಗಂಟೆ 45 ನಿಮಿಷ’, ಇದು ಬೆಂಗಳೂರು ಟ್ರಾಫಿಕ್ ಕಥೆ ಎಂದ ​ಮೋಹನ್‌ದಾಸ್ ಪೈ

ಬೆಂಗಳೂರಿನಲ್ಲಿ ಟ್ರಾಫಿಕ್​​​ ವಿಚಾರವಾಗಿ ಹಲವು ಪೋಸ್ಟ್​​​​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತ ಇರುತ್ತದೆ. ಇದೀಗ ಟಿವಿ ಮೋಹನ್‌ದಾಸ್ ಪೈ ಅವರು ಟ್ರಾಫಿಕ್ ವಿಚಾರವಾಗಿ ತಮ್ಮ ಎಕ್ಸ್​​ ಖಾತೆಯನ್ನು ಹೇಳಿಕೊಂಡಿದ್ದಾರೆ. ಬೆಳ್ಳಂದೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣ ಮಾಡಲು 1 ಗಂಟೆ 45 ನಿಮಿಷಗಳನ್ನು ತೆಗೆದುಕೊಂಡಿದೆ. ಇದು ಹುಚ್ಚುತನ ಅಲ್ಲವೇ, ಇದರ ಜತೆಗೆ ರಸ್ತೆಗಳೆಲ್ಲವೂ ಅಗೆದು ಹೊಂಡಗಳಿಂದ ತುಂಬಿವೆ ಎಂದು ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ.

'ಬೆಳ್ಳಂದೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ 1 ಗಂಟೆ 45 ನಿಮಿಷ', ಇದು ಬೆಂಗಳೂರು ಟ್ರಾಫಿಕ್ ಕಥೆ ಎಂದ ​ಮೋಹನ್‌ದಾಸ್ ಪೈ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Oct 13, 2025 | 3:40 PM

Share

ಬೆಂಗಳೂರು, ಅ.13: ಬೆಂಗಳೂರಿನ ಟ್ರಾಫಿಕ್​​ (Bengaluru traffic) ಬಗ್ಗೆ ಒಂದಲ್ಲ ಒಂದು ಪೋಸ್ಟ್​​​ಗಳು ವೈರಲ್​​ ಆಗುತ್ತಾ ಇರುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಟ್ರಾಫಿಕ್ ಬಗ್ಗೆ ಪ್ರತಿದಿನ ಚರ್ಚೆಗೆ ಬಂದೇ ಬರುತ್ತದೆ. ಟ್ರಾಪಿಕ್​​​​ ಬಗ್ಗೆ ಸಾಮಾನ್ಯ ಜನರು ಮಾತನಾಡುವುದು, ಹೇಳಿಕೊಳ್ಳುವುದು ಸಹಜ, ಆದರೆ ಒಬ್ಬ ಉದ್ಯಮಿ ಟ್ರಾಫಿಕ್​ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಖ್ಯಾತ ಉದ್ಯಮಿ ಹಾಗೂ ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಟಿವಿ ಮೋಹನ್‌ದಾಸ್ ಪೈ ಬೆಂಗಳೂರು ಟ್ರಾಫಿಕ್​​ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಬೆಳ್ಳಂದೂರಿನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ದಲ್ಲಿ, 50 ಕಿಲೋಮೀಟರ್ ಹೊರ ವರ್ತುಲ ರಸ್ತೆ (ಒಆರ್‌ಆರ್)ಯಲ್ಲಿ ಬೆಂಗಳೂರಿನ ಪ್ರಯಾಣಿಕರು 1 ಗಂಟೆ 45 ನಿಮಿಷಗಳ ಪ್ರಯಾಣ ಸಮಯವನ್ನು ಸಹಿಸಿಕೊಳ್ಳುತ್ತಿದ್ದಾರೆ. ಗುಂಡಿಗಳಿಂದ ಕೂಡಿದ ರಸ್ತೆಗಳು, ನಡೆಯುತ್ತಿರುವ ನಮ್ಮ ಮೆಟ್ರೋ ನಿರ್ಮಾಣ ಮತ್ತು ನಿರಂತರ ಸಂಚಾರ ದಟ್ಟಣೆಯಿಂದಾಗಿ ಜನರಲ್ಲಿ ತಾಳ್ಮೆ ಎಂಬುದು ಉಳಿದುಕೊಳ್ಳಲು ಸಾಧ್ಯವೇ.

ಬೆಳ್ಳಂದೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣ ಮಾಡಲು 1 ಗಂಟೆ 45 ನಿಮಿಷಗಳನ್ನು ತೆಗೆದುಕೊಂಡಿದೆ. ಇದು ಹುಚ್ಚುತನ ಅಲ್ಲವೇ, ಇದರ ಜತೆಗೆ ರಸ್ತೆಗಳೆಲ್ಲವೂ ಅಗೆದು ಹೊಂಡಗಳಿಂದ ತುಂಬಿವೆ. ಬೆಂಗಳೂರಿನಲ್ಲಿ ಭಾರತದ ಅತ್ಯಂತ ಕೆಟ್ಟ ರಸ್ತೆಗಳಿವೆ ಎಂದು ಅನ್ನಿಸುತ್ತದೆ ಎಂದು ಮೋಹನ್‌ದಾಸ್ ಪೈ ಹೇಳಿದ್ದಾರೆ. ಇದು ಮುಂದಿನ 10 ವರ್ಷಗಳಲ್ಲಿ ಪ್ರಯಾಣಿಕರಿಗೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ಸೃಷ್ಟಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್​ 130 ಸಾವಿರ ವೀಕ್ಷಣೆಗಳು ಮತ್ತು 2,700 ಲೈಕ್‌ಗಳನ್ನು ಗಳಿಸಿದೆ. ಇನ್ನು ಈ ಪೋಸ್ಟ್​​​ಗೆ ನರೇಶ್​​​ ಎಂಬುವವರು @TopDriverIndia ಖಾತೆಯಿಂದ ರೀಪೋಸ್ಟ್​​ ಮಾಡಲಾಗಿದೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಈ ಪೋಸ್ಟ್​​ನಲ್ಲಿ “ಬೆಂಗಳೂರು ಹುಡುಗರೇ. ನಾನು ನಿಮ್ಮ ನಗರವನ್ನು ಪ್ರೀತಿಸುತ್ತೇನೆ, 70 ರ ದಶಕದಿಂದಲೂ ಇಲ್ಲಿಗೆ ಭೇಟಿ ನೀಡುತ್ತಿದ್ದೇನೆ. ನೀವು ನಿಜವಾಗಿಯೂ ನಿಮ್ಮ ರಸ್ತೆಗಳು ಮತ್ತು ಪ್ರಯಾಣದ ಸಮಯದ ಬಗ್ಗೆ ಏನಾದರೂ ಯೋಚನೆ ಮಾಡಬೇಕಾಗಿದೆ. ಹೈದರಾಬಾದ್‌ನಲ್ಲಿ ಈಗ ಪ್ರಯಾಣದ ಸಮಯವನ್ನು ನೋಡಿ 1 ಗಂಟೆ, ನಗರದ ಹೃದಯಭಾಗಕ್ಕೆ 40 ಕಿ.ಮೀ.. ಎಂದು ಹೇಳಿದ್ದಾರೆ. ಈ ಪೋಸ್ಟ್ ಬೆಂಗಳೂರಿನ ಟ್ರಾಫಿಕ್ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿದೆ. ಇನ್ನು ಟಿವಿ ಮೋಹನ್‌ದಾಸ್ ಪೈ ಅವರು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವರಿ ಸಚಿವರಾಗಿರುವ ಡಿಕೆ ಶಿವಕುಮಾರ್ ಅವರನ್ನು ಹಾಗೂ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಟ್ಯಾಗ್​​ ಮಾಡಿ ಇದು ಬೆಳವಣಿಗೆಯ ಪರಿಣಾಮವಲ್ಲ, ಆದರೆ ಭಾರಿ ಭ್ರಷ್ಟಾಚಾರ ಮತ್ತು ಕೆಟ್ಟ ಆಡಳಿತದ ಪರಿಣಾಮವಾಗಿದೆ. ದಯವಿಟ್ಟು @GBA_office @GBAChiefComm ಗೆ ಸಹಾಯ ಮಾಡಿ, ಗುಂಡಿಗಳಿಲ್ಲದೆ ನಾವು ರಸ್ತೆಗಳನ್ನು ಹೊಂದಲು ಸಾಧ್ಯವಿಲ್ಲವೇ? ಇದು AI ಕೆಲಸವಲ್ಲ ಎಂದು ಖಡಕ್​​ ಆಗಿ ಹೇಳಿದ್ದಾರೆ.

ಇದನ್ನೂ ಓದಿ: 4 ವರ್ಷಗಳ ಕಾಲ ಖಿನ್ನತೆಗೆ ಒಳಗಾಗಿದ್ದ ಬೆಂಗಳೂರು ಮೂಲದ ವ್ಯಕ್ತಿ, ಅದರಿಂದ ಹೊರಬಂದದ್ದು ಹೇಗೆ ಗೊತ್ತಾ?

ಅನೇಕ ಬೆಂಗಳೂರಿನ ನಿವಾಸಿಗಳು ವಿಮಾನ ನಿಲ್ದಾಣವನ್ನು ತಲುಪಲು 1 ಗಂಟೆ 45 ನಿಮಿಷಗಳು ವಾಸ್ತವವಾಗಿ ಸಮಂಜಸವಾದ ಸಮಯ ಮತ್ತು ಇದರ ಬಗ್ಗೆ ಅವರಿಗೆ ಅನುಭವವಿದೆ. ರಸ್ತೆಗಳನ್ನು ಅಗೆದು ಹಾಕದಿದ್ದರೂ ಮತ್ತು ರಸ್ತೆಗಳು ಖಾಲಿಯಾಗಿದ್ದಾಗಲೂ ಸಹ, ಬೆಳ್ಳಂದೂರಿನಿಂದ ವಿಮಾನ ನಿಲ್ದಾಣವನ್ನು ತಲುಪಲು 55 ನಿಮಿಷಗಳನ್ನು ತೆಗೆದುಕೊಳ್ಳುತ್ತಿತ್ತು. ಮುಂದಿನ ದಿನಗಳಲ್ಲಿ ಮೆಟ್ರೋ ಮಾರ್ಗ ಬರುತ್ತದೆ ಎಂದು ಕಮೆಂಟ್​​ ಮಾಡಿದ್ದಾರೆ. ವಾವ್… ನೀವು 1.45 ಗಂಟೆಗಳಲ್ಲಿ ಇದನ್ನು ಮಾಡಿದ್ದೀರಿ, ಅದೃಷ್ಟವಂತರು… ಕನಿಷ್ಠ 2.5 ಗಂಟೆಗಳಾದರೂ ಆಗಬೇಕಿತ್ತು ಎಂದು ಮತ್ತೊಬ್ಬ ವ್ಯಕ್ತಿ ಕಮೆಂಟ್ ಮಾಡಿದ್ದಾರೆ.

ಬೆಂಗಳೂರು​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ