‘ಬೆಳ್ಳಂದೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ 1 ಗಂಟೆ 45 ನಿಮಿಷ’, ಇದು ಬೆಂಗಳೂರು ಟ್ರಾಫಿಕ್ ಕಥೆ ಎಂದ ​ಮೋಹನ್‌ದಾಸ್ ಪೈ

ಬೆಂಗಳೂರಿನಲ್ಲಿ ಟ್ರಾಫಿಕ್​​​ ವಿಚಾರವಾಗಿ ಹಲವು ಪೋಸ್ಟ್​​​​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತ ಇರುತ್ತದೆ. ಇದೀಗ ಟಿವಿ ಮೋಹನ್‌ದಾಸ್ ಪೈ ಅವರು ಟ್ರಾಫಿಕ್ ವಿಚಾರವಾಗಿ ತಮ್ಮ ಎಕ್ಸ್​​ ಖಾತೆಯನ್ನು ಹೇಳಿಕೊಂಡಿದ್ದಾರೆ. ಬೆಳ್ಳಂದೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣ ಮಾಡಲು 1 ಗಂಟೆ 45 ನಿಮಿಷಗಳನ್ನು ತೆಗೆದುಕೊಂಡಿದೆ. ಇದು ಹುಚ್ಚುತನ ಅಲ್ಲವೇ, ಇದರ ಜತೆಗೆ ರಸ್ತೆಗಳೆಲ್ಲವೂ ಅಗೆದು ಹೊಂಡಗಳಿಂದ ತುಂಬಿವೆ ಎಂದು ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ.

ಬೆಳ್ಳಂದೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ 1 ಗಂಟೆ 45 ನಿಮಿಷ, ಇದು ಬೆಂಗಳೂರು ಟ್ರಾಫಿಕ್ ಕಥೆ ಎಂದ ​ಮೋಹನ್‌ದಾಸ್ ಪೈ
ಸಾಂದರ್ಭಿಕ ಚಿತ್ರ

Updated on: Oct 13, 2025 | 3:40 PM

ಬೆಂಗಳೂರು, ಅ.13: ಬೆಂಗಳೂರಿನ ಟ್ರಾಫಿಕ್​​ (Bengaluru traffic) ಬಗ್ಗೆ ಒಂದಲ್ಲ ಒಂದು ಪೋಸ್ಟ್​​​ಗಳು ವೈರಲ್​​ ಆಗುತ್ತಾ ಇರುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಟ್ರಾಫಿಕ್ ಬಗ್ಗೆ ಪ್ರತಿದಿನ ಚರ್ಚೆಗೆ ಬಂದೇ ಬರುತ್ತದೆ. ಟ್ರಾಪಿಕ್​​​​ ಬಗ್ಗೆ ಸಾಮಾನ್ಯ ಜನರು ಮಾತನಾಡುವುದು, ಹೇಳಿಕೊಳ್ಳುವುದು ಸಹಜ, ಆದರೆ ಒಬ್ಬ ಉದ್ಯಮಿ ಟ್ರಾಫಿಕ್​ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಖ್ಯಾತ ಉದ್ಯಮಿ ಹಾಗೂ ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಟಿವಿ ಮೋಹನ್‌ದಾಸ್ ಪೈ ಬೆಂಗಳೂರು ಟ್ರಾಫಿಕ್​​ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಬೆಳ್ಳಂದೂರಿನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ದಲ್ಲಿ, 50 ಕಿಲೋಮೀಟರ್ ಹೊರ ವರ್ತುಲ ರಸ್ತೆ (ಒಆರ್‌ಆರ್)ಯಲ್ಲಿ ಬೆಂಗಳೂರಿನ ಪ್ರಯಾಣಿಕರು 1 ಗಂಟೆ 45 ನಿಮಿಷಗಳ ಪ್ರಯಾಣ ಸಮಯವನ್ನು ಸಹಿಸಿಕೊಳ್ಳುತ್ತಿದ್ದಾರೆ. ಗುಂಡಿಗಳಿಂದ ಕೂಡಿದ ರಸ್ತೆಗಳು, ನಡೆಯುತ್ತಿರುವ ನಮ್ಮ ಮೆಟ್ರೋ ನಿರ್ಮಾಣ ಮತ್ತು ನಿರಂತರ ಸಂಚಾರ ದಟ್ಟಣೆಯಿಂದಾಗಿ ಜನರಲ್ಲಿ ತಾಳ್ಮೆ ಎಂಬುದು ಉಳಿದುಕೊಳ್ಳಲು ಸಾಧ್ಯವೇ.

ಬೆಳ್ಳಂದೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣ ಮಾಡಲು 1 ಗಂಟೆ 45 ನಿಮಿಷಗಳನ್ನು ತೆಗೆದುಕೊಂಡಿದೆ. ಇದು ಹುಚ್ಚುತನ ಅಲ್ಲವೇ, ಇದರ ಜತೆಗೆ ರಸ್ತೆಗಳೆಲ್ಲವೂ ಅಗೆದು ಹೊಂಡಗಳಿಂದ ತುಂಬಿವೆ. ಬೆಂಗಳೂರಿನಲ್ಲಿ ಭಾರತದ ಅತ್ಯಂತ ಕೆಟ್ಟ ರಸ್ತೆಗಳಿವೆ ಎಂದು ಅನ್ನಿಸುತ್ತದೆ ಎಂದು ಮೋಹನ್‌ದಾಸ್ ಪೈ ಹೇಳಿದ್ದಾರೆ. ಇದು ಮುಂದಿನ 10 ವರ್ಷಗಳಲ್ಲಿ ಪ್ರಯಾಣಿಕರಿಗೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ಸೃಷ್ಟಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್​ 130 ಸಾವಿರ ವೀಕ್ಷಣೆಗಳು ಮತ್ತು 2,700 ಲೈಕ್‌ಗಳನ್ನು ಗಳಿಸಿದೆ. ಇನ್ನು ಈ ಪೋಸ್ಟ್​​​ಗೆ ನರೇಶ್​​​ ಎಂಬುವವರು @TopDriverIndia ಖಾತೆಯಿಂದ ರೀಪೋಸ್ಟ್​​ ಮಾಡಲಾಗಿದೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಈ ಪೋಸ್ಟ್​​ನಲ್ಲಿ “ಬೆಂಗಳೂರು ಹುಡುಗರೇ. ನಾನು ನಿಮ್ಮ ನಗರವನ್ನು ಪ್ರೀತಿಸುತ್ತೇನೆ, 70 ರ ದಶಕದಿಂದಲೂ ಇಲ್ಲಿಗೆ ಭೇಟಿ ನೀಡುತ್ತಿದ್ದೇನೆ. ನೀವು ನಿಜವಾಗಿಯೂ ನಿಮ್ಮ ರಸ್ತೆಗಳು ಮತ್ತು ಪ್ರಯಾಣದ ಸಮಯದ ಬಗ್ಗೆ ಏನಾದರೂ ಯೋಚನೆ ಮಾಡಬೇಕಾಗಿದೆ. ಹೈದರಾಬಾದ್‌ನಲ್ಲಿ ಈಗ ಪ್ರಯಾಣದ ಸಮಯವನ್ನು ನೋಡಿ 1 ಗಂಟೆ, ನಗರದ ಹೃದಯಭಾಗಕ್ಕೆ 40 ಕಿ.ಮೀ.. ಎಂದು ಹೇಳಿದ್ದಾರೆ. ಈ ಪೋಸ್ಟ್ ಬೆಂಗಳೂರಿನ ಟ್ರಾಫಿಕ್ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿದೆ. ಇನ್ನು ಟಿವಿ ಮೋಹನ್‌ದಾಸ್ ಪೈ ಅವರು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವರಿ ಸಚಿವರಾಗಿರುವ ಡಿಕೆ ಶಿವಕುಮಾರ್ ಅವರನ್ನು ಹಾಗೂ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಟ್ಯಾಗ್​​ ಮಾಡಿ ಇದು ಬೆಳವಣಿಗೆಯ ಪರಿಣಾಮವಲ್ಲ, ಆದರೆ ಭಾರಿ ಭ್ರಷ್ಟಾಚಾರ ಮತ್ತು ಕೆಟ್ಟ ಆಡಳಿತದ ಪರಿಣಾಮವಾಗಿದೆ. ದಯವಿಟ್ಟು @GBA_office @GBAChiefComm ಗೆ ಸಹಾಯ ಮಾಡಿ, ಗುಂಡಿಗಳಿಲ್ಲದೆ ನಾವು ರಸ್ತೆಗಳನ್ನು ಹೊಂದಲು ಸಾಧ್ಯವಿಲ್ಲವೇ? ಇದು AI ಕೆಲಸವಲ್ಲ ಎಂದು ಖಡಕ್​​ ಆಗಿ ಹೇಳಿದ್ದಾರೆ.

ಇದನ್ನೂ ಓದಿ: 4 ವರ್ಷಗಳ ಕಾಲ ಖಿನ್ನತೆಗೆ ಒಳಗಾಗಿದ್ದ ಬೆಂಗಳೂರು ಮೂಲದ ವ್ಯಕ್ತಿ, ಅದರಿಂದ ಹೊರಬಂದದ್ದು ಹೇಗೆ ಗೊತ್ತಾ?

ಅನೇಕ ಬೆಂಗಳೂರಿನ ನಿವಾಸಿಗಳು ವಿಮಾನ ನಿಲ್ದಾಣವನ್ನು ತಲುಪಲು 1 ಗಂಟೆ 45 ನಿಮಿಷಗಳು ವಾಸ್ತವವಾಗಿ ಸಮಂಜಸವಾದ ಸಮಯ ಮತ್ತು ಇದರ ಬಗ್ಗೆ ಅವರಿಗೆ ಅನುಭವವಿದೆ. ರಸ್ತೆಗಳನ್ನು ಅಗೆದು ಹಾಕದಿದ್ದರೂ ಮತ್ತು ರಸ್ತೆಗಳು ಖಾಲಿಯಾಗಿದ್ದಾಗಲೂ ಸಹ, ಬೆಳ್ಳಂದೂರಿನಿಂದ ವಿಮಾನ ನಿಲ್ದಾಣವನ್ನು ತಲುಪಲು 55 ನಿಮಿಷಗಳನ್ನು ತೆಗೆದುಕೊಳ್ಳುತ್ತಿತ್ತು. ಮುಂದಿನ ದಿನಗಳಲ್ಲಿ ಮೆಟ್ರೋ ಮಾರ್ಗ ಬರುತ್ತದೆ ಎಂದು ಕಮೆಂಟ್​​ ಮಾಡಿದ್ದಾರೆ. ವಾವ್… ನೀವು 1.45 ಗಂಟೆಗಳಲ್ಲಿ ಇದನ್ನು ಮಾಡಿದ್ದೀರಿ, ಅದೃಷ್ಟವಂತರು… ಕನಿಷ್ಠ 2.5 ಗಂಟೆಗಳಾದರೂ ಆಗಬೇಕಿತ್ತು ಎಂದು ಮತ್ತೊಬ್ಬ ವ್ಯಕ್ತಿ ಕಮೆಂಟ್ ಮಾಡಿದ್ದಾರೆ.

ಬೆಂಗಳೂರು​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us