AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 700ಕ್ಕೂ ಹೆಚ್ಚು ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಿದ ಟ್ರಾಫಿಕ್ ಪೊಲೀಸ್

ಬೆಂಗಳೂರು ಸಂಚಾರ ಪೊಲೀಸರು ಡಿಸೆಂಬರ್ 21 ರಿಂದ ಡಿಸೆಂಬರ್ 30 ರವರೆಗೆ ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ ನಡೆಸಿದ 27,280 ಕ್ಕೂ ಹೆಚ್ಚು ವಾಹನ ಚಾಲಕರು ಮತ್ತು ದ್ವಿಚಕ್ರ ವಾಹನ ಚಾಲಕರ ತಪಾಸಣೆ ವೇಳೆ 717 ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರು: 700ಕ್ಕೂ ಹೆಚ್ಚು ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಿದ ಟ್ರಾಫಿಕ್ ಪೊಲೀಸ್
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Jan 01, 2024 | 10:34 AM

Share

ಬೆಂಗಳೂರು, ಜ.01: ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic Police) ನಗರದಾದ್ಯಂತ ಒಟ್ಟು 717 ಡ್ರಿಂಕ್ ಆ್ಯಂಡ್ ಡ್ರೈವ್ (Drink And Drive) ಪ್ರಕರಣಗಳನ್ನು ದಾಖಲಿಸಿದ್ದಾರೆ. ಡಿಸೆಂಬರ್ 21 ರಿಂದ, ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ ನಡೆದ ವಾಹನ ಚಾಲಕರು ಮತ್ತು ದ್ವಿಚಕ್ರ ವಾಹನ ಚಾಲಕರ ತಪಾಸಣೆ ವೇಳೆ 717 ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳು ಪತ್ತೆಯಾಗಿವೆ.

ಸಂಚಾರ ಪೊಲೀಸರು ಬೆಂಗಳೂರಿನ ನಾಲ್ಕು ವಿಭಾಗಗಳಲ್ಲಿ ತಪಾಸಣೆ ನಡೆಸಿದ್ದು ಡಿಸೆಂಬರ್ 30 ರವರೆಗೆ 27,280 ಕ್ಕೂ ಹೆಚ್ಚು ವಾಹನಗಳನ್ನು ಪರಿಶೀಲಿಸಿದ್ದಾರೆ. ಮತ್ತು ಹಲವೆಡೆ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿದ್ದು ಕಂಡು ಬಂದಿದೆ. 30mg/100ml ಕಾನೂನುಬದ್ಧ ರಕ್ತದ ಆಲ್ಕೋಹಾಲ್ ಸಾಂದ್ರತೆಯ (BAC) ಮಿತಿಯನ್ನು ಉಲ್ಲಂಘಿಸಿದ ಒಟ್ಟು 717 ಚಾಲಕರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರು ದಕ್ಷಿಣ ಭಾಗದ ಅಂಕಿಅಂಶ ಹೀಗಿದೆ

ದಕ್ಷಿಣ ವಿಭಾಗವೊಂದರಲ್ಲೇ ಡಿ.29ರವರೆಗೆ ಸಂಚಾರ ಪೊಲೀಸರು 4,381 ವಾಹನಗಳ ತಪಾಸಣೆ ನಡೆಸಿ 167 ಪಾನಮತ್ತ ಚಾಲಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಟ್ರಾಫಿಕ್ ಪೊಲೀಸ್ ಮಿತಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ದಾಖಲಾಗಿವೆ. ಕುಮಾರಸ್ವಾಮಿ ಲೇಔಟ್ ಟ್ರಾಫಿಕ್ ಪೊಲೀಸ್ ಮಿತಿಯಲ್ಲೇ 154 ವಾಹನಗಳನ್ನು ಪರಿಶೀಲಿಸಿದ್ದು 30 ಪ್ರಕರಣಗಳು ದಾಖಲಾಗಿವೆ . ತಲಘಟ್ಟಪುರ ಟ್ರಾಫಿಕ್ ಪೊಲೀಸ್ ಠಾಣೆ, ದಕ್ಷಿಣದ ಟ್ರಾಫಿಕ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಡಿಸೆಂಬರ್ 20 ಮತ್ತು 29 ರ ನಡುವೆ ಕೇವಲ 41 ವಾಹನಗಳನ್ನು ಪರಿಶೀಲಿಸಲಾಗಿದ್ದು, 18 ಪ್ರಕರಣಗಳನ್ನು ದಾಖಲಿಸಲಾಗಿದೆ. ಸುಮಾರು 44% ಚಾಲಕರು ಕಾನೂನು ಉಲ್ಲಂಘಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹೊಸ ವರ್ಷದ ಗಿಫ್ಟ್: ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ಕಂಡಕ್ಟರ್, ಮಹಿಳೆಯರ ನಡುವೆ ಜಟಾಪಟಿ

ಶಕ್ತಿ ಯೋಜನೆ ಎಫೆಕ್ಟ್​ನಿಂದ ಬಸ್​​ ಕಂಡಕ್ಟರ್​ಗಳು ಹಲವೆಡೆ ಪೀಕಲಾಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನಿಂದ ಟಿಕೆಟ್​ಪಡೆದಿದ್ದ ಮಹಿಳೆಯರು ಮಾರ್ಗಮಧ್ಯೆ ದಾಬಸ್ ಪೇಟೆಯಲ್ಲೇ ಇಳಿದಿದ್ರು. ಕೊರಟಗೆರೆಯ ಗೊರವನಹಳ್ಳಿ ಕ್ರಾಸ್ ಬಳಿಗೆ ಟಿಕೆಟ್ ಪಡೆದಿದ್ರು. ಅದ್ರೆ ಮಾರ್ಗ ಮಧ್ಯದಲ್ಲಿ ಮಗು ಆಳುತ್ತಿದೆ ಶೆಕೆ ಅಂತ ದಾಬಸ್ ಪೇಟೆಯಲ್ಲಿ ಇಳಿದಿದ್ರು. ಇದ್ರಿಂದ ಕಂಗಾಲಾದ ಕಂಡಕ್ಟರ್ ಮುಂದೆ ಚಕಿಂಗ್ ಬಂದ್ರೆ ನನ್ನ ಕೆಲಸಕ್ಕೆ ತೊಂದರೆ ಆಗುತ್ತೆ ಎಂದು ಹೇಳಿದ್ದಾರೆ. ಕಂಡಕ್ಟರ್ ಹಾಗೂ ಮಹಿಳೆಯರ ಹೈಡ್ರಾಮ ಸ್ಥಳೀಯ ಮೊಬೈಲ್ ಸೆರೆಯಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:00 am, Mon, 1 January 24

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು