AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಪ್ರಯಾಣಿಕರಿಗೆ ಕಹಿ ಸುದ್ದಿ: ಇನ್ನರ್ ರಿಂಗ್ ಮೆಟ್ರೋ ಯೋಜನೆ ಕೈಬಿಡಲು ಪ್ಲ್ಯಾನ್

ಬೆಂಗಳೂರು ಮೆಟ್ರೋ ನಗರದ ಸಂಚಾರ ದಟ್ಟಣೆಗೆ ಪ್ರಮುಖ ಪರಿಹಾರವಾಗಬೇಕಿದ್ದ ಇನ್ನರ್ ರಿಂಗ್ ಮೆಟ್ರೋ ಯೋಜನೆಯನ್ನು ಶಾಶ್ವತವಾಗಿ ಕೈಬಿಡಲು BMRCL ಮುಂದಾಗಿದೆ. ನಿತ್ಯ 2500 ವಾಹನ ನೋಂದಣಿಯಾಗಿ ಟ್ರಾಫಿಕ್ ಹೆಚ್ಚುತ್ತಿರುವಾಗ ಈ ಯೋಜನೆ ರದ್ದುಪಡಿಸಿರುವುದು ಪ್ರಯಾಣಿಕರ ಅಸಮಾಧಾನಕ್ಕೂ ಕಾರಣವಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಮೆಟ್ರೋ ಪ್ರಯಾಣಿಕರಿಗೆ ಕಹಿ ಸುದ್ದಿ: ಇನ್ನರ್ ರಿಂಗ್ ಮೆಟ್ರೋ ಯೋಜನೆ ಕೈಬಿಡಲು ಪ್ಲ್ಯಾನ್
ಪ್ರಾತಿನಿಧಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Nov 07, 2025 | 9:48 PM

Share

ಬೆಂಗಳೂರು, ನವೆಂಬರ್​ 07: ನಗರದಲ್ಲಿ ಪ್ರತಿದಿನ ಎರಡೂವರೆ ಸಾವಿರ ಹೊಸ ವಾಹನಗಳು ನೋಂದಣಿ ಆಗುತ್ತಿವೆ. ಹೀಗಾಗಿ ಪ್ರತಿದಿನ ಟ್ರಾಫಿಕ್ ಸಮಸ್ಯೆ (Traffic problem) ಹೆಚ್ಚಾಗುತ್ತಿದೆ. ಆದರೆ ಇದಕ್ಕೆ ಬ್ರೇಕ್ ಹಾಕಬೇಕಿದ್ದ ಪ್ರಮುಖ ಮೆಟ್ರೋ ಮಾರ್ಗವನ್ನು ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಶಾಶ್ವತವಾಗಿ ಕೈಬಿಡಲು ಮುಂದಾಗಿದೆ.

ನಗರದ ಎಲ್ಲಾ ಏರಿಯಾಗಳನ್ನು ಮತ್ತು ಎಲ್ಲಾ ಮೆಟ್ರೋ ಮಾರ್ಗಗಳನ್ನು ಸಂಪರ್ಕಿಸುವ ಏಕೈಕ ಮೆಟ್ರೋ ಮಾರ್ಗವಾಗಲಿದ್ದ, ಇನ್ನರ್ ರಿಂಗ್ ಮೆಟ್ರೋ ಯೋಜನೆಯನ್ನು ಶಾಶ್ವತವಾಗಿ ಕೈಬಿಡುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಇದು ಮೆಟ್ರೋ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕಿತ್ತಳೆ ಮಾರ್ಗಕ್ಕಾಗಿ ಸಾವಿರಾರು ಮರಗಳ ಮಾರಣಹೋಮಕ್ಕೆ ಮುಂದಾದ BMRCL: ಸಿಡಿದೆದ್ದ ಪರಿಸರ ಪ್ರೇಮಿಗಳು

ಮಹಾಲಕ್ಷ್ಮೀ ಲೇಔಟ್ ಮೆಟ್ರೋ ಸ್ಟೇಷನ್​​ನಿಂದ ಕುವೆಂಪು ರಸ್ತೆ ಮೆಟ್ರೋ ಸ್ಟೇಷನ್​​ವರೆಗೆ ಈ ಇನ್ನರ್ ರಿಂಗ್ ಮೆಟ್ರೋ ಮಾರ್ಗವನ್ನು ನಿರ್ಮಾಣ ಮಾಡಲು ತಜ್ಞರು ವರದಿ ಸಿದ್ದಪಡಿಸಿದ್ದರು. ಐಐಎಸ್​​ಸಿ ಪ್ರೊ. ಆಶಿಷ್ ವರ್ಮ ನೇತೃತ್ವದಲ್ಲಿ ನಗರದೊಳಗೆ ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಹಾಕಲು ಸಿದ್ದಪಡಿಸಿದ್ದ ಸಂಪೂರ್ಣ ಅಂಡರ್ ಗ್ರೌಂಡ್ ಮೆಟ್ರೋ ಯೋಜನೆ ಇದು. ಇನ್ನರ್ ರಿಂಗ್ ಮೆಟ್ರೋವನ್ನು ಹಂತ- 3 ರಿಂದ ಸದ್ಯ ಕೈ ಬಿಡಲಾಗಿದೆಯಂತೆ. ಇದರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಬೀಳಲಿದೆ ಎಂದು ಇಂಜಿನಿಯರ್ ಲೋಹೀತ್ ಕುಮಾರ್ ಹೇಳುತ್ತಾರೆ.

ಈ ಇನ್ನರ್ ರಿಂಗ್ ಮಾರ್ಗವು 34 ಕಿಮೀ, 24 ಮೆಟ್ರೋ ಸ್ಟೇಷನ್, 6 ಇಂಟರ್ ಚೇಂಜ್ ಮೆಟ್ರೋ ಸ್ಟೇಷನ್ ಮಾಡಲು ಪ್ಲ್ಯಾನ್ ಮಾಡಲಾಗಿತ್ತು. ರಾಜ್ಯ ಸರ್ಕಾರ ನಗರದೊಳಗೆ ಟ್ರಾಫಿಕ್ ಕಡಿಮೆ ಮಾಡುವ ಇನ್ನರ್ ರಿಂಗ್ ಮೆಟ್ರೋ ಮಾಡುವ ಬದಲಿಗೆ ಬೆಂಗಳೂರು ಹೊರವಲಯದಲ್ಲಿರುವ ತುಮಕೂರು, ದೇವನಹಳ್ಳಿ, ಹಾರೋಹಳ್ಳಿ, ಅತ್ತಿಬೆಲೆ, ಬಿಡದಿ, ತಾವರೆಕೆರೆ, ಹೊಸಕೋಟೆ ಮತ್ತು ಜಿಗಣಿಗೆ ಮೆಟ್ರೋ ಮಾರ್ಗಗಳ ಫಿಸಿಬಿಲಿಟಿ ಸ್ಟಡಿ ಮಾಡಲು ಸರ್ಕಾರ ನಿರ್ದೇಶನ ನೀಡಿದೆ.

ಪ್ರಯಾಣಿಕರು ಅಸಮಾಧಾನ 

ಈ ಇನ್ನರ್ ಮೆಟ್ರೋ ಆರಂಭವಾಗಿದ್ದರೆ ನಗರದ ಒಳಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಯುತ್ತಿತ್ತು. ಆದರೆ ಯೋಜನೆ ಕೈಬಿಟ್ಟಿದ್ದು ಸರಿಯಲ್ಲ ಎಂದು ಪ್ರಯಾಣಿಕರಾದ ಪರಮೇಶ್​​​ ಎನ್ನುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೇಶದ ಮೊದಲ ಅಂತಾರಾಜ್ಯ ಮೆಟ್ರೋ ಸಂಪರ್ಕಕ್ಕೆ ಕೊಕ್: ಹೊಸೂರು ಮೆಟ್ರೋ ಯೋಜನೆ ಕೈಬಿಟ್ಟ ಬಿಎಂಆರ್​ಸಿಎಲ್

ಒಟ್ಟಿನಲ್ಲಿ ನಗರದೊಳಗಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹಾಡಬೇಕಿದ್ದ ಇನ್ನರ್ ರಿಂಗ್ ಮೆಟ್ರೋ ಯೋಜನೆ ಮಾಡಲು ಬಿಎಂಆರ್​ಸಿಎಲ್​​ ಅಧಿಕಾರಿಗಳು ಯಾಕೋ ಮನಸ್ಸು ಮಾಡುವಂತೆ ಕಾಣುತ್ತಿಲ್ಲ. ಆದರೆ ಈ‌ ಮಾರ್ಗ ಓಪನ್ ಆಗಿದ್ದರೆ ದೊಡ್ಡ ಮಟ್ಟದಲ್ಲಿ ಜನರಿಗೆ ಸಹಾಯವಾಗುವುದರಲ್ಲಿ ಯಾವುದೇ ಅನುಮಾನವಿರಲಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?