AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Traffic: ಸರ್ಜರಿಗಾಗಿ ಬರೊಬ್ಬರಿ 3 ಕಿ.ಮೀ ಓಡಿದ ವೈದ್ಯ; ವೈರಲ್ ಆಯ್ತು ಡಾ ಗೋವಿಂದ್ ನಂದಕುಮಾರ್ ಓಟ

ಪಿತ್ತಕೋಶದ ಶಸ್ತ್ರ ಚಿಕಿತ್ಸೆ‌ ಟೈಮಿಂಗ್ಸ್ ನಿಗದಿಯಾಗಿತ್ತು. ಈ ಹಿನ್ನೆಲೆ ವೈದ್ಯ ಗೋವಿಂದ್ ಟ್ರಾಫಿಕ್‌ನಲ್ಲೇ ಇಳಿದು ಆಸ್ಪತ್ರೆಗೆ ಸುಮಾರು 3 ಕಿ.ಮೀ.ವರೆಗೂ ಓಡಿಕೊಂಡು ಹೋಗಿದ್ದಾರೆ.

Bengaluru Traffic: ಸರ್ಜರಿಗಾಗಿ ಬರೊಬ್ಬರಿ 3 ಕಿ.ಮೀ ಓಡಿದ ವೈದ್ಯ; ವೈರಲ್ ಆಯ್ತು ಡಾ ಗೋವಿಂದ್ ನಂದಕುಮಾರ್ ಓಟ
ಡಾ. ಗೋವಿಂದ್ ನಂದಕುಮಾರ್
TV9 Web
| Edited By: |

Updated on:Sep 12, 2022 | 10:42 AM

Share

ಬೆಂಗಳೂರು: ವೈದ್ಯರೊಬ್ಬರು ಸರ್ಜರಿಗಾಗಿ ಬರೊಬ್ಬರಿ 3ಕಿ.ಮೀ ಓಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಸರ್ಜಾಪುರ ರಸ್ತೆಯಲ್ಲಿರೋ ಮಣಿಪಾಲ್ ಆಸ್ಪತ್ರೆ ವೈದ್ಯ ಗೋವಿಂದ್ ನಂದಕುಮಾರ್. ದಿನ ನಿತ್ಯ ಕನ್ನಿಂಗ್‌ ಹ್ಯಾಂ ರೋಡ್‌ನಿಂದ ಸರ್ಜಾಪುರದ ಆಸ್ಪತ್ರೆಯವರೆಗೂ ಹೋಗ್ತಿದ್ರು. ಆಗಸ್ಟ್ 30 ರಂದು ಮಳೆಯಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿತ್ತು. ಹೀಗಾಗಿ 3 ಕಿ.ಮೀ.ವರೆಗೂ ಜಾಮ್ ಆಗಿತ್ತು. ಆಸ್ಪತ್ರೆ ತಲುಪಲು ಸುಮಾರು 1ಗಂಟೆಗೂ ಹೆಚ್ಚು ಸಮಯ ಬೇಕಾಗಿತ್ತು. ಅದೇ ದಿನ ಲಾಪ್ರೊಸ್ಕೋಪಿಕ್ ಅಂದ್ರೆ ಪಿತ್ತಕೋಶದ ಶಸ್ತ್ರ ಚಿಕಿತ್ಸೆ‌ ಟೈಮಿಂಗ್ಸ್ ನಿಗದಿಯಾಗಿತ್ತು. ಈ ಹಿನ್ನೆಲೆ ವೈದ್ಯ ಗೋವಿಂದ್ ಟ್ರಾಫಿಕ್‌ನಲ್ಲೇ ಇಳಿದು ಆಸ್ಪತ್ರೆಗೆ ಸುಮಾರು 3 ಕಿ.ಮೀ.ವರೆಗೂ ಓಡಿಕೊಂಡು ಹೋಗಿದ್ದಾರೆ. ಡಾಕ್ಟರ್ ಓಡಿಕೊಂಡು ಹೋಗಿರೋ‌ ವಿಡಿಯೋ ಈಗ ಫುಲ್​ ವೈರಲ್ ಆಗುತ್ತಿದೆ. ಸರಿಯಾದ ಸಮಯಕ್ಕೆ ಆಸ್ಪತ್ರೆ ತಲುಪಿ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯ ಗೋವಿಂದ್ ಮಾನವೀಯತೆ ಮೆರೆದಿದ್ದಾರೆ. ಜೊತೆಗೆ ಇತರೆ ವೈದ್ಯರಿಗೆ ಮಾದರಿಯಾಗಿದ್ದಾರೆ.

ಈ ಕುರಿತು ಮಾತನಾಡಿದ ಡಾ. ಗೋವಿಂದ್ ನಂದಕುಮಾರ್​ ನಾನು ಟ್ರಾಫಿಕ್​ನಲ್ಲು ಸಿಲುಕಿಕೊಂಡಿದ್ದೆ. ಜೊತೆಗೆ ಶಸ್ತ್ರ ಚಿಕಿತ್ಸೆ‌ಗೆ ತಡವಾಯಿತಲ್ಲವೆಂದು ನಾನು ಹೆದರಲು ಪ್ರಾರಂಭಿಸಿದೆ. ಗೂಗಲ್​ ಮ್ಯಾಪ್ ಹಾಕಿದ್ದರೂ, ಕಾರಿನಲ್ಲಿ ಹೋದರೆ ಅದು 45 ನಿಮಿಷ ಬೇಕು ಎಂದು ತೋರಿಸುತ್ತಿತ್ತು. ಹಾಗಾಗಿ ನಾನು ಓಡಿಕೊಂಡು ಆಸ್ಪತ್ರೆ ತಲುಪಿದೆ. ನನ್ನ ಕಾರು ಚಾಲಕ ಇದ್ದುದರಿಂದ ನಾನು ಕಾರು ಬಿಟ್ಟು ಬರಲು ಸಾಧ್ಯವಾಯಿತು. ಜೊತೆಗೆ ನಾನು ನಿಯಮಿತವಾಗಿ ಜಿಮ್​​ ಮಾಡುತ್ತಿದ್ದರಿಂದ ಓಡಲು ಸುಲಭವಾಯಿತು. ನಾನು ಆಸ್ಪತ್ರೆಗೆ 3 ಕಿ,ಮೀ ಓಡಿ ಸರಿಯಾದ ಸಮಯಕ್ಕೆ ಶಸ್ತ್ರ ಚಿಕಿತ್ಸೆ‌ಗೆ ಹಾಜರಾದೆ ಎಂದು ಡಾ. ಗೋವಿಂದ್ ನಂದಕುಮಾರ್ ಹೇಳಿದರು.

ಈ ರೀತಿಯಾಗಿ ಕಾರು ಬಿಟ್ಟು ಹೋಗುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ನಾನು ಶಸ್ತ್ರ ಚಿಕಿತ್ಸೆ‌ಗೆ ಕಾರು ಬಿಟ್ಟು ಹೋಗಿದ್ದೇನೆ. ಕೆಲವೊಮ್ಮೆ ಕಾಲ್ನಡಿಗೆಯಲ್ಲಿ ರೈಲು ಮಾರ್ಗವನ್ನು ದಾಟಿ ಹೋಗಿದ್ದೇನೆ ಎಂದು ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:27 am, Mon, 12 September 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್