AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಟ್ರಾಫಿಕ್‌ನಲ್ಲಿ ಸಿಲುಕಿ ಆಂಬುಲೆನ್ಸ್‌ ಪರದಾಟ; ಆಂಬುಲೆನ್ಸ್​ಗೂ ದಾರಿ ಮಾಡಿಕೊಡದ್ದಕ್ಕೆ ಪೋಷಕರ ಆಕ್ರೋಶ

ತುರ್ತು ಸಂದರ್ಭದಲ್ಲೂ ಟ್ರಾಫಿಕ್ ಸಂಚಾರ, ಟ್ರಾಫಿಕ್ ದಟ್ಟಣೆ ಸರಿ ಮಾಡದ ಸಂಚಾರಿ ಪೊಲೀಸರ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು: ಟ್ರಾಫಿಕ್‌ನಲ್ಲಿ ಸಿಲುಕಿ ಆಂಬುಲೆನ್ಸ್‌ ಪರದಾಟ; ಆಂಬುಲೆನ್ಸ್​ಗೂ ದಾರಿ ಮಾಡಿಕೊಡದ್ದಕ್ಕೆ ಪೋಷಕರ ಆಕ್ರೋಶ
ಟ್ರಾಫಿಕ್‌ನಲ್ಲಿ ಸಿಲುಕಿ ಆಂಬುಲೆನ್ಸ್‌ ಪರದಾಟ
TV9 Web
| Edited By: |

Updated on:Sep 21, 2021 | 4:43 PM

Share

ಬೆಂಗಳೂರು: ಟ್ರಾಫಿಕ್‌ನಲ್ಲಿ ಸಿಲುಕಿ ಆಂಬುಲೆನ್ಸ್‌ ಪರದಾಟ ಪಟ್ಟ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಟ್ರಾಫಿಕ್‌ ಜಾಂ ಆದಕಾರಣ ಆಂಬುಲೆನ್ಸ್ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಂಬುಲೆನ್ಸ್​ನಲ್ಲಿ ಇದ್ದ ರೋಗಿ ತೀವ್ರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ದರನ್ನ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಟ್ರಾಫಿಕ್ ಸಮಸ್ಯೆಗೆ ಸಿಲುಕಿದೆ.

ನೆಲಮಂಗಲದ ಮೋಟಗಾನಹಳ್ಳಿಯ 78 ವರ್ಷದ ವೃದ್ದ ಒಬಳಯ್ಯ ತೀವ್ರ ಅಸ್ವಸ್ಥ ಆಗಿದ್ದರು. ನೆಲಮಂಗಲದಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಆಂಬುಲೆನ್ಸ್ ಹೋಗುತ್ತಿತ್ತು. ತುರ್ತು ಸಂದರ್ಭದಲ್ಲೂ ಟ್ರಾಫಿಕ್ ಸಂಚಾರ, ಟ್ರಾಫಿಕ್ ದಟ್ಟಣೆ ಸರಿ ಮಾಡದ ಸಂಚಾರಿ ಪೊಲೀಸರ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ ರಸ್ತೆ ದುರಸ್ತಿ ಬಗ್ಗೆ ಗೌರವ್ ಗುಪ್ತಾ ಮಾಹಿತಿ ಬೆಂಗಳೂರು ನಗರ, ಬಿಬಿಎಂಪಿ ವ್ಯಾಪ್ತಿಯ ರಸ್ತೆ ದುರಸ್ತಿ ಕಾರ್ಯಗಳ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಂಗಳವಾರ ಮಾತನಾಡಿದ್ದಾರೆ. ಸೆಪ್ಟೆಂಬರ್ 20 ರ ಒಳಗೆ ರಸ್ತೆ ಗುಂಡಿ ಮುಚ್ಚಲು ಸಚಿವರ ಸೂಚನೆ ಇದೆ. ಅದರಂತೆ ಮುಖ್ಯರಸ್ತೆ, ಅಡ್ಡ ರಸ್ತೆಗಳಲ್ಲಿನ ಗುಂಡಿ ಮುಚ್ಚಲಾಗಿದೆ. ಸೆಪ್ಟೆಂಬರ್ 6 ರಂದು ಬೆಂಗಳೂರಿನಲ್ಲಿ 1,332 ರಸ್ತೆ ಗುಂಡಿ ಇತ್ತು. ಸದ್ಯ ನಗರದಲ್ಲಿ ಬಹುತೇಕ ಗುಂಡಿಗಳನ್ನು ಮುಚ್ಚಲಾಗಿದೆ. ಬೆಂಗಳೂರಿನಲ್ಲಿ ಈಗ 194 ರಸ್ತೆ ಗುಂಡಿಗಳು ಬಾಕಿ ಇವೆ ಎಂದು ಬಿಬಿಎಂಪಿ ಆಯುಕ್ತ ಗೌರವ್​​ ಗುಪ್ತಾ ಹೇಳಿದ್ದಾರೆ.

ರಸ್ತೆ ಗುಂಡಿಗಳಿಗೆ ಯಾರು ಹೊಣೆ ಎಂಬ ವಿಚಾರವಾಗಿ ಗೌರವ್ ಗುಪ್ತಾ ಪ್ರತಿಕ್ರಿಯಿಸಿದ್ದಾರೆ. ಮುಖ್ಯ ರಸ್ತೆಗಳ ನಿರ್ವಹಣೆ ಮಾಡಿಲ್ಲ. ವೈಟ್ ಟಾಪಿಂಗ್ ಮಾಡ್ತೇವೆ ಎಂದು ರಸ್ತೆ ನಿರ್ಮಾಣ ಮಾಡಿಲ್ಲ ಹೀಗಾಗಿ ಹಾಳಾಗಿದೆ. ಮೆಟ್ರೋ ಕಾಮಗಾರಿಗಾಗಿ ರಸ್ತೆ ನಿರ್ವಹಣೆ ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಗುಂಡಿ ತೆಗೆದು ಕಾಟಾಚಾರಕ್ಕೆ ಬ್ಯಾರಿಕೇಡ್ ಅಳವಡಿಕೆ; ನೈಟ್ ಶಿಫ್ಟ್ ಮುಗಿಸಿ ಬರುತ್ತಿದ್ದ ಮೆಕ್ಯಾನಿಕ್ ಗುಂಡಿಗೆ ಬಿದ್ದು ಸಾವು

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳಲ್ಲಿನ ಗುಂಡಿ ಮುಚ್ಚಲಾಗಿದೆ: ಗೌರವ್ ಗುಪ್ತಾ ಮಾಹಿತಿ

Published On - 4:18 pm, Tue, 21 September 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ